<p>ರಾಮನಗರ: ‘ಪಡಿತರ ಚೀಟಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವೇ ಪರಿಶೀಲಿಸಿ ಅರ್ಹರಿಗೆ ಪಡಿತರ ಚೀಟಿ ನೀಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಮುಂದಿನ ಕೆಡಿಪಿ ಸಭೆಗೆ ಸೂಕ್ತ ಮಾಹಿತಿ ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ಸಿ.ರಾಜಣ್ಣ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗೆ ಸೂಚಿಸಿದರು.<br /> ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರು ವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀ ಲನಾ (ಕೆಡಿಪಿ) ಸಭೆಯಲ್ಲಿ ಅವರು ಮಾತನಾ ಡಿದರು.<br /> <br /> ಸಭೆಗೆ ಮಾಹಿತಿ ನೀಡಿದ ಆಹಾರ ಮತ್ತು ನಾಗರಿ ಪೂರೈಕೆಯ ಅಧಿಕಾರಿ, ಜಿಲ್ಲೆಯಲ್ಲಿ ಪಡಿತರ ಚೀಟಿಗಾಗಿ 67,948 ಅರ್ಜಿಗಳು ಬಂದಿದ್ದು, ಅದರಲ್ಲಿ 15,818 ಅರ್ಜಿಗಳ ಪರಿಶೀ ಲನಾ ಕೆಲಸ ಮುಗಿದಿದೆ. 4351 ಜನರಿಗೆ ಪಡಿತರ ಚೀಟಿ ನೀಡಲು ಸಿದ್ಧತೆ ನಡೆಸಲಾಗಿದೆ ಎಂದರು.<br /> <br /> ಆಗ ಪ್ರತಿಕ್ರಿಯಿಸಿದ ಅಧ್ಯಕ್ಷ ರಾಜಣ್ಣ, ಸುಮಾರು 68 ಸಾವಿರ ಅರ್ಜಿಗಳಲ್ಲಿ ಅರ್ಧದಷ್ಟೂ ಪರಿಶೀಲನಾ ಕೆಲಸ ನಡೆದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ತ್ವರಿತವಾಗಿ ಈ ಕೆಲಸವನ್ನು ಮುಗಿಸಿ ಮುಂದಿನ ಕೆಡಿಪಿ ಸಭೆಯ ವೇಳೆಗೆ ಪ್ರಗತಿ ತಿಳಿಸಬೇಕು ಎಂದು ನಿರ್ದೇಶನ ನೀಡಿದರು.<br /> <br /> <strong>ಗೇರು ಬೆಳೆಯಲು ಚಿಂತನೆ: </strong>ಜಲಾನಯನ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಮಾವು ಸಸಿ ವಿತರಣೆ ಕಡಿಮೆ ಮಾಡಿ ಗೇರು ಸಸಿಗಳ ವಿತರಣೆಯನ್ನು ಆರಂಭಿಸುವ ಕುರಿತು ಚಿಂತನೆ ನಡೆದಿದೆ ಎಂದು ಜಿಲ್ಲಾ ಜಲಾನಯನ ಅಧಿಕಾರಿ ಅಶೋಕ್ ಸಭೆಗೆ ಮಾಹಿತಿ ನೀಡಿದರು.<br /> <br /> ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತರು ಗೇರು ಸಸಿಗಳನ್ನು ಹೆಚ್ಚಿನ ಸಂಖ್ಯೆ ಹಾಕಿದ್ದಾರೆ. ವರ್ಷಕ್ಕೆ ಎರಡು ಬೆಳೆ ಬರುವುದರಿಂದ ಉತ್ತಮ ಆದಾಯವನ್ನು ಇದರಿಂದ ಪಡೆಯಬಹುದು ಎಂದ ಅವರು, ಈ ಸಂಬಂಧ ಜಿಲ್ಲೆಯ 30ರಿಂದ 40 ರೈತರನ್ನು ಚಿಕ್ಕಬಳ್ಳಾಪುರಕ್ಕೆ ಕರೆದುಕೊಂಡು ಹೋಗಿ, ಅಲ್ಲಿ ಗೇರು ಬೆಳೆಯಲಾಗಿರುವ ಪ್ರದೇಶಗಳ ವೀಕ್ಷಣೆ ಮತ್ತು ರೈತರ ಜತೆ ಚರ್ಚೆಗೆ ಆಸ್ಪದ ಕಲ್ಪಿಸಿಕೊಡುವ ಉದ್ದೇಶ ಇದೆ. ಆ ನಂತರ ಜಿಲ್ಲೆಯ ರೈತರು ಯಾವ ರೀತಿಯ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಿಕೊಂಡು ಜಿಲ್ಲೆಯಲ್ಲಿ ಗೇರು ಸಸಿಗಳನ್ನು ಬೆಳೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದರು.<br /> <br /> ಅಂಬೇಡ್ಕರ್ ಭವನ: ಜಿಲ್ಲೆಯ ಯಾವ ಗ್ರಾಮಗಳಲ್ಲಿ ಅಂಬೇಡ್ಕರ್ ಭವನದ ಅವಶ್ಯಕತೆ ಇದೆ ಎಂಬುದರ ಕುರಿತು ಗ್ರಾಮ ಮಟ್ಟದಲ್ಲಿ ಮಾಹಿತಿ ಪಡೆದು ಸಲ್ಲಿಸುವಂತೆ ಜಿ.ಪಂ ಅಧ್ಯಕ್ಷ ರಾಜಣ್ಣ ತಾ.ಪಂ ಇಒ ಗಳಿಗೆ ಸೂಚಿಸಿದರು.<br /> <br /> <strong>ನಿರಂತರ ಜ್ಯೋತಿ: </strong>ತಾಲ್ಲೂಕಿನ ತಿಮ್ಮೇಗೌಡನದೊಡ್ಡಿ, ಬೈರಮಂಗಲ, ಕಲ್ಲುಗೋಪಳ್ಳಿ, ಬಿಡದಿಗೆ ನಿರಂತರ ಜ್ಯೋತಿ ಯೋಜನೆಯಡಿ ದಿನದ 24 ಗಂಟೆಯೂ ವಿದ್ಯುತ್ ಸರಬರಾಜು ಮಾಡುವ ಕುರಿತು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು.<br /> <br /> ಸುತ್ತೋಲೆ ಕಳುಹಿಸಿ: ಜಿಲ್ಲೆಯ ಎಲ್ಲ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಅಂಗವಿಲರಿಗೆ ಶೆ 3ರಷ್ಟು ಅನುದಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ಶೇ 33ರಷ್ಟು ಅನುದಾನ ಸಮರ್ಪಕವಾಗಿ ಬಳಸುವಂತೆ ಸೂಚಿಸಿ ಸುತ್ತೋಲೆ ಹೊರಡಿಸುವಂತೆ ಅಧ್ಯಕ್ಷ ರಾಜಣ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಜಿ.ಪಂ. ಉಪಾಧ್ಯಕ್ಷೆ ಬಿ.ಎಸ್.ಗೌರಮ್ಮ, ಉಪ ಕಾರ್ಯದರ್ಶಿ ಲತಾ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ರಾಮನಗರ: ‘ಪಡಿತರ ಚೀಟಿಗಾಗಿ ಸಲ್ಲಿಸಿರುವ ಅರ್ಜಿಗಳನ್ನು ಶೀಘ್ರವೇ ಪರಿಶೀಲಿಸಿ ಅರ್ಹರಿಗೆ ಪಡಿತರ ಚೀಟಿ ನೀಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಮುಂದಿನ ಕೆಡಿಪಿ ಸಭೆಗೆ ಸೂಕ್ತ ಮಾಹಿತಿ ನೀಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಎಚ್.ಸಿ.ರಾಜಣ್ಣ ಅವರು ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಅಧಿಕಾರಿಗೆ ಸೂಚಿಸಿದರು.<br /> ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರು ವಾರ ನಡೆದ ವಿವಿಧ ಇಲಾಖೆಗಳ ಪ್ರಗತಿ ಪರಿಶೀ ಲನಾ (ಕೆಡಿಪಿ) ಸಭೆಯಲ್ಲಿ ಅವರು ಮಾತನಾ ಡಿದರು.<br /> <br /> ಸಭೆಗೆ ಮಾಹಿತಿ ನೀಡಿದ ಆಹಾರ ಮತ್ತು ನಾಗರಿ ಪೂರೈಕೆಯ ಅಧಿಕಾರಿ, ಜಿಲ್ಲೆಯಲ್ಲಿ ಪಡಿತರ ಚೀಟಿಗಾಗಿ 67,948 ಅರ್ಜಿಗಳು ಬಂದಿದ್ದು, ಅದರಲ್ಲಿ 15,818 ಅರ್ಜಿಗಳ ಪರಿಶೀ ಲನಾ ಕೆಲಸ ಮುಗಿದಿದೆ. 4351 ಜನರಿಗೆ ಪಡಿತರ ಚೀಟಿ ನೀಡಲು ಸಿದ್ಧತೆ ನಡೆಸಲಾಗಿದೆ ಎಂದರು.<br /> <br /> ಆಗ ಪ್ರತಿಕ್ರಿಯಿಸಿದ ಅಧ್ಯಕ್ಷ ರಾಜಣ್ಣ, ಸುಮಾರು 68 ಸಾವಿರ ಅರ್ಜಿಗಳಲ್ಲಿ ಅರ್ಧದಷ್ಟೂ ಪರಿಶೀಲನಾ ಕೆಲಸ ನಡೆದಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ತ್ವರಿತವಾಗಿ ಈ ಕೆಲಸವನ್ನು ಮುಗಿಸಿ ಮುಂದಿನ ಕೆಡಿಪಿ ಸಭೆಯ ವೇಳೆಗೆ ಪ್ರಗತಿ ತಿಳಿಸಬೇಕು ಎಂದು ನಿರ್ದೇಶನ ನೀಡಿದರು.<br /> <br /> <strong>ಗೇರು ಬೆಳೆಯಲು ಚಿಂತನೆ: </strong>ಜಲಾನಯನ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿ ಮಾವು ಸಸಿ ವಿತರಣೆ ಕಡಿಮೆ ಮಾಡಿ ಗೇರು ಸಸಿಗಳ ವಿತರಣೆಯನ್ನು ಆರಂಭಿಸುವ ಕುರಿತು ಚಿಂತನೆ ನಡೆದಿದೆ ಎಂದು ಜಿಲ್ಲಾ ಜಲಾನಯನ ಅಧಿಕಾರಿ ಅಶೋಕ್ ಸಭೆಗೆ ಮಾಹಿತಿ ನೀಡಿದರು.<br /> <br /> ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ರೈತರು ಗೇರು ಸಸಿಗಳನ್ನು ಹೆಚ್ಚಿನ ಸಂಖ್ಯೆ ಹಾಕಿದ್ದಾರೆ. ವರ್ಷಕ್ಕೆ ಎರಡು ಬೆಳೆ ಬರುವುದರಿಂದ ಉತ್ತಮ ಆದಾಯವನ್ನು ಇದರಿಂದ ಪಡೆಯಬಹುದು ಎಂದ ಅವರು, ಈ ಸಂಬಂಧ ಜಿಲ್ಲೆಯ 30ರಿಂದ 40 ರೈತರನ್ನು ಚಿಕ್ಕಬಳ್ಳಾಪುರಕ್ಕೆ ಕರೆದುಕೊಂಡು ಹೋಗಿ, ಅಲ್ಲಿ ಗೇರು ಬೆಳೆಯಲಾಗಿರುವ ಪ್ರದೇಶಗಳ ವೀಕ್ಷಣೆ ಮತ್ತು ರೈತರ ಜತೆ ಚರ್ಚೆಗೆ ಆಸ್ಪದ ಕಲ್ಪಿಸಿಕೊಡುವ ಉದ್ದೇಶ ಇದೆ. ಆ ನಂತರ ಜಿಲ್ಲೆಯ ರೈತರು ಯಾವ ರೀತಿಯ ಪ್ರತಿಕ್ರಿಯಿಸುತ್ತಾರೆ ಎಂಬುದನ್ನು ನೋಡಿಕೊಂಡು ಜಿಲ್ಲೆಯಲ್ಲಿ ಗೇರು ಸಸಿಗಳನ್ನು ಬೆಳೆಯುವ ಬಗ್ಗೆ ನಿರ್ಧರಿಸಲಾಗುವುದು ಎಂದರು.<br /> <br /> ಅಂಬೇಡ್ಕರ್ ಭವನ: ಜಿಲ್ಲೆಯ ಯಾವ ಗ್ರಾಮಗಳಲ್ಲಿ ಅಂಬೇಡ್ಕರ್ ಭವನದ ಅವಶ್ಯಕತೆ ಇದೆ ಎಂಬುದರ ಕುರಿತು ಗ್ರಾಮ ಮಟ್ಟದಲ್ಲಿ ಮಾಹಿತಿ ಪಡೆದು ಸಲ್ಲಿಸುವಂತೆ ಜಿ.ಪಂ ಅಧ್ಯಕ್ಷ ರಾಜಣ್ಣ ತಾ.ಪಂ ಇಒ ಗಳಿಗೆ ಸೂಚಿಸಿದರು.<br /> <br /> <strong>ನಿರಂತರ ಜ್ಯೋತಿ: </strong>ತಾಲ್ಲೂಕಿನ ತಿಮ್ಮೇಗೌಡನದೊಡ್ಡಿ, ಬೈರಮಂಗಲ, ಕಲ್ಲುಗೋಪಳ್ಳಿ, ಬಿಡದಿಗೆ ನಿರಂತರ ಜ್ಯೋತಿ ಯೋಜನೆಯಡಿ ದಿನದ 24 ಗಂಟೆಯೂ ವಿದ್ಯುತ್ ಸರಬರಾಜು ಮಾಡುವ ಕುರಿತು ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಲಾಗಿದೆ ಎಂದು ಬೆಸ್ಕಾಂ ಅಧಿಕಾರಿಗಳು ಸಭೆಗೆ ತಿಳಿಸಿದರು.<br /> <br /> ಸುತ್ತೋಲೆ ಕಳುಹಿಸಿ: ಜಿಲ್ಲೆಯ ಎಲ್ಲ ಇಲಾಖೆ ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಅಂಗವಿಲರಿಗೆ ಶೆ 3ರಷ್ಟು ಅನುದಾನ, ಮಹಿಳಾ ಮತ್ತು ಮಕ್ಕಳ ಕಲ್ಯಾಣಕ್ಕೆ ಶೇ 33ರಷ್ಟು ಅನುದಾನ ಸಮರ್ಪಕವಾಗಿ ಬಳಸುವಂತೆ ಸೂಚಿಸಿ ಸುತ್ತೋಲೆ ಹೊರಡಿಸುವಂತೆ ಅಧ್ಯಕ್ಷ ರಾಜಣ್ಣ ಅವರು ಅಧಿಕಾರಿಗಳಿಗೆ ಸೂಚಿಸಿದರು.<br /> <br /> ಜಿ.ಪಂ. ಉಪಾಧ್ಯಕ್ಷೆ ಬಿ.ಎಸ್.ಗೌರಮ್ಮ, ಉಪ ಕಾರ್ಯದರ್ಶಿ ಲತಾ, ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>