<p>ಯಲಹಂಕ: ಇಲ್ಲಿನ ಪರಿಸರ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳು ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ಹಾಗೂ ಸ್ಥಳೀಯ ನಾಗರಿಕರ ಸಹಯೋಗದೊಂದಿಗೆ ಅಲ್ಲಾಳಸಂದ್ರ ಕೆರೆಯ ಆವರಣದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು.<br /> <br /> ಶಾಸಕ ಎಸ್.ಆರ್.ವಿಶ್ವನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.<br /> <br /> ವಲಯಕ್ಕೆ ಮಂಜೂರಾದ ಅನುದಾನದಲ್ಲಿ ₨ 25,000 ಮೊತ್ತವನ್ನು ಕೆರೆ ಸ್ವಚ್ಛಗೊಳಿಸುವ ಕಾರ್ಯಕ್ಕಾಗಿ ಉಪಯೋಗಿಸಲು ನಿರ್ಧರಿಸಲಾಗಿದೆ. ಪರಿಸರ ಸಂರಕ್ಷಣಾ ಕಾರ್ಯದಲ್ಲಿ ಸಂಘ–ಸಂಸ್ಥೆಗಳು ಹಾಗೂ ನಾಗರಿಕರು ಕೈಜೋಡಿಸಬೇಕು ಎಂದು ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತ ವಿರೂಪಾಕ್ಷ ಮೈಸೂರು ಮನವಿ ಮಾಡಿದರು.<br /> <br /> ಸಂಘಟನೆ ಅಧ್ಯಕ್ಷ ಡಾ.ಎಸ್.ಟಿ.ತಾಯಪ್ಪ ಮಾತನಾಡಿ , ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು, ಸ್ಥಳೀಯ ನಾಗರಿಕರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಎರಡನೇ ಶ್ರಮದಾನ ಕಾರ್ಯ ಇದಾಗಿದ್ದು, ಕೆರೆಯ ಪಾದಚಾರಿ ರಸ್ತೆಯನ್ನು ಸ್ವಚ್ಛಗೊಳಿಸುವ, ಕಳೆ ಕೀಳುವ ಹಾಗೂ ನೀರಿನಲ್ಲಿ ಬೆಳೆದಿರುವ ಗಿಡಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.<br /> <br /> ಇದೇ ಸಂದರ್ಭದಲ್ಲಿ ಸಂಗಮ್ ಸೈಕಲ್ ಶಾಪ್ ವತಿಯಿಂದ ಕೆರೆಯ ರಕ್ಷಣೆಗಾಗಿ ನಿಯೋಜಿಸಿರುವ ಭದ್ರತಾ ಸಿಬ್ಬಂದಿಗೆ 3 ಬೈಸಿಕಲ್ಗಳನ್ನು ಉಚಿತವಾಗಿ ನೀಡಲಾಯಿತು.<br /> <br /> ಬಿಬಿಎಂಪಿ ಯಲಹಂಕ ವಲಯದ ಉಪ ಆಯುಕ್ತೆ ಸರೋಜಾದೇವಿ, ಬಿಬಿಎಂಪಿ ತೋಟಗಾರಿಕೆ ಸ್ಥಾಯಿ<br /> ಸಮಿತಿ ಅಧ್ಯಕ್ಷ ಮುನಿರಾಜು, ಯಲಹಂಕ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಅ.ಬ.ಶಿವ<br /> ಕುಮಾರ್, ಪ್ರಾಂಶುಪಾಲ ನಾಗರಾಜ್ ಮೊದಲಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಯಲಹಂಕ: ಇಲ್ಲಿನ ಪರಿಸರ ಸಂಘಟನೆಗಳ ಒಕ್ಕೂಟದ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳು ಮತ್ತು ಸರ್ಕಾರಿ ಪದವಿಪೂರ್ವ ಕಾಲೇಜಿನ ಎನ್ಎಸ್ಎಸ್ ಘಟಕ ಹಾಗೂ ಸ್ಥಳೀಯ ನಾಗರಿಕರ ಸಹಯೋಗದೊಂದಿಗೆ ಅಲ್ಲಾಳಸಂದ್ರ ಕೆರೆಯ ಆವರಣದಲ್ಲಿ ಶ್ರಮದಾನ ಕಾರ್ಯಕ್ರಮ ನಡೆಯಿತು.<br /> <br /> ಶಾಸಕ ಎಸ್.ಆರ್.ವಿಶ್ವನಾಥ್ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.<br /> <br /> ವಲಯಕ್ಕೆ ಮಂಜೂರಾದ ಅನುದಾನದಲ್ಲಿ ₨ 25,000 ಮೊತ್ತವನ್ನು ಕೆರೆ ಸ್ವಚ್ಛಗೊಳಿಸುವ ಕಾರ್ಯಕ್ಕಾಗಿ ಉಪಯೋಗಿಸಲು ನಿರ್ಧರಿಸಲಾಗಿದೆ. ಪರಿಸರ ಸಂರಕ್ಷಣಾ ಕಾರ್ಯದಲ್ಲಿ ಸಂಘ–ಸಂಸ್ಥೆಗಳು ಹಾಗೂ ನಾಗರಿಕರು ಕೈಜೋಡಿಸಬೇಕು ಎಂದು ಬಿಬಿಎಂಪಿ ಯಲಹಂಕ ವಲಯದ ಜಂಟಿ ಆಯುಕ್ತ ವಿರೂಪಾಕ್ಷ ಮೈಸೂರು ಮನವಿ ಮಾಡಿದರು.<br /> <br /> ಸಂಘಟನೆ ಅಧ್ಯಕ್ಷ ಡಾ.ಎಸ್.ಟಿ.ತಾಯಪ್ಪ ಮಾತನಾಡಿ , ಜನಪ್ರತಿನಿಧಿಗಳು, ವಿವಿಧ ಸಂಘಟನೆಗಳು, ಸ್ಥಳೀಯ ನಾಗರಿಕರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ ನಡೆಯುತ್ತಿರುವ ಎರಡನೇ ಶ್ರಮದಾನ ಕಾರ್ಯ ಇದಾಗಿದ್ದು, ಕೆರೆಯ ಪಾದಚಾರಿ ರಸ್ತೆಯನ್ನು ಸ್ವಚ್ಛಗೊಳಿಸುವ, ಕಳೆ ಕೀಳುವ ಹಾಗೂ ನೀರಿನಲ್ಲಿ ಬೆಳೆದಿರುವ ಗಿಡಗಳನ್ನು ತೆರವುಗೊಳಿಸುವ ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು.<br /> <br /> ಇದೇ ಸಂದರ್ಭದಲ್ಲಿ ಸಂಗಮ್ ಸೈಕಲ್ ಶಾಪ್ ವತಿಯಿಂದ ಕೆರೆಯ ರಕ್ಷಣೆಗಾಗಿ ನಿಯೋಜಿಸಿರುವ ಭದ್ರತಾ ಸಿಬ್ಬಂದಿಗೆ 3 ಬೈಸಿಕಲ್ಗಳನ್ನು ಉಚಿತವಾಗಿ ನೀಡಲಾಯಿತು.<br /> <br /> ಬಿಬಿಎಂಪಿ ಯಲಹಂಕ ವಲಯದ ಉಪ ಆಯುಕ್ತೆ ಸರೋಜಾದೇವಿ, ಬಿಬಿಎಂಪಿ ತೋಟಗಾರಿಕೆ ಸ್ಥಾಯಿ<br /> ಸಮಿತಿ ಅಧ್ಯಕ್ಷ ಮುನಿರಾಜು, ಯಲಹಂಕ ನಾಗರಿಕ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಅ.ಬ.ಶಿವ<br /> ಕುಮಾರ್, ಪ್ರಾಂಶುಪಾಲ ನಾಗರಾಜ್ ಮೊದಲಾದವರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>