<p><strong>ನವದೆಹಲಿ (ಐಎಎನ್ಎಸ್):</strong> ಕಳೆದ ಫೆಬ್ರವರಿಯಲ್ಲಿ ನಡೆದ ಚುನಾವಣೆಯ ಪ್ರಚಾರದ ವೇಳೆ ಸಂಸದರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ತಂಡದ ಸದಸ್ಯ ಅರವಿಂದ ಕೇಜ್ರಿವಾಲ್ ಅವರಿಗೆ ಶನಿವಾರ ಲೋಕಸಭೆಯ ಸಚಿವಾಲಯವು ಹಕ್ಕುಚ್ಯುತಿ ನೋಟಿಸ್ ಜಾರಿ ಮಾಡಿದೆ.<br /> <br /> ಚುನಾವಣಾ ಪ್ರಚಾರದ ವೇಳೆ ಕೇಜ್ರಿವಾಲ್ ಅವರು ಸಂಸದರನ್ನು `ಅತ್ಯಾಚಾರಿಗಳು, ಹಂತಕರು ಹಾಗೂ ಲೂಟಿಕೋರರು~ ಎಂದು ಹೇಳಿದ್ದು, ಅವರ ವಿರುದ್ದ ಕ್ರಮ ಜರುಗಿಸುವಂತೆ ಮಧ್ಯಪ್ರದೇಶದ ಕಾಂಗ್ರೆಸ್ ಸಂಸದ ಸಜ್ಜನ್ ಸಿಂಗ್ ವರ್ಮಾ ಅವರು ಮಾರ್ಚ್ 12 ರಂದು ಸಚಿವಾಲಯಕ್ಕೆ ದೂರು ಸಲ್ಲಿಸಿದ್ದರು.<br /> <br /> ಸಚಿವಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ವರ್ಮಾ ಅವರು ಕೇಜ್ರಿವಾಲ್ ಅವರ ಹೇಳಿಕೆಯನ್ನು `ಪ್ರಜಾಪ್ರಭುತ್ವದ ಮೇಲಿನ ದಾಳಿ~ ಎಂದು ಖಂಡಿಸಿ ಅವರಿಗೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.<br /> <br /> ಫೆಬ್ರುವರಿ 25 ರಂದು ಚುನಾವಣೆಯ ಪ್ರಚಾರದ ವೇಳೆ ಕೇಜ್ರಿವಾಲ್ ಅವರು `ಸಂಸತ್ತಿನಲ್ಲಿರುವ 163 ಸಂಸದರ ವಿರುದ್ಧ ಘೋರ ಅಪರಾಧಗಳ ಆರೋಪವಿದೆ. ಸಂಸತ್ತಿನಲ್ಲಿ ಅತ್ಯಾಚಾರಿಗಳು, ಹಂತಕರು ಹಾಗೂ ಲೂಟಿಕೋರರು ತುಂಬಿಕೊಂಡಿದ್ದಾರೆ. ಅವರಿಂದ ಸಂಸತ್ತಿನಲ್ಲಿ ಲೋಕಪಾಲ್ ಮಸೂದೆ ಮಂಡನೆಯಾಗುವುದನ್ನು ನೀವು ಹೇಗೆ ನಿರೀಕ್ಷಿಸುತ್ತೀರಿ? ಬಡತನ ಹಾಗೂ ಭ್ರಷ್ಟಾಚಾರದಿಂದ ನೀವು ಮುಕ್ತಿ ಹೊಂದುವುದನ್ನು ಹೇಗೆ ಎದುರು ನೋಡುತ್ತಿರಿ~ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಐಎಎನ್ಎಸ್):</strong> ಕಳೆದ ಫೆಬ್ರವರಿಯಲ್ಲಿ ನಡೆದ ಚುನಾವಣೆಯ ಪ್ರಚಾರದ ವೇಳೆ ಸಂಸದರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ಸಾಮಾಜಿಕ ಕಾರ್ಯಕರ್ತ ಅಣ್ಣಾ ಹಜಾರೆ ಅವರ ತಂಡದ ಸದಸ್ಯ ಅರವಿಂದ ಕೇಜ್ರಿವಾಲ್ ಅವರಿಗೆ ಶನಿವಾರ ಲೋಕಸಭೆಯ ಸಚಿವಾಲಯವು ಹಕ್ಕುಚ್ಯುತಿ ನೋಟಿಸ್ ಜಾರಿ ಮಾಡಿದೆ.<br /> <br /> ಚುನಾವಣಾ ಪ್ರಚಾರದ ವೇಳೆ ಕೇಜ್ರಿವಾಲ್ ಅವರು ಸಂಸದರನ್ನು `ಅತ್ಯಾಚಾರಿಗಳು, ಹಂತಕರು ಹಾಗೂ ಲೂಟಿಕೋರರು~ ಎಂದು ಹೇಳಿದ್ದು, ಅವರ ವಿರುದ್ದ ಕ್ರಮ ಜರುಗಿಸುವಂತೆ ಮಧ್ಯಪ್ರದೇಶದ ಕಾಂಗ್ರೆಸ್ ಸಂಸದ ಸಜ್ಜನ್ ಸಿಂಗ್ ವರ್ಮಾ ಅವರು ಮಾರ್ಚ್ 12 ರಂದು ಸಚಿವಾಲಯಕ್ಕೆ ದೂರು ಸಲ್ಲಿಸಿದ್ದರು.<br /> <br /> ಸಚಿವಾಲಯಕ್ಕೆ ಸಲ್ಲಿಸಿರುವ ದೂರಿನಲ್ಲಿ ವರ್ಮಾ ಅವರು ಕೇಜ್ರಿವಾಲ್ ಅವರ ಹೇಳಿಕೆಯನ್ನು `ಪ್ರಜಾಪ್ರಭುತ್ವದ ಮೇಲಿನ ದಾಳಿ~ ಎಂದು ಖಂಡಿಸಿ ಅವರಿಗೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿದ್ದಾರೆ.<br /> <br /> ಫೆಬ್ರುವರಿ 25 ರಂದು ಚುನಾವಣೆಯ ಪ್ರಚಾರದ ವೇಳೆ ಕೇಜ್ರಿವಾಲ್ ಅವರು `ಸಂಸತ್ತಿನಲ್ಲಿರುವ 163 ಸಂಸದರ ವಿರುದ್ಧ ಘೋರ ಅಪರಾಧಗಳ ಆರೋಪವಿದೆ. ಸಂಸತ್ತಿನಲ್ಲಿ ಅತ್ಯಾಚಾರಿಗಳು, ಹಂತಕರು ಹಾಗೂ ಲೂಟಿಕೋರರು ತುಂಬಿಕೊಂಡಿದ್ದಾರೆ. ಅವರಿಂದ ಸಂಸತ್ತಿನಲ್ಲಿ ಲೋಕಪಾಲ್ ಮಸೂದೆ ಮಂಡನೆಯಾಗುವುದನ್ನು ನೀವು ಹೇಗೆ ನಿರೀಕ್ಷಿಸುತ್ತೀರಿ? ಬಡತನ ಹಾಗೂ ಭ್ರಷ್ಟಾಚಾರದಿಂದ ನೀವು ಮುಕ್ತಿ ಹೊಂದುವುದನ್ನು ಹೇಗೆ ಎದುರು ನೋಡುತ್ತಿರಿ~ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>