<p>ಶೃಂಗೇರಿ: ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವುದು ಕಾನೂನು ಸಾಕ್ಷರತಾ ರಥದ ಮುಖ್ಯ ಉದ್ದೇಶ ಎಂದು ಜೆ.ಎಂ.ಎಫ್.ಸಿ. ನ್ಯಾಯಾಧೀಶ ಸಿ. ವೀರಭದ್ರಯ್ಯ ತಿಳಿಸಿದರು. <br /> <br /> ತಾಲ್ಲೂಕಿನ ಕುಂಚೆಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸಂಚಾರಿ ಜನತಾ ನ್ಯಾಯಾಲಯ ಹಾಗೂ ಕಾನೂನು ಅರಿವು ಮೂಡಿಸುವ ರಥದ ಅಂಗವಾಗಿ ತಾಲ್ಲೂಕು ಕಾನೂನು ಸೇವಾ ಸಮಿತಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕಾನೂನಿನ ವ್ಯಾಪ್ತಿ ವಿಶಾಲವಾಗಿದೆ. ದೈನಂದಿನ ಬದುಕಿನಲ್ಲಿ ಯಾವುದು ಸರಿ ಮತ್ತು ಯಾವುದು ತಪ್ಪು ಎಂದು ಕಾನೂನು ನಿರ್ಧರಿಸುತ್ತದೆ. ಜನನದಿಂದ ಮರಣದವರೆಗೂ ಕಾನೂನಿನ ಅರಿವು ಅಗತ್ಯವಾಗಿದೆ. ಸಮಾಜದಲ್ಲಿ ಹಕ್ಕಿಗಾಗಿ ಹೋರಾಡುವ ಹಲವಾರು ಸಂದರ್ಭಗಳು ಬರುತ್ತವಾದರೂ, ಹಕ್ಕುಗಳನ್ನು ಪಡೆಯಲು ಕಾನೂನಿನ ಅರಿವು ಅತ್ಯಗತ್ಯ ಎಂದರು.<br /> <br /> ವಕೀಲರಾದ ಜಿ.ಎಂ. ಸತೀಶ್ ಆಸ್ತಿ ಹಕ್ಕು ಕುರಿತಾಗಿ, ಎಚ್.ಇ. ಮಹೇಶ್ ವಿವಾಹ ವಿಚ್ಛೇದನ ಹಾಗೂ ಜೀವನಾಂಶ ಕುರಿತಾಗಿ ಹಾಗೂ ಚರಣ್ನಾಯ್ಕ ಜನನ ಮತ್ತು ಮರಣ ನೋಂದಣಿ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. <br /> <br /> ಮೆಣಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ್ ಜಗದೀಶ್, ವಕೀಲರ ಸಂಘದ ಅಧ್ಯಕ್ಷೆ ರಾಜೇಶ್ವರಿ, ವಕೀಲರಾದ ಶಶಿಭೂಷಣ್, ಸುರೇಶ್, ಉಮೇಶ್ ಹೆಗ್ಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶೃಂಗೇರಿ: ಪ್ರತಿಯೊಬ್ಬರಿಗೂ ಕಾನೂನಿನ ಅರಿವು ಮೂಡಿಸುವುದು ಕಾನೂನು ಸಾಕ್ಷರತಾ ರಥದ ಮುಖ್ಯ ಉದ್ದೇಶ ಎಂದು ಜೆ.ಎಂ.ಎಫ್.ಸಿ. ನ್ಯಾಯಾಧೀಶ ಸಿ. ವೀರಭದ್ರಯ್ಯ ತಿಳಿಸಿದರು. <br /> <br /> ತಾಲ್ಲೂಕಿನ ಕುಂಚೆಬೈಲು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಸಂಚಾರಿ ಜನತಾ ನ್ಯಾಯಾಲಯ ಹಾಗೂ ಕಾನೂನು ಅರಿವು ಮೂಡಿಸುವ ರಥದ ಅಂಗವಾಗಿ ತಾಲ್ಲೂಕು ಕಾನೂನು ಸೇವಾ ಸಮಿತಿ ಹಮ್ಮಿಕೊಂಡಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕಾನೂನಿನ ವ್ಯಾಪ್ತಿ ವಿಶಾಲವಾಗಿದೆ. ದೈನಂದಿನ ಬದುಕಿನಲ್ಲಿ ಯಾವುದು ಸರಿ ಮತ್ತು ಯಾವುದು ತಪ್ಪು ಎಂದು ಕಾನೂನು ನಿರ್ಧರಿಸುತ್ತದೆ. ಜನನದಿಂದ ಮರಣದವರೆಗೂ ಕಾನೂನಿನ ಅರಿವು ಅಗತ್ಯವಾಗಿದೆ. ಸಮಾಜದಲ್ಲಿ ಹಕ್ಕಿಗಾಗಿ ಹೋರಾಡುವ ಹಲವಾರು ಸಂದರ್ಭಗಳು ಬರುತ್ತವಾದರೂ, ಹಕ್ಕುಗಳನ್ನು ಪಡೆಯಲು ಕಾನೂನಿನ ಅರಿವು ಅತ್ಯಗತ್ಯ ಎಂದರು.<br /> <br /> ವಕೀಲರಾದ ಜಿ.ಎಂ. ಸತೀಶ್ ಆಸ್ತಿ ಹಕ್ಕು ಕುರಿತಾಗಿ, ಎಚ್.ಇ. ಮಹೇಶ್ ವಿವಾಹ ವಿಚ್ಛೇದನ ಹಾಗೂ ಜೀವನಾಂಶ ಕುರಿತಾಗಿ ಹಾಗೂ ಚರಣ್ನಾಯ್ಕ ಜನನ ಮತ್ತು ಮರಣ ನೋಂದಣಿ ಕಾಯ್ದೆ ಕುರಿತು ಉಪನ್ಯಾಸ ನೀಡಿದರು. <br /> <br /> ಮೆಣಸೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸರಸ್ವತಿ ಅಧ್ಯಕ್ಷತೆ ವಹಿಸಿದ್ದರು. ತಹಶೀಲ್ದಾರ್ ಜಗದೀಶ್, ವಕೀಲರ ಸಂಘದ ಅಧ್ಯಕ್ಷೆ ರಾಜೇಶ್ವರಿ, ವಕೀಲರಾದ ಶಶಿಭೂಷಣ್, ಸುರೇಶ್, ಉಮೇಶ್ ಹೆಗ್ಡೆ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>