<p><strong>ನವದೆಹಲಿ (ಪಿಟಿಐ):</strong> ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಮತ್ತು ಮಹಿಳೆಯರ ಪ್ರವೇಶಕ್ಕೆ ಇರುವ ನಿಷೇಧವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಯುವ ವಕೀಲರ ಸಂಘದ (ಐವೈಎಲ್ಎ) ಅಧ್ಯಕ್ಷ ನೌಶಾದ್ ಅಹ್ಮದ್ ಖಾನ್ಗೆ ಹಲವು ಬೆದರಿಕೆ ಕರೆಗಳು ಬಂದಿವೆ.<br /> <br /> ಅದರಲ್ಲಿ ಹಲವು ಕರೆಗಳು ಅಮೆರಿಕದಿಂದಲೂ ಬಂದಿವೆ. ‘ಪಿಐಎಲ್ ಸಲ್ಲಿಸಿದ ಬಳಿಕ 500 ಕ್ಕೂ ಅಧಿಕ ಬೆದರಿಕೆ ಕರೆಗಳು ಬಂದಿವೆ. ಆದ್ದರಿಂದ ಪಿಐಎಲ್ ವಾಪಸ್ ಪಡೆಯಲು ಬಯಸಿದ್ದೇನೆ’ ಎಂದು ನೌಶಾದ್ ಅಹ್ಮದ್ ಖಾನ್ ಸುಪ್ರೀಂಕೋರ್ಟ್ಗೆ ತಿಳಿಸಿದ್ದರು.<br /> ಒಮ್ಮೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ ಬಳಿಕ ಅದನ್ನು ಹಿಂದಕ್ಕೆ ಪಡೆಯಲು ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.<br /> <br /> ‘ಒಮ್ಮೆ ಪಿಐಎಲ್ ಅನ್ನು ವಿಚಾರಣೆಗೆ ಕೈಗೆತ್ತಿಕೊಂಡ ಬಳಿಕ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಈ ವಿಚಾರವನ್ನು ಎಲ್ಲರೂ ತಿಳಿದುಕೊಂಡಿರಬೇಕು’ ಎಂದು ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಮತ್ತು ಎನ್.ವಿ. ರಮಣ ಅವರನ್ನೊಳಗೊಂಡ ಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ):</strong> ಶಬರಿಮಲೆಯ ಅಯ್ಯಪ್ಪ ಸ್ವಾಮಿ ದೇವಸ್ಥಾನಕ್ಕೆ ಹೆಣ್ಣು ಮಕ್ಕಳು ಮತ್ತು ಮಹಿಳೆಯರ ಪ್ರವೇಶಕ್ಕೆ ಇರುವ ನಿಷೇಧವನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದ ಯುವ ವಕೀಲರ ಸಂಘದ (ಐವೈಎಲ್ಎ) ಅಧ್ಯಕ್ಷ ನೌಶಾದ್ ಅಹ್ಮದ್ ಖಾನ್ಗೆ ಹಲವು ಬೆದರಿಕೆ ಕರೆಗಳು ಬಂದಿವೆ.<br /> <br /> ಅದರಲ್ಲಿ ಹಲವು ಕರೆಗಳು ಅಮೆರಿಕದಿಂದಲೂ ಬಂದಿವೆ. ‘ಪಿಐಎಲ್ ಸಲ್ಲಿಸಿದ ಬಳಿಕ 500 ಕ್ಕೂ ಅಧಿಕ ಬೆದರಿಕೆ ಕರೆಗಳು ಬಂದಿವೆ. ಆದ್ದರಿಂದ ಪಿಐಎಲ್ ವಾಪಸ್ ಪಡೆಯಲು ಬಯಸಿದ್ದೇನೆ’ ಎಂದು ನೌಶಾದ್ ಅಹ್ಮದ್ ಖಾನ್ ಸುಪ್ರೀಂಕೋರ್ಟ್ಗೆ ತಿಳಿಸಿದ್ದರು.<br /> ಒಮ್ಮೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ ಬಳಿಕ ಅದನ್ನು ಹಿಂದಕ್ಕೆ ಪಡೆಯಲು ಅವಕಾಶವಿಲ್ಲ ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ.<br /> <br /> ‘ಒಮ್ಮೆ ಪಿಐಎಲ್ ಅನ್ನು ವಿಚಾರಣೆಗೆ ಕೈಗೆತ್ತಿಕೊಂಡ ಬಳಿಕ ಅದನ್ನು ಹಿಂಪಡೆಯಲು ಸಾಧ್ಯವಿಲ್ಲ. ಈ ವಿಚಾರವನ್ನು ಎಲ್ಲರೂ ತಿಳಿದುಕೊಂಡಿರಬೇಕು’ ಎಂದು ನ್ಯಾಯಮೂರ್ತಿಗಳಾದ ದೀಪಕ್ ಮಿಶ್ರಾ ಮತ್ತು ಎನ್.ವಿ. ರಮಣ ಅವರನ್ನೊಳಗೊಂಡ ಪೀಠ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>