<p><strong>ಮುಂಡಗೋಡ:</strong> ಅನುಸೂಚಿತ ಬುಡಕಟ್ಟುಗಳ ಅಧಿನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಪ್ರತಿ ಕುಟುಂಬಕ್ಕೆ ನಾಲ್ಕು ಹೆಕ್ಟೇರ್ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಸಿದ್ದಿ ವಿಕಾಸ ಹಿತರಕ್ಷಣಾ ಟ್ರಸ್ಟ್ ಹಾಗೂ ಗ್ರೀನ್ ಇಂಡಿಯಾ ಟ್ರಸ್ಟ್ನ ಸದಸ್ಯರು ಉಪತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು.<br /> <br /> ಅರಣ್ಯ ಹಕ್ಕು ಮಾನ್ಯ ಮಾಡುವ ಅಧಿನಿಯಮದಲ್ಲಿ ಅರಣ್ಯದಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರಿಗೆ ಅರಣ್ಯ ಜಮೀನಿನ ಹಕ್ಕು ಪತ್ರ ಕೊಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.<br /> <br /> ತಾಲ್ಲೂಕಿನಾದ್ಯಂತ ಈಗಾಗಲೇ 137 ಕುಟುಂಬಗಳು ಅರ್ಜಿ ಸಲ್ಲಿಸಿದ್ದು ಕೇವಲ 8 ಜನರಿಗೆ ಹಕ್ಕು ಪತ್ರ ನೀಡಲಾಗಿದೆ. ಸರ್ಕಾರ ನೀಡುವ ಸೌಲಭ್ಯಗಳಿಂದ ಬುಡಕಟ್ಟು ಜನಾಂಗವು ವಂಚಿತವಾಗಿದೆ. ಸರ್ಕಾರ ನಿಗದಿಪಡಿಸಿದ ಎಲ್ಲ ಅರ್ಹತೆಗಳನ್ನು ಹೊಂದಿ ಅವಶ್ಯಕ ದಾಖಲೆಗಳನ್ನು ಸಲ್ಲಿಸಿದ್ದರೂ ಕೇವಲ 8 ಕುಟುಂಬಗಳಿಗೆ ಹಕ್ಕು ಪತ್ರ ನೀಡಿರುವುದು ದುರದೃಷ್ಟಕರ ಎಂದರು.<br /> ಹಕ್ಕುಪತ್ರ ಸಿಗಬೇಕಾದ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಯಲ್ಲಿ ವಿಳಂಬ ನೀತಿ ಅನುಸರಿಸಲಾಗಿದೆ ಎಂದು ಸದಸ್ಯರು ದೂರಿದ್ದಾರೆ.<br /> <br /> ಸರ್ಕಾರ ಕೂಡಲೇ ಬುಡಕಟ್ಟು ಜನಾಂಗದವರ ಅರಣ್ಯ ಹಕ್ಕುಪತ್ರ ನೀಡುವಲ್ಲಿ ವಿಳಂಬ ನೀತಿಯನ್ನು ಸರಿಪಡಿಸಿ ಅರ್ಜಿ ಸಲ್ಲಿಸಿದವರಿಗೆ ಅರಣ್ಯ ಭೂಮಿ ಹಕ್ಕುಪತ್ರ ನೀಡಬೇಕು. ಸರ್ವೇ ಯಾದಿಯಿಂದ ತಪ್ಪಿಹೋದ ಕುಟುಂಬಗಳಿಗೂ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.<br /> <br /> ಗ್ರೀನ್ ಇಂಡಿಯಾ ಟ್ರಸ್ಟ್ನ ಇಬ್ರಾಹಿಂಸಾಬ್ ಎಂ. ಸಿದ್ದಿ, ಇಮಾಮ್ ಎ.ಕೆ.ಸಿದ್ದಿ, ಫ್ರಾನ್ಸಿಸ್ ಜೂಜೆ, ಸಾವೇರ ಸಂತಾನ ಸಿದ್ದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಂಡಗೋಡ:</strong> ಅನುಸೂಚಿತ ಬುಡಕಟ್ಟುಗಳ ಅಧಿನಿಯಮವನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಿ ಪ್ರತಿ ಕುಟುಂಬಕ್ಕೆ ನಾಲ್ಕು ಹೆಕ್ಟೇರ್ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಸಿದ್ದಿ ವಿಕಾಸ ಹಿತರಕ್ಷಣಾ ಟ್ರಸ್ಟ್ ಹಾಗೂ ಗ್ರೀನ್ ಇಂಡಿಯಾ ಟ್ರಸ್ಟ್ನ ಸದಸ್ಯರು ಉಪತಹಶೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಗುರುವಾರ ಮನವಿ ಸಲ್ಲಿಸಿದರು.<br /> <br /> ಅರಣ್ಯ ಹಕ್ಕು ಮಾನ್ಯ ಮಾಡುವ ಅಧಿನಿಯಮದಲ್ಲಿ ಅರಣ್ಯದಲ್ಲಿ ವಾಸಿಸುವ ಬುಡಕಟ್ಟು ಜನಾಂಗದವರಿಗೆ ಅರಣ್ಯ ಜಮೀನಿನ ಹಕ್ಕು ಪತ್ರ ಕೊಡಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.<br /> <br /> ತಾಲ್ಲೂಕಿನಾದ್ಯಂತ ಈಗಾಗಲೇ 137 ಕುಟುಂಬಗಳು ಅರ್ಜಿ ಸಲ್ಲಿಸಿದ್ದು ಕೇವಲ 8 ಜನರಿಗೆ ಹಕ್ಕು ಪತ್ರ ನೀಡಲಾಗಿದೆ. ಸರ್ಕಾರ ನೀಡುವ ಸೌಲಭ್ಯಗಳಿಂದ ಬುಡಕಟ್ಟು ಜನಾಂಗವು ವಂಚಿತವಾಗಿದೆ. ಸರ್ಕಾರ ನಿಗದಿಪಡಿಸಿದ ಎಲ್ಲ ಅರ್ಹತೆಗಳನ್ನು ಹೊಂದಿ ಅವಶ್ಯಕ ದಾಖಲೆಗಳನ್ನು ಸಲ್ಲಿಸಿದ್ದರೂ ಕೇವಲ 8 ಕುಟುಂಬಗಳಿಗೆ ಹಕ್ಕು ಪತ್ರ ನೀಡಿರುವುದು ದುರದೃಷ್ಟಕರ ಎಂದರು.<br /> ಹಕ್ಕುಪತ್ರ ಸಿಗಬೇಕಾದ ಕುಟುಂಬಗಳಿಗೆ ಹಕ್ಕು ಪತ್ರ ವಿತರಣೆಯಲ್ಲಿ ವಿಳಂಬ ನೀತಿ ಅನುಸರಿಸಲಾಗಿದೆ ಎಂದು ಸದಸ್ಯರು ದೂರಿದ್ದಾರೆ.<br /> <br /> ಸರ್ಕಾರ ಕೂಡಲೇ ಬುಡಕಟ್ಟು ಜನಾಂಗದವರ ಅರಣ್ಯ ಹಕ್ಕುಪತ್ರ ನೀಡುವಲ್ಲಿ ವಿಳಂಬ ನೀತಿಯನ್ನು ಸರಿಪಡಿಸಿ ಅರ್ಜಿ ಸಲ್ಲಿಸಿದವರಿಗೆ ಅರಣ್ಯ ಭೂಮಿ ಹಕ್ಕುಪತ್ರ ನೀಡಬೇಕು. ಸರ್ವೇ ಯಾದಿಯಿಂದ ತಪ್ಪಿಹೋದ ಕುಟುಂಬಗಳಿಗೂ ಹೊಸದಾಗಿ ಅರ್ಜಿ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.<br /> <br /> ಗ್ರೀನ್ ಇಂಡಿಯಾ ಟ್ರಸ್ಟ್ನ ಇಬ್ರಾಹಿಂಸಾಬ್ ಎಂ. ಸಿದ್ದಿ, ಇಮಾಮ್ ಎ.ಕೆ.ಸಿದ್ದಿ, ಫ್ರಾನ್ಸಿಸ್ ಜೂಜೆ, ಸಾವೇರ ಸಂತಾನ ಸಿದ್ದಿ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>