<p>ವಿಜಾಪುರ: `ಹಿಂದುಳಿದ ಹಾಗೂ ಶೋಷಿತ ವರ್ಗಗಳ ಸುಧಾರಣೆಗಾಗಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಾರಿಗೊಳಿಸಿದ ಜನ ಕಲ್ಯಾಣ ಯೋಜನೆಗಳು ಅಮರವಾಗಿವೆ~ ಎಂದು ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.<br /> <br /> ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅರಸು ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.<br /> <br /> `ಅರಸು ಒಬ್ಬ ರಾಜಕೀಯ ಧ್ರುವತಾರೆ. ಈ ಮಹಾನ್ ವ್ಯಕ್ತಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಕಾರ್ಯಕ್ರಮಗಳು ಇಡಿ ರಾಷ್ಟ್ರಕ್ಕೆ ಮಾದರಿಯಾಗಿದ್ದವು. ಪಕ್ಷಾತೀತವಾಗಿ ಅವರನ್ನು ಗೌರವಿಸಬೇಕು~ ಎಂದ ಅವರು, `ಭೂರಹಿತರಿಗೆ ಭೂಸುಧಾರಣೆ ಕಾಯಿದೆ ಜಾರಿಗೊಳಿಸಿ ಭೂಮಿ ಹಕ್ಕನ್ನು ನೀಡಿದರು. <br /> <br /> ಗಂಗಾಕಲ್ಯಾಣದಂತಹ ಹಲವಾರು ಯೋಜನೆಗಳನ್ನು ರೂಪಿಸಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದರು~ ಎಂದರು. <br /> <br /> ಅಧ್ಯಕ್ಷತೆ ವಹಿಸಿದ್ದ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ, `ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ದೇವರಾಜ ಅರಸು ಅವರ ಚಿಂತನೆಗಳನ್ನು ಯೋಜನೆ ರೂಪದಲ್ಲಿ ಜಾರಿಗೊಳಿಸಬೇಕು. ಹಿಂದುಳಿದ ವರ್ಗಗಳಿಗೆ ಮೀಸಲಾದ ಬಹುಪಾಲು ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನವಾಗಿಲ್ಲ~ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> ಕರ್ನಾಟಕ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ವಿಭಾಗದ ಸಹ ಪ್ರಾಧ್ಯಾಪಕ ಡಾ. ವಿಷ್ಣು ಶಿಂಧೆ ಉಪನ್ಯಾಸ ನೀಡಿದರು. ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಫಲಾನುಭವಿಗಳಿಗೆ ಪರಿಕರ ವಿತರಿಸಲಾಯಿತು. <br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸಾವಿತ್ರಿ ಅಂಗಡಿ, ಉಪಾಧ್ಯಕ್ಷ ಚಂದ್ರಶೇಖರ ಪಾಟೀಲ, ಸದಸ್ಯೆ ಅನುಸೂಯಾ ಜಾಧವ, ಜಿಲ್ಲಾಧಿಕಾರಿ ಶಿವಯೋಗಿ ಕಳಸದ, ಜಿಲ್ಲಾ ಬಿಸಿಎಂ ಅಧಿಕಾರಿ ಎಚ್.ಎಂ. ಪೂಜಾರಿ, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರಿ ದೊಡಮನಿ ಉಪಸ್ಥಿತರಿದ್ದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ವಿಜಾಪುರ: `ಹಿಂದುಳಿದ ಹಾಗೂ ಶೋಷಿತ ವರ್ಗಗಳ ಸುಧಾರಣೆಗಾಗಿ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಜಾರಿಗೊಳಿಸಿದ ಜನ ಕಲ್ಯಾಣ ಯೋಜನೆಗಳು ಅಮರವಾಗಿವೆ~ ಎಂದು ಸಚಿವ ಎಸ್.ಕೆ. ಬೆಳ್ಳುಬ್ಬಿ ಹೇಳಿದರು.<br /> <br /> ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಅರಸು ಅವರ 97ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.<br /> <br /> `ಅರಸು ಒಬ್ಬ ರಾಜಕೀಯ ಧ್ರುವತಾರೆ. ಈ ಮಹಾನ್ ವ್ಯಕ್ತಿ ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಜಾರಿಗೊಳಿಸಿದ ಕಾರ್ಯಕ್ರಮಗಳು ಇಡಿ ರಾಷ್ಟ್ರಕ್ಕೆ ಮಾದರಿಯಾಗಿದ್ದವು. ಪಕ್ಷಾತೀತವಾಗಿ ಅವರನ್ನು ಗೌರವಿಸಬೇಕು~ ಎಂದ ಅವರು, `ಭೂರಹಿತರಿಗೆ ಭೂಸುಧಾರಣೆ ಕಾಯಿದೆ ಜಾರಿಗೊಳಿಸಿ ಭೂಮಿ ಹಕ್ಕನ್ನು ನೀಡಿದರು. <br /> <br /> ಗಂಗಾಕಲ್ಯಾಣದಂತಹ ಹಲವಾರು ಯೋಜನೆಗಳನ್ನು ರೂಪಿಸಿ ಸಮಾಜದಲ್ಲಿ ಕ್ರಾಂತಿಕಾರಕ ಬದಲಾವಣೆ ತಂದರು~ ಎಂದರು. <br /> <br /> ಅಧ್ಯಕ್ಷತೆ ವಹಿಸಿದ್ದ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ, `ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ದೇವರಾಜ ಅರಸು ಅವರ ಚಿಂತನೆಗಳನ್ನು ಯೋಜನೆ ರೂಪದಲ್ಲಿ ಜಾರಿಗೊಳಿಸಬೇಕು. ಹಿಂದುಳಿದ ವರ್ಗಗಳಿಗೆ ಮೀಸಲಾದ ಬಹುಪಾಲು ಕಾರ್ಯಕ್ರಮಗಳು ಸಮರ್ಪಕವಾಗಿ ಅನುಷ್ಠಾನವಾಗಿಲ್ಲ~ ಎಂದು ಬೇಸರ ವ್ಯಕ್ತಪಡಿಸಿದರು.<br /> <br /> ಕರ್ನಾಟಕ ಮಹಿಳಾ ವಿಶ್ವವಿದ್ಯಾನಿಲಯದ ಶಿಕ್ಷಣ ವಿಭಾಗದ ಸಹ ಪ್ರಾಧ್ಯಾಪಕ ಡಾ. ವಿಷ್ಣು ಶಿಂಧೆ ಉಪನ್ಯಾಸ ನೀಡಿದರು. ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಫಲಾನುಭವಿಗಳಿಗೆ ಪರಿಕರ ವಿತರಿಸಲಾಯಿತು. <br /> <br /> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಸಾವಿತ್ರಿ ಅಂಗಡಿ, ಉಪಾಧ್ಯಕ್ಷ ಚಂದ್ರಶೇಖರ ಪಾಟೀಲ, ಸದಸ್ಯೆ ಅನುಸೂಯಾ ಜಾಧವ, ಜಿಲ್ಲಾಧಿಕಾರಿ ಶಿವಯೋಗಿ ಕಳಸದ, ಜಿಲ್ಲಾ ಬಿಸಿಎಂ ಅಧಿಕಾರಿ ಎಚ್.ಎಂ. ಪೂಜಾರಿ, ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮದ ಅಧಿಕಾರಿ ದೊಡಮನಿ ಉಪಸ್ಥಿತರಿದ್ದರು.</p>.<p><br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>