<p><strong>ಹಾಸನ: </strong>ಅರಣ್ಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅರಸೀಕೆರೆ ಬಳಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ದೊಡ್ಡಹಟ್ಟಿ ಗ್ರಾಮದ ರಾಮಯ್ಯ ಆತ್ಮಹತ್ಯೆಗೆ ಯತ್ನಿಸಿದವರು. ಈತನ ಕುಟುಂಬದವರ ಮೇಲೂ ಅರಣ್ಯ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. <br /> <br /> ಅಸ್ವಸ್ಥಗೊಂಡಿರುವ ರಾಮಯ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಹಲ್ಲೆಗೊಳಗಾದ ರಾಮಯ್ಯನ ಕುಟುಂಬದ ಮಹಿಳೆಯರು ಆಸ್ಪತ್ರೆಗೆ ದಾಖಲಾಗಿದ್ದಾರೆ. <br /> <br /> ರಾಮಯ್ಯ ತನ್ನ 2 ಎಕರೆ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಜೀವನ ಸಾಗಿ ಸು ತ್ತಿದ್ದ. ಈ ಭೂಮಿಯನ್ನು ಸರ್ಕಾರ ರಾಮಯ್ಯನ ಹೆಸರಿಗೆ ಮಂಜೂರು ಮಾಡಿದೆ. ಅದೇ ಆಸ್ತಿ ಮೇಲೆ ಈ ಕುಟುಂಬ ಸಾಲ ಪಡೆದು ಭೂಕಂದಾಯ ಪಾವತಿಸಿದೆ.<br /> <br /> ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ಎಕರೆ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದು ಎಂದು ಕಿರುಕುಳ ನೀಡುತ್ತಿದ್ದರು. ಈ ಜಮೀನು ಬಿಟ್ಟು ಹೊರ ಹೋಗುವಂತೆ ತೊಂದರೆ ನೀಡುತ್ತಿದ್ದರು ಎಂದು ರೈತ ಕುಟುಂಬ ಆರೋಪಿಸಿದೆ. <br /> <br /> ಭಾನುವಾರ ಜಮೀನಿನ ಬಳಿ ಆಗಮಿಸಿದ್ದ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಮಯ್ಯ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯಿಂದ ಬೇಸತ್ತ ರಾಮಯ್ಯ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಾವು ಬದುಕಿನ ನಡುವೆ ರಾಮಯ್ಯ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯು ತ್ತಿದ್ದು, ಈ ಘಟನೆಗೆ ಅರಣ್ಯ ಇಲಾಖೆಯೇ ಹೊಣೆ ಎಂದು ಅತನ ಕುಟುಂಬ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಾಸನ: </strong>ಅರಣ್ಯ ಅಧಿಕಾರಿಗಳ ಕಿರುಕುಳದಿಂದ ಬೇಸತ್ತು ರೈತನೊಬ್ಬ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಅರಸೀಕೆರೆ ಬಳಿ ನಡೆದಿದೆ. ಅರಸೀಕೆರೆ ತಾಲ್ಲೂಕಿನ ಗಂಡಸಿ ಹೋಬಳಿಯ ದೊಡ್ಡಹಟ್ಟಿ ಗ್ರಾಮದ ರಾಮಯ್ಯ ಆತ್ಮಹತ್ಯೆಗೆ ಯತ್ನಿಸಿದವರು. ಈತನ ಕುಟುಂಬದವರ ಮೇಲೂ ಅರಣ್ಯ ಅಧಿಕಾರಿಗಳು ಹಲ್ಲೆ ನಡೆಸಿದ್ದಾರೆ ಎಂದು ದೂರಲಾಗಿದೆ. <br /> <br /> ಅಸ್ವಸ್ಥಗೊಂಡಿರುವ ರಾಮಯ್ಯ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿಯಿಂದ ಹಲ್ಲೆಗೊಳಗಾದ ರಾಮಯ್ಯನ ಕುಟುಂಬದ ಮಹಿಳೆಯರು ಆಸ್ಪತ್ರೆಗೆ ದಾಖಲಾಗಿದ್ದಾರೆ. <br /> <br /> ರಾಮಯ್ಯ ತನ್ನ 2 ಎಕರೆ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಜೀವನ ಸಾಗಿ ಸು ತ್ತಿದ್ದ. ಈ ಭೂಮಿಯನ್ನು ಸರ್ಕಾರ ರಾಮಯ್ಯನ ಹೆಸರಿಗೆ ಮಂಜೂರು ಮಾಡಿದೆ. ಅದೇ ಆಸ್ತಿ ಮೇಲೆ ಈ ಕುಟುಂಬ ಸಾಲ ಪಡೆದು ಭೂಕಂದಾಯ ಪಾವತಿಸಿದೆ.<br /> <br /> ಆದರೆ ಅರಣ್ಯ ಇಲಾಖೆ ಅಧಿಕಾರಿಗಳು ಎರಡು ಎಕರೆ ಭೂಮಿ ಅರಣ್ಯ ಇಲಾಖೆಗೆ ಸೇರಿದ್ದು ಎಂದು ಕಿರುಕುಳ ನೀಡುತ್ತಿದ್ದರು. ಈ ಜಮೀನು ಬಿಟ್ಟು ಹೊರ ಹೋಗುವಂತೆ ತೊಂದರೆ ನೀಡುತ್ತಿದ್ದರು ಎಂದು ರೈತ ಕುಟುಂಬ ಆರೋಪಿಸಿದೆ. <br /> <br /> ಭಾನುವಾರ ಜಮೀನಿನ ಬಳಿ ಆಗಮಿಸಿದ್ದ ಅರಣ್ಯ ಅಧಿಕಾರಿಗಳು ಮತ್ತು ಸಿಬ್ಬಂದಿ ರಾಮಯ್ಯ ಮತ್ತು ಅವರ ಇಬ್ಬರು ಹೆಣ್ಣು ಮಕ್ಕಳ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಘಟನೆಯಿಂದ ಬೇಸತ್ತ ರಾಮಯ್ಯ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸಾವು ಬದುಕಿನ ನಡುವೆ ರಾಮಯ್ಯ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆ ಯು ತ್ತಿದ್ದು, ಈ ಘಟನೆಗೆ ಅರಣ್ಯ ಇಲಾಖೆಯೇ ಹೊಣೆ ಎಂದು ಅತನ ಕುಟುಂಬ ಆರೋಪಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>