<p>ನವದೆಹಲಿ (ಪಿಟಿಐ): ಶಿಕ್ಷಣ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಶೇಕಡಾ 27 ಕೋಟಾದ ಒಳಗಡೆಯೇ ಅಲ್ಪಸಂಖ್ಯಾತರಿಗೆ ಶೇಕಡಾ 4.5 ಕೋಟಾ ಒದಗಿಸಿದ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರದ್ದು ಪಡಿಸಿ ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ ಆಜ್ಞೆಯನ್ನು ತಡೆ ಹಿಡಿಯಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿತು.<br /> <br /> ಈ ವಿಚಾರದ ಬಗ್ಗೆ ಬುಧವಾರ ವಿಚಾರಣೆಗೆ ದಿನ ನಿಗದಿ ಪಡಿಸಿದ ಸುಪ್ರೀಂಕೋರ್ಟ್ ಅಲ್ಪಸಂಖ್ಯಾತರಿಗೆ ಶೇಕಡಾ 4.5ರಷ್ಟು ಕೋಟಾ ಒದಗಿಸುವ ಸಂಬಂಧ ಪೂರಕ ದಾಖಲೆಗಳನ್ನು ಹಾಜರು ಪಡಿಸುವಂತೆ ಕೇಂದ್ರಕ್ಕೆ ಸೂಚಿಸಿತು.<br /> <br /> ಅಲ್ಪಸಂಖ್ಯಾತರಿಗೆ ಕೋಟಾ ನೀಡುವುದಕ್ಕೆ ಸಂಬಂಧಿಸಿದ ನೀತಿಯನ್ನು ಸಮರ್ಥಿಸುವಂತಹ ಯಾವುದೇ ದಾಖಲೆಯನ್ನು ಹಾಜರು ಪಡಿಸದೇ ಇದ್ದುದಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಸುಪ್ರೀಂಕೋರ್ಟ್ ತೀವ್ರ ಅಸಮಾಧಾನವನ್ನೂ ವ್ಯಕ್ತ ಪಡಿಸಿತು.<br /> <br /> ಇಂತಹ ~ಸೂಕ್ಷ್ಮ ವಿಚಾರ~ವನ್ನು ನಿಭಾಯಿಸಿದ ರೀತಿಗಾಗಿಯೂ ನ್ಯಾಯಾಲಯವು ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಇತರ ಹಿಂದುಳಿದ ವರ್ಗಗಳ ಶೇಕಡಾ 27 ಕೋಟಾವನ್ನು ಹೇಗೆ ಒಡೆಯುತ್ತೀರಿ? ಇಂದು ಒಂದು ವಿಚಾರಕ್ಕಾಗಿ ಒಡೆದರೆ, ನಾಳೆ ಇನ್ನೊಂದು ವಿಚಾರಕ್ಕಾಗಿ ಒಡೆಯಬಹುದಲ್ಲ? ಎಂದು ನ್ಯಾಯಾಲಯ ಪ್ರಶ್ನಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಶಿಕ್ಷಣ ಸಂಸ್ಥೆಗಳಲ್ಲಿ ಇತರ ಹಿಂದುಳಿದ ವರ್ಗಗಳ (ಒಬಿಸಿ) ಶೇಕಡಾ 27 ಕೋಟಾದ ಒಳಗಡೆಯೇ ಅಲ್ಪಸಂಖ್ಯಾತರಿಗೆ ಶೇಕಡಾ 4.5 ಕೋಟಾ ಒದಗಿಸಿದ ಕೇಂದ್ರ ಸರ್ಕಾರದ ಅಧಿಸೂಚನೆಯನ್ನು ರದ್ದು ಪಡಿಸಿ ಆಂಧ್ರ ಪ್ರದೇಶ ಹೈಕೋರ್ಟ್ ನೀಡಿದ ಆಜ್ಞೆಯನ್ನು ತಡೆ ಹಿಡಿಯಲು ಸುಪ್ರೀಂಕೋರ್ಟ್ ಸೋಮವಾರ ನಿರಾಕರಿಸಿತು.<br /> <br /> ಈ ವಿಚಾರದ ಬಗ್ಗೆ ಬುಧವಾರ ವಿಚಾರಣೆಗೆ ದಿನ ನಿಗದಿ ಪಡಿಸಿದ ಸುಪ್ರೀಂಕೋರ್ಟ್ ಅಲ್ಪಸಂಖ್ಯಾತರಿಗೆ ಶೇಕಡಾ 4.5ರಷ್ಟು ಕೋಟಾ ಒದಗಿಸುವ ಸಂಬಂಧ ಪೂರಕ ದಾಖಲೆಗಳನ್ನು ಹಾಜರು ಪಡಿಸುವಂತೆ ಕೇಂದ್ರಕ್ಕೆ ಸೂಚಿಸಿತು.<br /> <br /> ಅಲ್ಪಸಂಖ್ಯಾತರಿಗೆ ಕೋಟಾ ನೀಡುವುದಕ್ಕೆ ಸಂಬಂಧಿಸಿದ ನೀತಿಯನ್ನು ಸಮರ್ಥಿಸುವಂತಹ ಯಾವುದೇ ದಾಖಲೆಯನ್ನು ಹಾಜರು ಪಡಿಸದೇ ಇದ್ದುದಕ್ಕಾಗಿ ಕೇಂದ್ರ ಸರ್ಕಾರದ ಮೇಲೆ ಸುಪ್ರೀಂಕೋರ್ಟ್ ತೀವ್ರ ಅಸಮಾಧಾನವನ್ನೂ ವ್ಯಕ್ತ ಪಡಿಸಿತು.<br /> <br /> ಇಂತಹ ~ಸೂಕ್ಷ್ಮ ವಿಚಾರ~ವನ್ನು ನಿಭಾಯಿಸಿದ ರೀತಿಗಾಗಿಯೂ ನ್ಯಾಯಾಲಯವು ಕೇಂದ್ರ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿತು. ಇತರ ಹಿಂದುಳಿದ ವರ್ಗಗಳ ಶೇಕಡಾ 27 ಕೋಟಾವನ್ನು ಹೇಗೆ ಒಡೆಯುತ್ತೀರಿ? ಇಂದು ಒಂದು ವಿಚಾರಕ್ಕಾಗಿ ಒಡೆದರೆ, ನಾಳೆ ಇನ್ನೊಂದು ವಿಚಾರಕ್ಕಾಗಿ ಒಡೆಯಬಹುದಲ್ಲ? ಎಂದು ನ್ಯಾಯಾಲಯ ಪ್ರಶ್ನಿಸಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>