<p><strong>ದಾವಣಗೆರೆ:</strong> ಸಾಮಾಜಿಕ ಸಮಸ್ಯೆಗಳ ಬಗ್ಗೆ ಯುವಜನರಲ್ಲಿ ಅರಿವು ಮೂಡದ ಹೊರತು ಸುಸ್ಥಿರ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಎಸ್.ಟಿ.ಅಂಜನಕುಮಾರ್ ಅಭಿಪ್ರಾಯಪಟ್ಟರು.<br /> <br /> ಸಮೀಪದ ತೋಳಹುಣಸೆಯ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಮಾಜಕಾರ್ಯ ಅಧ್ಯಯನ ವಿಭಾಗವು ‘ಸಾಮಾಜಿಕ ವಿಷಯಗಳು ಹಾಗೂ ಸುಸ್ಥಿರ ಸಾಮಾಜಿಕ ಅಭಿವೃದ್ಧಿ’ ವಿಷಯ ಕುರಿತು ಗುರುವಾರ ಆಯೋಜಿಸಿದ್ದ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ನೈಸರ್ಗಿಕ ಸಂಪನ್ಮೂಲಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಅಭಿವೃದ್ಧಿ ಹೊಂದುವುದನ್ನು ಸುಸ್ಥಿರ ಅಭಿವೃದ್ಧಿ ಎನ್ನಬಹುದು. ಈ ನಿಟ್ಟಿನಲ್ಲಿ ನಡೆದಾಗ ಮಾತ್ರ ಆರ್ಥಿಕ, ಸುಸ್ಥಿರ ಅಭಿವೃದ್ಧಿ ಸಾಧಿಸಲು ಸಾಧ್ಯ. ಸಾಮಾಜಿಕ ಸಮಸ್ಯೆಗಳ ಬಗ್ಗೆ ಯುವಜನರಲ್ಲಿ ಅರಿವು ಮೂಡಬೇಕು. ವಿದ್ಯಾರ್ಥಿಗಳು ಸಮಾಜದಲ್ಲಿರುವ ಭ್ರಷ್ಟಾಚಾರ, ಭಯೋತ್ಪಾದನೆ, ಏಡ್ಸ್ ಹಾಗೂ ಅಪರಾಧ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿಸುವತ್ತ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.<br /> <br /> ಪರಿಸರ ಅಸಮತೋಲನ ನಿವಾರಿಸಬೇಕು. ಆರ್ಥಿಕ ಭದ್ರತೆ, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ, ಸಂಪನ್ಮೂಲಗಳ ಸದುಪಯೋಗಕ್ಕೆ ಗಮನ ನೀಡಬೇಕು ಎಂದರು.<br /> <br /> ಪ್ರಸ್ತುತ ಎಚ್ಐವಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಏಡ್ಸ್ ರೋಗಿಗಳ ಸಂಖ್ಯೆಯಲ್ಲಿ ದೇಶದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದ್ದರೆ, ರಾಜ್ಯದಲ್ಲಿ ದಾವಣಗೆರೆ 7ನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ 10 ಸಾವಿರ ಏಡ್ಸ್ ಪ್ರಕರಣಗಳು<br /> ಕಂಡುಬಂದಿವೆ. ಹೀಗಾಗಿ, ಏಡ್ಸ್ ಬಗ್ಗೆ ಅರಿವು ಅಗತ್ಯ ಎಂದು ತಿಳಿಸಿದರು.<br /> <br /> ಭ್ರಷ್ಟಾಚಾರ ಪಿಡುಗಿನಂತೆ ಜಗತ್ತಿನಾದ್ಯಂತ ವ್ಯಾಪಿಸುತ್ತಿದೆ. ಭ್ರಷ್ಟಾಚಾರವನ್ನು ಮೇಲ್ಮಟ್ಟದಿಂದ ತೆಗೆದು ಹಾಕಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಬಲಿಷ್ಠ ಲೋಕಾಯುಕ್ತ ವ್ಯವಸ್ಥೆ ಹಾಗೂ ಸುಭದ್ರ ಕಾನೂನುಗಳನ್ನು ಜಾರಿಗೆ ತರುವ ಮೂಲಕಭ್ರಷ್ಟಾಚಾರ ನಿರ್ಮೂಲನೆ ಮಾಡಬಹುದು ಎಂದು ಹೇಳಿದರು.<br /> <br /> ಯುವಕರಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವುದು ಹಾಗೂ ಸರ್ಕಾರದ ವಿವಿಧ ಜನಪರ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಸಮಾಜದ ಮುಖ್ಯವಾಹಿನಿಗೆ ಕರೆತರುವ ಗುರುತರವಾದ ಹೊಣೆಗಾರಿಕೆ ಸಮಾಜಕಾರ್ಯ ವಿದ್ಯಾರ್ಥಿಗಳ ಮೇಲಿದೆ ಎಂದು ಹೇಳಿದರು.<br /> <br /> ದಾವಣಗೆರೆ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಬಿ.ಕಲಿವಾಳ್ ಮಾತನಾಡಿ, ಸಾಮಾಜಿಕ ಸಮಸ್ಯೆಗಳು ಹೆಚ್ಚಾಗಲು ವ್ಯವಸ್ಥೆಯೇ ಕಾರಣ. ಇದನ್ನು ಸರಿಪಡಿಸಲು ಯುವಜನರು ಮುಂದಾಗಬೇಕು ಎಂದು ಕರೆ ನೀಡಿದರು.<br /> <br /> ಕುಲಸಚಿವ ಸಿ.ಸೋಮಶೇಖರ್, ಹಣಕಾಸು ಅಧಿಕಾರಿ ವೀರಭದ್ರಪ್ಪ, ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ವಿ.ಮುರುಗಯ್ಯ, ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಬಿ.ಎಸ್.ಪ್ರದೀಪ್ ಸಮಾರಂಭದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಸಾಮಾಜಿಕ ಸಮಸ್ಯೆಗಳ ಬಗ್ಗೆ ಯುವಜನರಲ್ಲಿ ಅರಿವು ಮೂಡದ ಹೊರತು ಸುಸ್ಥಿರ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಜಿಲ್ಲಾಧಿಕಾರಿ ಎಸ್.ಟಿ.ಅಂಜನಕುಮಾರ್ ಅಭಿಪ್ರಾಯಪಟ್ಟರು.<br /> <br /> ಸಮೀಪದ ತೋಳಹುಣಸೆಯ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಸಮಾಜಕಾರ್ಯ ಅಧ್ಯಯನ ವಿಭಾಗವು ‘ಸಾಮಾಜಿಕ ವಿಷಯಗಳು ಹಾಗೂ ಸುಸ್ಥಿರ ಸಾಮಾಜಿಕ ಅಭಿವೃದ್ಧಿ’ ವಿಷಯ ಕುರಿತು ಗುರುವಾರ ಆಯೋಜಿಸಿದ್ದ ವಿಚಾರಗೋಷ್ಠಿ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ನೈಸರ್ಗಿಕ ಸಂಪನ್ಮೂಲಗಳಿಗೆ ಧಕ್ಕೆಯಾಗದ ರೀತಿಯಲ್ಲಿ ಅಭಿವೃದ್ಧಿ ಹೊಂದುವುದನ್ನು ಸುಸ್ಥಿರ ಅಭಿವೃದ್ಧಿ ಎನ್ನಬಹುದು. ಈ ನಿಟ್ಟಿನಲ್ಲಿ ನಡೆದಾಗ ಮಾತ್ರ ಆರ್ಥಿಕ, ಸುಸ್ಥಿರ ಅಭಿವೃದ್ಧಿ ಸಾಧಿಸಲು ಸಾಧ್ಯ. ಸಾಮಾಜಿಕ ಸಮಸ್ಯೆಗಳ ಬಗ್ಗೆ ಯುವಜನರಲ್ಲಿ ಅರಿವು ಮೂಡಬೇಕು. ವಿದ್ಯಾರ್ಥಿಗಳು ಸಮಾಜದಲ್ಲಿರುವ ಭ್ರಷ್ಟಾಚಾರ, ಭಯೋತ್ಪಾದನೆ, ಏಡ್ಸ್ ಹಾಗೂ ಅಪರಾಧ ಪ್ರಕರಣಗಳ ಬಗ್ಗೆ ಜಾಗೃತಿ ಮೂಡಿಸುವತ್ತ ತೊಡಗಿಸಿಕೊಳ್ಳಬೇಕು ಎಂದು ಕರೆ ನೀಡಿದರು.<br /> <br /> ಪರಿಸರ ಅಸಮತೋಲನ ನಿವಾರಿಸಬೇಕು. ಆರ್ಥಿಕ ಭದ್ರತೆ, ನೈಸರ್ಗಿಕ ಸಂಪನ್ಮೂಲಗಳ ಸಂರಕ್ಷಣೆ, ಸಂಪನ್ಮೂಲಗಳ ಸದುಪಯೋಗಕ್ಕೆ ಗಮನ ನೀಡಬೇಕು ಎಂದರು.<br /> <br /> ಪ್ರಸ್ತುತ ಎಚ್ಐವಿ ದೊಡ್ಡ ಸಮಸ್ಯೆಯಾಗಿ ಕಾಡುತ್ತಿದೆ. ಏಡ್ಸ್ ರೋಗಿಗಳ ಸಂಖ್ಯೆಯಲ್ಲಿ ದೇಶದಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದ್ದರೆ, ರಾಜ್ಯದಲ್ಲಿ ದಾವಣಗೆರೆ 7ನೇ ಸ್ಥಾನದಲ್ಲಿದೆ. ಜಿಲ್ಲೆಯಲ್ಲಿ 10 ಸಾವಿರ ಏಡ್ಸ್ ಪ್ರಕರಣಗಳು<br /> ಕಂಡುಬಂದಿವೆ. ಹೀಗಾಗಿ, ಏಡ್ಸ್ ಬಗ್ಗೆ ಅರಿವು ಅಗತ್ಯ ಎಂದು ತಿಳಿಸಿದರು.<br /> <br /> ಭ್ರಷ್ಟಾಚಾರ ಪಿಡುಗಿನಂತೆ ಜಗತ್ತಿನಾದ್ಯಂತ ವ್ಯಾಪಿಸುತ್ತಿದೆ. ಭ್ರಷ್ಟಾಚಾರವನ್ನು ಮೇಲ್ಮಟ್ಟದಿಂದ ತೆಗೆದು ಹಾಕಿದಾಗ ಮಾತ್ರ ಉತ್ತಮ ಸಮಾಜ ನಿರ್ಮಾಣ ಸಾಧ್ಯ. ಬಲಿಷ್ಠ ಲೋಕಾಯುಕ್ತ ವ್ಯವಸ್ಥೆ ಹಾಗೂ ಸುಭದ್ರ ಕಾನೂನುಗಳನ್ನು ಜಾರಿಗೆ ತರುವ ಮೂಲಕಭ್ರಷ್ಟಾಚಾರ ನಿರ್ಮೂಲನೆ ಮಾಡಬಹುದು ಎಂದು ಹೇಳಿದರು.<br /> <br /> ಯುವಕರಲ್ಲಿ ಸಾಮಾಜಿಕ ಜಾಗೃತಿ ಮೂಡಿಸುವುದು ಹಾಗೂ ಸರ್ಕಾರದ ವಿವಿಧ ಜನಪರ ಯೋಜನೆಗಳ ಬಗ್ಗೆ ಮಾಹಿತಿ ನೀಡಿ, ಸಮಾಜದ ಮುಖ್ಯವಾಹಿನಿಗೆ ಕರೆತರುವ ಗುರುತರವಾದ ಹೊಣೆಗಾರಿಕೆ ಸಮಾಜಕಾರ್ಯ ವಿದ್ಯಾರ್ಥಿಗಳ ಮೇಲಿದೆ ಎಂದು ಹೇಳಿದರು.<br /> <br /> ದಾವಣಗೆರೆ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಬಿ.ಕಲಿವಾಳ್ ಮಾತನಾಡಿ, ಸಾಮಾಜಿಕ ಸಮಸ್ಯೆಗಳು ಹೆಚ್ಚಾಗಲು ವ್ಯವಸ್ಥೆಯೇ ಕಾರಣ. ಇದನ್ನು ಸರಿಪಡಿಸಲು ಯುವಜನರು ಮುಂದಾಗಬೇಕು ಎಂದು ಕರೆ ನೀಡಿದರು.<br /> <br /> ಕುಲಸಚಿವ ಸಿ.ಸೋಮಶೇಖರ್, ಹಣಕಾಸು ಅಧಿಕಾರಿ ವೀರಭದ್ರಪ್ಪ, ನಿರ್ವಹಣಾ ವಿಭಾಗದ ಮುಖ್ಯಸ್ಥ ಪ್ರೊ.ವಿ.ಮುರುಗಯ್ಯ, ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಬಿ.ಎಸ್.ಪ್ರದೀಪ್ ಸಮಾರಂಭದಲ್ಲಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>