<p>ಪುತ್ತೂರು: `ದೇಶದಲ್ಲಿ 100 ಅಲ್ಪಸಂಖ್ಯಾತ ಭಾಷೆಗಳಿದ್ದು, ಈ ಪೈಕಿ ಅತೀ ಹೆಚ್ಚು ಜನ ಸಮುದಾಯವನ್ನು ಒಳಗೊಂಡ ತುಳು ಭಾಷೆಯೇ ಅಗ್ರಸ್ಥಾನದಲ್ಲಿದೆ~ ಎಂದು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಾಲ್ತಾಡಿ ರಾಮಕೃಷ್ಣ ಆಚಾರ್ ಹೇಳಿದರು. <br /> <br /> ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆ ವಠಾರದಲ್ಲಿ ಅಕ್ಟೋಬರ್ 7-8ರಂದು ನಡೆಯಲಿರುವ ಅಖಿಲ ಭಾರತ ತುಳು ಸಮ್ಮೇಳನ ಪೂರ್ವತಯಾರಿ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಪುತ್ತೂರಿನ ಲಯನ್ಸ್ ಸೇವಾ ಸದನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. <br /> <br /> ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೆಮಾರ್ ಅಧ್ಯಕ್ಷತೆ ವಹಿಸಲಿದ್ದು, ವಿಶ್ರಾಂತ ಕುಲಪತಿ ವಿವೇಕ ರೈ ಪ್ರಧಾನ ಭಾಷಣ ಮಾಡುವರು. ಸಚಿವ ವಿ.ಎಸ್.ಆಚಾರ್ಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು ಎಂದು ಅವರು ತಿಳಿಸಿದರು.<br /> <br /> ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಿದ್ದರು. <br /> ಪುತ್ತೂರು ಕರ್ನಾಟಕ ಸಂಘ ಅಧ್ಯಕ್ಷರಾದ ಸಾಹಿತಿ ಬಿ.ಪುರಂದರ ಭಟ್ ಮತ್ತು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ. ಬಿ.ಜೆ.ಸುವರ್ಣ ಪ್ರಚಾರದ ಬ್ಯಾನರ್ ಬಿಡುಗಡೆ ಮಾಡಿದರು. <br /> <br /> ಅಕಾಡೆಮಿ ಸದಸ್ಯರಾದ ಆಶೋಕ್ ಶೆಟ್ಟಿ ಸರಪ್ಪಾಡಿ, ಉದಯ ಧರ್ಮಸ್ಥಳ, ಪ್ರೇಮಲತಾ ರಾವ್, ಸ್ವಾಗತ ಸಮಿತಿ ಉಪಾಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಹೆಬ್ಬಾರಬೈಲು ಮತ್ತಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪುತ್ತೂರು: `ದೇಶದಲ್ಲಿ 100 ಅಲ್ಪಸಂಖ್ಯಾತ ಭಾಷೆಗಳಿದ್ದು, ಈ ಪೈಕಿ ಅತೀ ಹೆಚ್ಚು ಜನ ಸಮುದಾಯವನ್ನು ಒಳಗೊಂಡ ತುಳು ಭಾಷೆಯೇ ಅಗ್ರಸ್ಥಾನದಲ್ಲಿದೆ~ ಎಂದು ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಪಾಲ್ತಾಡಿ ರಾಮಕೃಷ್ಣ ಆಚಾರ್ ಹೇಳಿದರು. <br /> <br /> ಸವಣೂರಿನ ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆ ವಠಾರದಲ್ಲಿ ಅಕ್ಟೋಬರ್ 7-8ರಂದು ನಡೆಯಲಿರುವ ಅಖಿಲ ಭಾರತ ತುಳು ಸಮ್ಮೇಳನ ಪೂರ್ವತಯಾರಿ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಪುತ್ತೂರಿನ ಲಯನ್ಸ್ ಸೇವಾ ಸದನದಲ್ಲಿ ನಡೆದ ಸಮಾಲೋಚನಾ ಸಭೆಯಲ್ಲಿ ಅವರು ಮಾತನಾಡಿದರು. <br /> <br /> ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಸಮ್ಮೇಳನ ಉದ್ಘಾಟಿಸಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಪಾಲೆಮಾರ್ ಅಧ್ಯಕ್ಷತೆ ವಹಿಸಲಿದ್ದು, ವಿಶ್ರಾಂತ ಕುಲಪತಿ ವಿವೇಕ ರೈ ಪ್ರಧಾನ ಭಾಷಣ ಮಾಡುವರು. ಸಚಿವ ವಿ.ಎಸ್.ಆಚಾರ್ಯ ಸಮಾರೋಪ ಸಮಾರಂಭದಲ್ಲಿ ಭಾಗವಹಿಸುವರು ಎಂದು ಅವರು ತಿಳಿಸಿದರು.<br /> <br /> ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷ ಕೆ.ಸೀತಾರಾಮ ರೈ ಸವಣೂರು ಅಧ್ಯಕ್ಷತೆ ವಹಿಸಿದ್ದರು. <br /> ಪುತ್ತೂರು ಕರ್ನಾಟಕ ಸಂಘ ಅಧ್ಯಕ್ಷರಾದ ಸಾಹಿತಿ ಬಿ.ಪುರಂದರ ಭಟ್ ಮತ್ತು ವಿದ್ಯಾರಶ್ಮಿ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತಾಧಿಕಾರಿ ಪ್ರೊ. ಬಿ.ಜೆ.ಸುವರ್ಣ ಪ್ರಚಾರದ ಬ್ಯಾನರ್ ಬಿಡುಗಡೆ ಮಾಡಿದರು. <br /> <br /> ಅಕಾಡೆಮಿ ಸದಸ್ಯರಾದ ಆಶೋಕ್ ಶೆಟ್ಟಿ ಸರಪ್ಪಾಡಿ, ಉದಯ ಧರ್ಮಸ್ಥಳ, ಪ್ರೇಮಲತಾ ರಾವ್, ಸ್ವಾಗತ ಸಮಿತಿ ಉಪಾಧ್ಯಕ್ಷ ಕುಂಬ್ರ ದುರ್ಗಾಪ್ರಸಾದ್ ರೈ, ತುಳು ಒಕ್ಕೂಟದ ಪ್ರಧಾನ ಕಾರ್ಯದರ್ಶಿ ವಿಜಯ ಕುಮಾರ್ ಹೆಬ್ಬಾರಬೈಲು ಮತ್ತಿತರರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>