<p>ಅರಸೀಕೆರೆ: ಪಟ್ಟಣದ ಪ್ರಧಾನ ಅಂಚೆ ಕಚೇರಿ ರಸ್ತೆಯಲ್ಲಿ ನೀವು ಬಂದರೆ ಸಾಕು; ಅರೆರೆರೇ ಇದೇನು ಮಳೆ ಇಲ್ಲಿ ಮಾತ್ರ ಹರಿಯುತ್ತಿದೆ ಎಂದು ಅಚ್ಚರಿ ಪಡುತ್ತೀರಿ.<br /> <br /> ಹೌದು. ಪಟ್ಟಣದ ಕೆಲವೆಡೆ ನೀರಿನ ಪೈಪುಗಳು ಒಡೆದು, ವಾಲ್ವ್ಗಳಿಂದ ಸೋರಿದ ನೀರು ಇಲ್ಲಿ ರಸ್ತೆಯಲ್ಲೆಲ್ಲಾ ಹರಿದಾಡುತ್ತಿದೆ. ಹನಿ ನೀರಿಗೂ ಮಹಿಳೆಯರು ಖಾಲಿ ಬಿಂದಿಗೆ ಹಿಡಿದು ಅಲೆದಾಡುವ ಸ್ಥಿತಿ ಒಂದೆಡೆಯಾದರೆ, ಕೆಲವು ವಾರ್ಡುಗಳಲ್ಲಿ ಮಾತ್ರ ಅಪಾರ ನೀರು ಹರಿದು ವ್ಯರ್ಥವಾಗುತ್ತಿರುವುದು ಇನ್ನೊಂದೆಡೆ.<br /> <br /> ಪಟ್ಟಣದ ಜನತೆಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಪುರಸಭೆ ಹರಸಾಹಸ ಪಡುತ್ತಿದ್ದರೆ, ವಾಟರ್ಮೆನ್ಗಳ ನಿರ್ಲಕ್ಷ್ಯದಿಂದಾಗಿ ನೀರು ಪೋಲಾಗಿ ಚರಂಡಿ ಸೇರುತ್ತಿದೆ. ಪ್ರಧಾನ ಅಂಚೆ ಕಚೇರಿ ರಸ್ತೆಯಲ್ಲಿ ಈ ಸಮಸ್ಯೆ ಗಂಭೀರವಾಗಿದೆ. ಈ ಭಾಗದ ನಿವಾಸಿಗಳಿಗೆ ನೀರು ಸರಬರಾಜು ಮಾಡುವ ಕೊಳವೆಗಳು ಒಡೆದಿವೆ. ಇದರಿಂದ ಈ ರಸ್ತೆ ಸದಾಕಾಲ ನೀರಿನಿಂದ ಆವೃತವಾಗಿರುತ್ತದೆ.<br /> <br /> ಪೈಪ್ಲೈನಿಗೆ ಅಳವಡಿಸಿರುವ ವಾಲ್ವ್ಗಳಲ್ಲಿ, ಬಡಾವಣೆಯ ನಲ್ಲಿಗಳಲ್ಲಿ ಬರುವುದಕ್ಕಿಂತ ಹೆಚ್ಚಿನ ನೀರು ಹರಿದು ಚರಂಡಿ ಸೇರುತ್ತಿದೆ. ಪುರಸಭೆ ಮೊದಲು ಇದನ್ನು ಸರಿಪಡಿಸ ಬೇಕಾಗಿದೆ.<br /> <br /> ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ 2 ಬೃಹತ್ ನೀರಿನ ಟ್ಯಾಂಕುಗಳಿದ್ದು, ಈ ಟ್ಯಾಂಕುಗಳಿಗೆ ಹೇಮಾವತಿ ನೀರು ಹಾಗೂ ನಾಗತಿಹಳ್ಳಿ ಜಲ ಸಂಗ್ರಹಾರದಲ್ಲಿನ ನೀರು ತುಂಬಿಸಿ ವಿವಿಧ ಬಡಾವಣೆಗಳಿಗೆ ಪೂರೈಸಲಾಗುತ್ತದೆ. ಅನೇಕ ಸಂದರ್ಭದಲ್ಲಿ ಟ್ಯಾಂಕುಗಳಲ್ಲಿ ನೀರು ತುಂಬಿ ಉಕ್ಕಿ ಹರಿಯುತ್ತದೆ.<br /> <br /> ಅನೇಕ ಬಡಾವಣೆಗಳಲ್ಲಿ ಜನರು ಹನಿ ನೀರಿಗೂ ಪರಸುತ್ತಿರುವಾಗ ಪುರಸಭೆಯ ಅಧಿಕಾರಿಗಳು, ಜನಪ್ರತಿ ನಿಧಿಗಳು ಇದರತ್ತ ಗಮನ ಹರಿಸಿಲ್ಲ ಎಂಬುದು ನಾಗರಿಕರ ದೂರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಅರಸೀಕೆರೆ: ಪಟ್ಟಣದ ಪ್ರಧಾನ ಅಂಚೆ ಕಚೇರಿ ರಸ್ತೆಯಲ್ಲಿ ನೀವು ಬಂದರೆ ಸಾಕು; ಅರೆರೆರೇ ಇದೇನು ಮಳೆ ಇಲ್ಲಿ ಮಾತ್ರ ಹರಿಯುತ್ತಿದೆ ಎಂದು ಅಚ್ಚರಿ ಪಡುತ್ತೀರಿ.<br /> <br /> ಹೌದು. ಪಟ್ಟಣದ ಕೆಲವೆಡೆ ನೀರಿನ ಪೈಪುಗಳು ಒಡೆದು, ವಾಲ್ವ್ಗಳಿಂದ ಸೋರಿದ ನೀರು ಇಲ್ಲಿ ರಸ್ತೆಯಲ್ಲೆಲ್ಲಾ ಹರಿದಾಡುತ್ತಿದೆ. ಹನಿ ನೀರಿಗೂ ಮಹಿಳೆಯರು ಖಾಲಿ ಬಿಂದಿಗೆ ಹಿಡಿದು ಅಲೆದಾಡುವ ಸ್ಥಿತಿ ಒಂದೆಡೆಯಾದರೆ, ಕೆಲವು ವಾರ್ಡುಗಳಲ್ಲಿ ಮಾತ್ರ ಅಪಾರ ನೀರು ಹರಿದು ವ್ಯರ್ಥವಾಗುತ್ತಿರುವುದು ಇನ್ನೊಂದೆಡೆ.<br /> <br /> ಪಟ್ಟಣದ ಜನತೆಗೆ ಸಮರ್ಪಕವಾಗಿ ನೀರು ಪೂರೈಕೆ ಮಾಡಲು ಪುರಸಭೆ ಹರಸಾಹಸ ಪಡುತ್ತಿದ್ದರೆ, ವಾಟರ್ಮೆನ್ಗಳ ನಿರ್ಲಕ್ಷ್ಯದಿಂದಾಗಿ ನೀರು ಪೋಲಾಗಿ ಚರಂಡಿ ಸೇರುತ್ತಿದೆ. ಪ್ರಧಾನ ಅಂಚೆ ಕಚೇರಿ ರಸ್ತೆಯಲ್ಲಿ ಈ ಸಮಸ್ಯೆ ಗಂಭೀರವಾಗಿದೆ. ಈ ಭಾಗದ ನಿವಾಸಿಗಳಿಗೆ ನೀರು ಸರಬರಾಜು ಮಾಡುವ ಕೊಳವೆಗಳು ಒಡೆದಿವೆ. ಇದರಿಂದ ಈ ರಸ್ತೆ ಸದಾಕಾಲ ನೀರಿನಿಂದ ಆವೃತವಾಗಿರುತ್ತದೆ.<br /> <br /> ಪೈಪ್ಲೈನಿಗೆ ಅಳವಡಿಸಿರುವ ವಾಲ್ವ್ಗಳಲ್ಲಿ, ಬಡಾವಣೆಯ ನಲ್ಲಿಗಳಲ್ಲಿ ಬರುವುದಕ್ಕಿಂತ ಹೆಚ್ಚಿನ ನೀರು ಹರಿದು ಚರಂಡಿ ಸೇರುತ್ತಿದೆ. ಪುರಸಭೆ ಮೊದಲು ಇದನ್ನು ಸರಿಪಡಿಸ ಬೇಕಾಗಿದೆ.<br /> <br /> ಸರ್ಕಾರಿ ಆಸ್ಪತ್ರೆಯ ಆವರಣದಲ್ಲಿ 2 ಬೃಹತ್ ನೀರಿನ ಟ್ಯಾಂಕುಗಳಿದ್ದು, ಈ ಟ್ಯಾಂಕುಗಳಿಗೆ ಹೇಮಾವತಿ ನೀರು ಹಾಗೂ ನಾಗತಿಹಳ್ಳಿ ಜಲ ಸಂಗ್ರಹಾರದಲ್ಲಿನ ನೀರು ತುಂಬಿಸಿ ವಿವಿಧ ಬಡಾವಣೆಗಳಿಗೆ ಪೂರೈಸಲಾಗುತ್ತದೆ. ಅನೇಕ ಸಂದರ್ಭದಲ್ಲಿ ಟ್ಯಾಂಕುಗಳಲ್ಲಿ ನೀರು ತುಂಬಿ ಉಕ್ಕಿ ಹರಿಯುತ್ತದೆ.<br /> <br /> ಅನೇಕ ಬಡಾವಣೆಗಳಲ್ಲಿ ಜನರು ಹನಿ ನೀರಿಗೂ ಪರಸುತ್ತಿರುವಾಗ ಪುರಸಭೆಯ ಅಧಿಕಾರಿಗಳು, ಜನಪ್ರತಿ ನಿಧಿಗಳು ಇದರತ್ತ ಗಮನ ಹರಿಸಿಲ್ಲ ಎಂಬುದು ನಾಗರಿಕರ ದೂರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>