<p>ನವದೆಹಲಿ (ಪಿಟಿಐ): ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಹಲವಾರು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿರುವ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗವು (ಎನ್ಸಿಎಂ) ಇದೀಗ ಆ ಬೇಡಿಕೆಯನ್ನು ಬದಿಗೊತ್ತಿ, ಮಾನವ ಹಕ್ಕು ಆಯೋಗಕ್ಕೆ ನೀಡಿದಂತೆ ತನಗೂ ತನಿಖಾ ಅಧಿಕಾರವನ್ನು ಕೊಡಬೇಕೆಂದು ಒತ್ತಾಯಿಸಿದೆ.<br /> <br /> `ಎನ್ಸಿಎಂ ಕಾಯ್ದೆಗೆ ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಇಟ್ಟ ಬೇಡಿಕೆಯನ್ನು ಕೈಬಿಡಲಾಗಿದೆ. ಇದೇ ಕಾಯ್ದೆಗೆ ಸಾಂವಿಧಾನಿಕ ಸ್ಥಾನಮಾನ ನೀಡುವುದರಿಂದ ಏನೂ ವ್ಯತ್ಯಾಸವಾಗುವುದಿಲ್ಲ~ ಎಂದು ಆಯೋಗದ ಅಧ್ಯಕ್ಷ ವಜಹತ್ ಹಬೀಬುಲ್ಲಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.<br /> <br /> `ನ್ಯಾಯಾಂಗ ಹಾಗೂ ಆಡಳಿತದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಲು ಆಯೋಗಕ್ಕೆ ಅವಕಾಶ ನೀಡಬೇಕಾಗಿದೆ. ಹಾಗೆಂದು ಆಯೋಗವು ಇವುಗಳ ಸ್ಥಾನವನ್ನು ಆಕ್ರಮಿಸಿಕೊಳ್ಳಲಾಗದು~ ಎಂದೂ ಅವರು ಹೇಳಿದ್ದಾರೆ.<br /> <br /> ಈಗ ಜಾರಿಯಲ್ಲಿರುವ ಎನ್ಸಿಎಂ ಕಾಯ್ದೆಯಲ್ಲಿ ಕೆಲವು ಲೋಪಗಳಿಗೆ ಎನ್ನುವುದನ್ನು ಒಪ್ಪಿಕೊಂಡ ಅವರು `ಇದರಲ್ಲಿ ಸಾಕಷ್ಟು ತನಿಖಾ ಅಧಿಕಾರವಿಲ್ಲ~ ಎಂದಿದ್ದಾರೆ.</p>.<p> ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ನೀಡಲಾಗಿರುವ ತನಿಖಾ ಅಧಿಕಾರವನ್ನು ಅಲ್ಪಸಂಖ್ಯಾತ ಆಯೋಗಕ್ಕೂ ನೀಡಬೇಕು ಎನ್ನುವುದು ನಮ್ಮ ಬೇಡಿಕೆ~ ಎಂದಿದ್ದಾರೆ.<br /> <br /> `ಆಯೋಗವು ಎರಡು-ಮೂರು ತಿಂಗಳ ಹಿಂದೆಯೇ ಸಂಬಂಧಪಟ್ಟ ಸಚಿವಾಲಯದ ಮುಂದೆ ಬೇಡಿಕೆಗಳನ್ನು ಇಟ್ಟಿದೆ. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬಹುಶಃ ಸಚಿವಾಲಯವು ನಮ್ಮ ಬೇಡಿಕೆಗಳನ್ನು ಪರಿಶೀಲಿಸುತ್ತಿರಬಹುದು~ ಎಂದು ಹೇಳಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಹಲವಾರು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿರುವ ರಾಷ್ಟ್ರೀಯ ಅಲ್ಪಸಂಖ್ಯಾತ ಆಯೋಗವು (ಎನ್ಸಿಎಂ) ಇದೀಗ ಆ ಬೇಡಿಕೆಯನ್ನು ಬದಿಗೊತ್ತಿ, ಮಾನವ ಹಕ್ಕು ಆಯೋಗಕ್ಕೆ ನೀಡಿದಂತೆ ತನಗೂ ತನಿಖಾ ಅಧಿಕಾರವನ್ನು ಕೊಡಬೇಕೆಂದು ಒತ್ತಾಯಿಸಿದೆ.<br /> <br /> `ಎನ್ಸಿಎಂ ಕಾಯ್ದೆಗೆ ಸಾಂವಿಧಾನಿಕ ಸ್ಥಾನಮಾನಕ್ಕಾಗಿ ಇಟ್ಟ ಬೇಡಿಕೆಯನ್ನು ಕೈಬಿಡಲಾಗಿದೆ. ಇದೇ ಕಾಯ್ದೆಗೆ ಸಾಂವಿಧಾನಿಕ ಸ್ಥಾನಮಾನ ನೀಡುವುದರಿಂದ ಏನೂ ವ್ಯತ್ಯಾಸವಾಗುವುದಿಲ್ಲ~ ಎಂದು ಆಯೋಗದ ಅಧ್ಯಕ್ಷ ವಜಹತ್ ಹಬೀಬುಲ್ಲಾ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ.<br /> <br /> `ನ್ಯಾಯಾಂಗ ಹಾಗೂ ಆಡಳಿತದ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸಲು ಆಯೋಗಕ್ಕೆ ಅವಕಾಶ ನೀಡಬೇಕಾಗಿದೆ. ಹಾಗೆಂದು ಆಯೋಗವು ಇವುಗಳ ಸ್ಥಾನವನ್ನು ಆಕ್ರಮಿಸಿಕೊಳ್ಳಲಾಗದು~ ಎಂದೂ ಅವರು ಹೇಳಿದ್ದಾರೆ.<br /> <br /> ಈಗ ಜಾರಿಯಲ್ಲಿರುವ ಎನ್ಸಿಎಂ ಕಾಯ್ದೆಯಲ್ಲಿ ಕೆಲವು ಲೋಪಗಳಿಗೆ ಎನ್ನುವುದನ್ನು ಒಪ್ಪಿಕೊಂಡ ಅವರು `ಇದರಲ್ಲಿ ಸಾಕಷ್ಟು ತನಿಖಾ ಅಧಿಕಾರವಿಲ್ಲ~ ಎಂದಿದ್ದಾರೆ.</p>.<p> ರಾಷ್ಟ್ರೀಯ ಮಾನವ ಹಕ್ಕು ಆಯೋಗಕ್ಕೆ ನೀಡಲಾಗಿರುವ ತನಿಖಾ ಅಧಿಕಾರವನ್ನು ಅಲ್ಪಸಂಖ್ಯಾತ ಆಯೋಗಕ್ಕೂ ನೀಡಬೇಕು ಎನ್ನುವುದು ನಮ್ಮ ಬೇಡಿಕೆ~ ಎಂದಿದ್ದಾರೆ.<br /> <br /> `ಆಯೋಗವು ಎರಡು-ಮೂರು ತಿಂಗಳ ಹಿಂದೆಯೇ ಸಂಬಂಧಪಟ್ಟ ಸಚಿವಾಲಯದ ಮುಂದೆ ಬೇಡಿಕೆಗಳನ್ನು ಇಟ್ಟಿದೆ. ಆದರೆ ಈವರೆಗೆ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಬಹುಶಃ ಸಚಿವಾಲಯವು ನಮ್ಮ ಬೇಡಿಕೆಗಳನ್ನು ಪರಿಶೀಲಿಸುತ್ತಿರಬಹುದು~ ಎಂದು ಹೇಳಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>