<p><strong>ಪಾಂಡವಪುರ</strong>: ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿನ ರತ್ನಾಂಗಿ ಆಭರಣದ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅರ್ಚಕ ನರಸರಾಜ ಭಟ್ಟ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ.<br /> <br /> ಸದನದಲ್ಲಿ ಪ್ರಕರಣ ಪ್ರತಿಧ್ವನಿಸಿ, ಮುಜರಾಯಿ ಸಚಿವ ಪ್ರಕಾಶ್ ಹುಕ್ಕೇರಿ ಅವರು `ಆರೋಪಿ ನರಸರಾಜ ಭಟ್ಟರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು' ಎಂದು ಪ್ರಕಟಿಸಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಅವರ ಸೂಚನೆ ಮೇರೆಗೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವೇಣುಗೋಪಾಲ್ ಅವರು ನರಸರಾಜ ಭಟ್ಟ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.<br /> <br /> ಅದರಂತೆ ಅರ್ಚಕರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 406 (ನಂಬಿಕೆ ದ್ರೋಹ), 408 (ಕರ್ತವ್ಯದಲ್ಲಿ ವಂಚನೆ), 420 (ಮೋಸ)ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. <br /> <br /> <strong></strong></p>.<p><strong>ಅರ್ಚಕ ಪರಾರಿ</strong>: ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿರುವ ವಿಷಯ ತಿಳಿದ ತಕ್ಷಣ ನರಸರಾಜ ಭಟ್ಟ ಪರಾರಿಯಾಗಿದ್ದಾನೆ. ಎಸ್ಐ ಅಶೋಕ್ ಮತ್ತು ತಂಡ ಬುಧವಾರ ತಡರಾತ್ರಿಯಲ್ಲಿಯೇ ಅರ್ಚಕರ ಮನೆಯ ಶೋಧ ನಡೆಸಿದರಾದರೂ ಸುಳಿವು ಸಿಗಲಿಲ್ಲ. ಅರ್ಚಕನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಶೋಕ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ಮೇಲುಕೋಟೆಯ ಚಲುವರಾಯಸ್ವಾಮಿ ದೇವಸ್ಥಾನದಲ್ಲಿನ ರತ್ನಾಂಗಿ ಆಭರಣದ ಅವ್ಯವಹಾರದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ ಅರ್ಚಕ ನರಸರಾಜ ಭಟ್ಟ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ಬುಧವಾರ ರಾತ್ರಿ ಕ್ರಿಮಿನಲ್ ಪ್ರಕರಣ ದಾಖಲಾಗಿದ್ದು, ಆರೋಪಿ ತಲೆಮರೆಸಿಕೊಂಡಿದ್ದಾನೆ.<br /> <br /> ಸದನದಲ್ಲಿ ಪ್ರಕರಣ ಪ್ರತಿಧ್ವನಿಸಿ, ಮುಜರಾಯಿ ಸಚಿವ ಪ್ರಕಾಶ್ ಹುಕ್ಕೇರಿ ಅವರು `ಆರೋಪಿ ನರಸರಾಜ ಭಟ್ಟರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು' ಎಂದು ಪ್ರಕಟಿಸಿದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲಾಧಿಕಾರಿ ಬಿ.ಎನ್. ಕೃಷ್ಣಯ್ಯ ಅವರ ಸೂಚನೆ ಮೇರೆಗೆ ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ವೇಣುಗೋಪಾಲ್ ಅವರು ನರಸರಾಜ ಭಟ್ಟ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.<br /> <br /> ಅದರಂತೆ ಅರ್ಚಕರ ವಿರುದ್ಧ ಭಾರತೀಯ ದಂಡ ಸಂಹಿತೆ ಸೆಕ್ಷನ್ 406 (ನಂಬಿಕೆ ದ್ರೋಹ), 408 (ಕರ್ತವ್ಯದಲ್ಲಿ ವಂಚನೆ), 420 (ಮೋಸ)ರ ಅಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. <br /> <br /> <strong></strong></p>.<p><strong>ಅರ್ಚಕ ಪರಾರಿ</strong>: ಠಾಣೆಯಲ್ಲಿ ಪ್ರಕರಣ ದಾಖಲಾಗುತ್ತಿರುವ ವಿಷಯ ತಿಳಿದ ತಕ್ಷಣ ನರಸರಾಜ ಭಟ್ಟ ಪರಾರಿಯಾಗಿದ್ದಾನೆ. ಎಸ್ಐ ಅಶೋಕ್ ಮತ್ತು ತಂಡ ಬುಧವಾರ ತಡರಾತ್ರಿಯಲ್ಲಿಯೇ ಅರ್ಚಕರ ಮನೆಯ ಶೋಧ ನಡೆಸಿದರಾದರೂ ಸುಳಿವು ಸಿಗಲಿಲ್ಲ. ಅರ್ಚಕನ ಬಂಧನಕ್ಕೆ ಬಲೆ ಬೀಸಲಾಗಿದೆ ಎಂದು ಅಶೋಕ್ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>