<p><strong>ಹಾಸನ: `</strong>ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಕ್ಕಾಗಿ ಸಕಲೇಶಪುರ ಆರ್ಎಫ್ಓ ರತ್ನಪ್ರಭಾ ಹಾಗೂ ಫಾರೆಸ್ಟರ್ ಚಂದ್ರೇಗೌಡ ಅವರು ನನ್ನ ವಿರುದ್ಧ ಸೇಡಿನಿಂದ ಕಿರುಕುಳ ನೀಡುತ್ತಿದ್ದಾರೆ~ ಎಂದು ಅರಣ್ಯ ಇಲಾಖೆಯಲ್ಲಿ 25ವರ್ಷಗಳಿಂದ ಕೆಲಸ ಮಾಡುತ್ತಿರುವ ಸುರೇಶ ಎಂಬುವವರು ಆರೋಪಿಸಿದ್ದಾರೆ.<br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಆರೋಪ ಮಾಡಿದರು.<br /> <br /> `ಈ ಇಬ್ಬರು ಅಧಿಕಾರಿಗಳು ಅರಣ್ಯ ಲೂಟಿಮಾಡುತ್ತಿರುವುದನ್ನು ವಿರೋಧಿಸಿ ನಾನು ಲೋಕಾಯುಕ್ತರಿಗೆ ದೂರು ನೀಡಿದ್ದೆ, ಈ ಘಟನೆಯ ಬಳಿಕ ಅಧಿಕಾರಿಗಳು ನನಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸುತ್ತಿದ್ದಾರೆ. ವೇತನವನ್ನೂ ನೀಡುತ್ತಿಲ್ಲ. ನನ್ನ ಮೇಲೆ ಒಮ್ಮೆ ಹಲ್ಲೆಯೂ ನಡೆದಿತ್ತು.<br /> <br /> ಆ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ~ ಎಂದು ತಿಳಿಸಿದರು. ಈ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದು ನನಗೆ ರಕ್ಷಣೆ ನೀಡಬೇಕು, ಹಾಸನಕ್ಕೆ ವರ್ಗಾವಣೆ ಮಾಡಬೇಕು ಹಾಗೂ ವೇತನ ಸಿಗುವಂತೆ ಮಾಡಬೇಕು ಎಂದು ಮನವಿ ಮಾಡಿದ್ದೇನೆ ಎಂದು ಸುರೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: `</strong>ತಮ್ಮ ವಿರುದ್ಧ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದಕ್ಕಾಗಿ ಸಕಲೇಶಪುರ ಆರ್ಎಫ್ಓ ರತ್ನಪ್ರಭಾ ಹಾಗೂ ಫಾರೆಸ್ಟರ್ ಚಂದ್ರೇಗೌಡ ಅವರು ನನ್ನ ವಿರುದ್ಧ ಸೇಡಿನಿಂದ ಕಿರುಕುಳ ನೀಡುತ್ತಿದ್ದಾರೆ~ ಎಂದು ಅರಣ್ಯ ಇಲಾಖೆಯಲ್ಲಿ 25ವರ್ಷಗಳಿಂದ ಕೆಲಸ ಮಾಡುತ್ತಿರುವ ಸುರೇಶ ಎಂಬುವವರು ಆರೋಪಿಸಿದ್ದಾರೆ.<br /> ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ಆರೋಪ ಮಾಡಿದರು.<br /> <br /> `ಈ ಇಬ್ಬರು ಅಧಿಕಾರಿಗಳು ಅರಣ್ಯ ಲೂಟಿಮಾಡುತ್ತಿರುವುದನ್ನು ವಿರೋಧಿಸಿ ನಾನು ಲೋಕಾಯುಕ್ತರಿಗೆ ದೂರು ನೀಡಿದ್ದೆ, ಈ ಘಟನೆಯ ಬಳಿಕ ಅಧಿಕಾರಿಗಳು ನನಗೆ ಕರ್ತವ್ಯ ನಿರ್ವಹಿಸಲು ಅಡ್ಡಿಪಡಿಸುತ್ತಿದ್ದಾರೆ. ವೇತನವನ್ನೂ ನೀಡುತ್ತಿಲ್ಲ. ನನ್ನ ಮೇಲೆ ಒಮ್ಮೆ ಹಲ್ಲೆಯೂ ನಡೆದಿತ್ತು.<br /> <br /> ಆ ಬಗ್ಗೆ ಠಾಣೆಯಲ್ಲಿ ದೂರು ದಾಖಲಿಸಿದ್ದೇನೆ~ ಎಂದು ತಿಳಿಸಿದರು. ಈ ಬಗ್ಗೆ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಪತ್ರ ಬರೆದು ನನಗೆ ರಕ್ಷಣೆ ನೀಡಬೇಕು, ಹಾಸನಕ್ಕೆ ವರ್ಗಾವಣೆ ಮಾಡಬೇಕು ಹಾಗೂ ವೇತನ ಸಿಗುವಂತೆ ಮಾಡಬೇಕು ಎಂದು ಮನವಿ ಮಾಡಿದ್ದೇನೆ ಎಂದು ಸುರೇಶ್ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>