<p>ಶ್ರೀರಂಗಪಟ್ಟಣ: ತಾಲ್ಲೂಕಿನ ಬಲ್ಲೇನಹಳ್ಳಿಯಲ್ಲಿ ರಾಷ್ಟ್ರಧ್ವಜವನ್ನು ಗುರುವಾರ ಅರ್ಧಕ್ಕೆ ಹಾರಿಸಿ ಪ್ರಮಾದ ಎಸಗಲಾಗಿದೆ. ಬಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಂಬದ ಅರ್ಧಕ್ಕೆ ಧ್ವಜವನ್ನು ಹಾರಿಸಲಾಗಿದೆ.<br /> <br /> ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಮ್ಮ ಧ್ವಜಾರೋಹಣ ಮಾಡಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂಜುಂಡಯ್ಯ ಧ್ವಜ ಕಟ್ಟಿದ್ದಾಗಿ `ಪ್ರಜಾವಾಣಿ~ಗೆ ತಿಳಿಸಿದ್ದಾರೆ. <br /> <br /> `ಪಿಡಿಓ ಹುದ್ದೆಗೆ ಬರುವ ಮೊದಲು ನಾನು ಶಿಕ್ಷಕನಾಗಿದ್ದೆ. ನಾನೇ ರಾಷ್ಟ್ರಧ್ವಜವನ್ನು ಕಟ್ಟಿದ್ದೇನೆ. ಹಗ್ಗ ತುಂಡಾಗಿದ್ದರಿಂದ ಧ್ವಜ ಅರ್ಧಕ್ಕೆ ಜಾರಿದೆ~ ಎಂದು ಅವರು ಹೇಳಿದ್ದಾರೆ. <br /> <br /> <strong>ತಲೆಕೆಳಗಾದ ಬಾವುಟ<br /> ಬಾಗೇಪಲ್ಲಿ:</strong> ಗಣರಾಜೋತ್ಸವ ಕಾರ್ಯಕ್ರಮದಲ್ಲಿ ಪಟ್ಟಣದ ಎರಡು ಕಡೆ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿದೆ.<br /> <br /> ಪಟ್ಟಣದ ಸಂತೆಮೈದಾನದ ರಸ್ತೆಯಲ್ಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಕಚೇರಿ ಕಟ್ಟಡದ ಮೇಲೆ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಲಾಯಿತು. ನಂತರ ಎಚ್ಚೆತ್ತುಕೊಂಡ ಬ್ಯಾಂಕ್ ಸಿಬ್ಬಂದಿ ಧ್ವಜವನ್ನು ಸರಿಪಡಿಸಿದರು.<br /> <br /> ಪಟ್ಟಣದ ಗೂಳೂರು ರಸ್ತೆಯಲ್ಲಿ ಇರುವ ಸಿಟಿಜನ್ ರಿಕ್ರಿಯೇಷನ್ಸ್ ಕ್ಲಬ್ ಕಟ್ಟಡದ ಮೇಲೆ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿತ್ತು. ನಂತರ ಸರಿಪಡಿಸಲಾಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀರಂಗಪಟ್ಟಣ: ತಾಲ್ಲೂಕಿನ ಬಲ್ಲೇನಹಳ್ಳಿಯಲ್ಲಿ ರಾಷ್ಟ್ರಧ್ವಜವನ್ನು ಗುರುವಾರ ಅರ್ಧಕ್ಕೆ ಹಾರಿಸಿ ಪ್ರಮಾದ ಎಸಗಲಾಗಿದೆ. ಬಲ್ಲೇನಹಳ್ಳಿ ಗ್ರಾಮ ಪಂಚಾಯಿತಿ ಕಚೇರಿ ಆವರಣದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಕಂಬದ ಅರ್ಧಕ್ಕೆ ಧ್ವಜವನ್ನು ಹಾರಿಸಲಾಗಿದೆ.<br /> <br /> ಗ್ರಾಮ ಪಂಚಾಯಿತಿ ಅಧ್ಯಕ್ಷೆ ಲಕ್ಷ್ಮಮ್ಮ ಧ್ವಜಾರೋಹಣ ಮಾಡಿದ್ದಾರೆ. ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಂಜುಂಡಯ್ಯ ಧ್ವಜ ಕಟ್ಟಿದ್ದಾಗಿ `ಪ್ರಜಾವಾಣಿ~ಗೆ ತಿಳಿಸಿದ್ದಾರೆ. <br /> <br /> `ಪಿಡಿಓ ಹುದ್ದೆಗೆ ಬರುವ ಮೊದಲು ನಾನು ಶಿಕ್ಷಕನಾಗಿದ್ದೆ. ನಾನೇ ರಾಷ್ಟ್ರಧ್ವಜವನ್ನು ಕಟ್ಟಿದ್ದೇನೆ. ಹಗ್ಗ ತುಂಡಾಗಿದ್ದರಿಂದ ಧ್ವಜ ಅರ್ಧಕ್ಕೆ ಜಾರಿದೆ~ ಎಂದು ಅವರು ಹೇಳಿದ್ದಾರೆ. <br /> <br /> <strong>ತಲೆಕೆಳಗಾದ ಬಾವುಟ<br /> ಬಾಗೇಪಲ್ಲಿ:</strong> ಗಣರಾಜೋತ್ಸವ ಕಾರ್ಯಕ್ರಮದಲ್ಲಿ ಪಟ್ಟಣದ ಎರಡು ಕಡೆ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿದೆ.<br /> <br /> ಪಟ್ಟಣದ ಸಂತೆಮೈದಾನದ ರಸ್ತೆಯಲ್ಲಿ ಇರುವ ಸ್ಟೇಟ್ ಬ್ಯಾಂಕ್ ಆಫ್ ಮೈಸೂರು ಕಚೇರಿ ಕಟ್ಟಡದ ಮೇಲೆ ಗಣರಾಜ್ಯೋತ್ಸವ ಅಂಗವಾಗಿ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಲಾಯಿತು. ನಂತರ ಎಚ್ಚೆತ್ತುಕೊಂಡ ಬ್ಯಾಂಕ್ ಸಿಬ್ಬಂದಿ ಧ್ವಜವನ್ನು ಸರಿಪಡಿಸಿದರು.<br /> <br /> ಪಟ್ಟಣದ ಗೂಳೂರು ರಸ್ತೆಯಲ್ಲಿ ಇರುವ ಸಿಟಿಜನ್ ರಿಕ್ರಿಯೇಷನ್ಸ್ ಕ್ಲಬ್ ಕಟ್ಟಡದ ಮೇಲೆ ರಾಷ್ಟ್ರಧ್ವಜವನ್ನು ತಲೆಕೆಳಗಾಗಿ ಹಾರಿಸಲಾಗಿತ್ತು. ನಂತರ ಸರಿಪಡಿಸಲಾಯಿತು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>