<p>ಕಾರವಾರ: ಕಳೆದ ಹತ್ತು ದಿನಗಳಿಂದ ತಾಲ್ಲೂಕಿನ ವಿವಿಧೆಡೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟ ಗಣೇಶಮೂರ್ತಿಗಳ ವಿಸರ್ಜನೆ ಇಲ್ಲಿಯ ಅರಬ್ಬಿ ಸಮುದ್ರದಲ್ಲಿ ಭಾನುವಾರ ನಡೆಯಿತು.<br /> <br /> ಪಡುವಣದಲ್ಲಿ ಸೂರ್ಯ ಮರೆಯಾಗುತ್ತಿದ್ದಂತೆ ಕಡಲತೀರದಲ್ಲಿ ನೆರೆದಿದ್ದ ಸಾವಿರಾರು ಭಕ್ತರು `ಗಣಪತಿ ಬಪ್ಪ ಮೊರಯಾ ಪುಡ್ಚೆ ವರ್ಷಾ ಲೌಕರಿಯಾ~ ಎಂದು ಜೈಕಾರ ಹಾಕುತ್ತ ಮೂರ್ತಿಗಳನ್ನು ಸಮುದ್ರದಲ್ಲಿ ವಿಸರ್ಜಿಸಿದರು.<br /> <br /> ಸಂಜೆ ನಾಲ್ಕು ಗಂಟೆ ಸುಮಾರಿಗೆ ವಿವಿಧರೂಪಿ ಗಣೇಶಮೂರ್ತಿಗಳ ಮೆರವಣಿಗೆ ಪ್ರಾರಂಭವಾಯಿತು. ನಗರದ ಕೋಡಿಭಾಗ, ಕಾಜುಭಾಗ, ನಂದನಗದ್ದಾ, ಶಿರವಾಡ, ಅಟೊ ಚಾಲಕ ಮತ್ತು ಮಾಲೀಕರ ಸಂಘ, ಮಾರುತಿಗಲ್ಲಿ ಹೀಗೆ ಹತ್ತಾರು ಸಮಿತಿಗಳು ಪ್ರತಿಷ್ಠಾಪಿಸಿದ ಗಣೇಶಮೂರ್ತಿಗಳು ನಗರತುಂಬ ಪ್ರದಕ್ಷಿಣೆ ಹಾಕಿ ನಂತರ ಕಡಲತೀರದತ್ತ ಸಾಗಿದವು. <br /> <br /> ಒಂದು ವಾಹನದಲ್ಲಿ ಗಣೇಶಮೂರ್ತಿ ಹಾಗೂ ಇನ್ನೊಂದು ವಾಹನದಲ್ಲಿ ಲೌಡ್ ಸ್ಪೀಕರ್ಗಳನ್ನಿಟ್ಟು ಹಿಂದಿ, ಕನ್ನಡ, ಮರಾಠಿ ಚಿತ್ರದ ಹಾಡಿಗೆ ಹೆಜ್ಜೆ ಹಾಕುತ್ತ, ಗುಲಾಲು ಎರಚಿ ಸಂಭ್ರಮಿಸುತ್ತ ಭಕ್ತರು ಮೂರ್ತಿಯೊಂದಿಗೆ ಸಾಗಿದರು.<br /> <br /> ವರ್ಷಕ್ಕೆ ಒಂದು ಬಾರಿ ನಡೆಯುವ ಗಣೇಶ ವಿಸರ್ಜನೆಯ ವೈಭವ ನೋಡಲು ನೋಡಲು ನೋಡಲು ಮುಖ್ಯ ರಸ್ತೆಯ ಎರಡೂ ಬದಿಯಲ್ಲಿ ಜನರು ಕಿಕ್ಕಿರಿದು ಸೇರಿದ್ದರು. ನಗರಸಭೆ ವಾಣಿಜ್ಯ ಸಂಕೀರ್ಣದ ಮೇಲೆ ನಿಂತ ಜನರು ಮೆರವಣಿಗೆಯಲ್ಲಿ ಬಂದ ಗಣೇಶನನ್ನು ನೋಡಿ ನಮಿಸಿದರು.<br /> <br /> ಎಂದಿನಂತೆ ಇಲ್ಲಿಯ ಮಾರುತಿ ಮಂದಿರದಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಯ ವಿಸರ್ಜನೆ ಮೊದಲು ನಡೆಯಿತು. ವಿಸರ್ಜನೆ ಶಾಂತಿಯುತವಾಗಿ ನಡೆಯಲು ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕಾರವಾರ: ಕಳೆದ ಹತ್ತು ದಿನಗಳಿಂದ ತಾಲ್ಲೂಕಿನ ವಿವಿಧೆಡೆ ಸಾರ್ವಜನಿಕ ಗಣೇಶೋತ್ಸವ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲ್ಪಟ್ಟ ಗಣೇಶಮೂರ್ತಿಗಳ ವಿಸರ್ಜನೆ ಇಲ್ಲಿಯ ಅರಬ್ಬಿ ಸಮುದ್ರದಲ್ಲಿ ಭಾನುವಾರ ನಡೆಯಿತು.<br /> <br /> ಪಡುವಣದಲ್ಲಿ ಸೂರ್ಯ ಮರೆಯಾಗುತ್ತಿದ್ದಂತೆ ಕಡಲತೀರದಲ್ಲಿ ನೆರೆದಿದ್ದ ಸಾವಿರಾರು ಭಕ್ತರು `ಗಣಪತಿ ಬಪ್ಪ ಮೊರಯಾ ಪುಡ್ಚೆ ವರ್ಷಾ ಲೌಕರಿಯಾ~ ಎಂದು ಜೈಕಾರ ಹಾಕುತ್ತ ಮೂರ್ತಿಗಳನ್ನು ಸಮುದ್ರದಲ್ಲಿ ವಿಸರ್ಜಿಸಿದರು.<br /> <br /> ಸಂಜೆ ನಾಲ್ಕು ಗಂಟೆ ಸುಮಾರಿಗೆ ವಿವಿಧರೂಪಿ ಗಣೇಶಮೂರ್ತಿಗಳ ಮೆರವಣಿಗೆ ಪ್ರಾರಂಭವಾಯಿತು. ನಗರದ ಕೋಡಿಭಾಗ, ಕಾಜುಭಾಗ, ನಂದನಗದ್ದಾ, ಶಿರವಾಡ, ಅಟೊ ಚಾಲಕ ಮತ್ತು ಮಾಲೀಕರ ಸಂಘ, ಮಾರುತಿಗಲ್ಲಿ ಹೀಗೆ ಹತ್ತಾರು ಸಮಿತಿಗಳು ಪ್ರತಿಷ್ಠಾಪಿಸಿದ ಗಣೇಶಮೂರ್ತಿಗಳು ನಗರತುಂಬ ಪ್ರದಕ್ಷಿಣೆ ಹಾಕಿ ನಂತರ ಕಡಲತೀರದತ್ತ ಸಾಗಿದವು. <br /> <br /> ಒಂದು ವಾಹನದಲ್ಲಿ ಗಣೇಶಮೂರ್ತಿ ಹಾಗೂ ಇನ್ನೊಂದು ವಾಹನದಲ್ಲಿ ಲೌಡ್ ಸ್ಪೀಕರ್ಗಳನ್ನಿಟ್ಟು ಹಿಂದಿ, ಕನ್ನಡ, ಮರಾಠಿ ಚಿತ್ರದ ಹಾಡಿಗೆ ಹೆಜ್ಜೆ ಹಾಕುತ್ತ, ಗುಲಾಲು ಎರಚಿ ಸಂಭ್ರಮಿಸುತ್ತ ಭಕ್ತರು ಮೂರ್ತಿಯೊಂದಿಗೆ ಸಾಗಿದರು.<br /> <br /> ವರ್ಷಕ್ಕೆ ಒಂದು ಬಾರಿ ನಡೆಯುವ ಗಣೇಶ ವಿಸರ್ಜನೆಯ ವೈಭವ ನೋಡಲು ನೋಡಲು ನೋಡಲು ಮುಖ್ಯ ರಸ್ತೆಯ ಎರಡೂ ಬದಿಯಲ್ಲಿ ಜನರು ಕಿಕ್ಕಿರಿದು ಸೇರಿದ್ದರು. ನಗರಸಭೆ ವಾಣಿಜ್ಯ ಸಂಕೀರ್ಣದ ಮೇಲೆ ನಿಂತ ಜನರು ಮೆರವಣಿಗೆಯಲ್ಲಿ ಬಂದ ಗಣೇಶನನ್ನು ನೋಡಿ ನಮಿಸಿದರು.<br /> <br /> ಎಂದಿನಂತೆ ಇಲ್ಲಿಯ ಮಾರುತಿ ಮಂದಿರದಲ್ಲಿ ಪ್ರತಿಷ್ಠಾಪಿಸಿದ ಗಣೇಶ ಮೂರ್ತಿಯ ವಿಸರ್ಜನೆ ಮೊದಲು ನಡೆಯಿತು. ವಿಸರ್ಜನೆ ಶಾಂತಿಯುತವಾಗಿ ನಡೆಯಲು ಸೂಕ್ತ ಬಂದೋಬಸ್ತ್ ಕಲ್ಪಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>