<p><strong>ಪೀಣ್ಯ ದಾಸರಹಳ್ಳಿ:</strong> `ಮಹಿಳೆಯರು ಪುರುಷರಷ್ಟೇ ಸಮಾನರಾಗಿದ್ದರೂ ಸಂಸಾರಿಕ ಜಂಜಾಟದಿಂದ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ~ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಸರೋಜಿನಿ ಭಾರದ್ವಾಜ್ ವಿಷಾದಿಸಿದರು.<br /> <br /> ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಹೆಸರಘಟ್ಟ ರಸ್ತೆಯಲ್ಲಿರುವ ಸೌಂದರ್ಯ ನಿರ್ವಹಣಾ ಹಾಗೂ ವಿಜ್ಞಾನ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ `ಜ್ಞಾನ ಆರ್ಥಿಕತೆ~ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.<br /> <br /> `ತೊಟ್ಟಿಲು ತೂಗುವ ಕೈಗಳು ಇಂದು ಜಗತ್ತನ್ನೇ ತೂಗುತ್ತಿವೆ. ಅವಕಾಶ ಸಿಕ್ಕರೆ ಮಹಿಳೆ ಎಲ್ಲ ರಂಗಗಳಲ್ಲಿಯೂ ಸಾಧನೆ ಮಾಡಬಲ್ಲಳು. ವಂಚಿತ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ನಡೆಯಬೇಕಾಗಿದೆ~ ಎಂದರು. <br /> <br /> ಸಂಸ್ಥೆಯ ಅಧ್ಯಕ್ಷ ಸೌಂದರ್ಯ ಮಂಜಪ್ಪ, `ಸಂಪತ್ತಿನ ಕೊರತೆ ಹಿನ್ನೆಲೆಯಲ್ಲಿ ಮುಂದಿನ ಮತ್ತು ಇಂದಿನ ಪೀಳಿಗೆ ಜ್ಞಾನ ಆರ್ಥಿಕತೆಯನ್ನು ಮೂಲವಾಗಿ ಪಡೆಯಬೇಕಾದ ಅವಶ್ಯಕತೆ ಇದೆ~ ಎಂದರು. ಬೆಂಗಳೂರು ವಿವಿ ಕುಲಪತಿ ಡಾ.ಎನ್.ಪ್ರಭುದೇವ್, ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಡೀನ್ ಡಾ.ಎಂ.ರಾಮಚಂದ್ರಗೌಡ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪೀಣ್ಯ ದಾಸರಹಳ್ಳಿ:</strong> `ಮಹಿಳೆಯರು ಪುರುಷರಷ್ಟೇ ಸಮಾನರಾಗಿದ್ದರೂ ಸಂಸಾರಿಕ ಜಂಜಾಟದಿಂದ ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ~ ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಸರೋಜಿನಿ ಭಾರದ್ವಾಜ್ ವಿಷಾದಿಸಿದರು.<br /> <br /> ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಹೆಸರಘಟ್ಟ ರಸ್ತೆಯಲ್ಲಿರುವ ಸೌಂದರ್ಯ ನಿರ್ವಹಣಾ ಹಾಗೂ ವಿಜ್ಞಾನ ಸಂಸ್ಥೆಯ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ `ಜ್ಞಾನ ಆರ್ಥಿಕತೆ~ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿದರು.<br /> <br /> `ತೊಟ್ಟಿಲು ತೂಗುವ ಕೈಗಳು ಇಂದು ಜಗತ್ತನ್ನೇ ತೂಗುತ್ತಿವೆ. ಅವಕಾಶ ಸಿಕ್ಕರೆ ಮಹಿಳೆ ಎಲ್ಲ ರಂಗಗಳಲ್ಲಿಯೂ ಸಾಧನೆ ಮಾಡಬಲ್ಲಳು. ವಂಚಿತ ಮಹಿಳೆಯರನ್ನು ಸಮಾಜದ ಮುಖ್ಯವಾಹಿನಿಗೆ ತರುವ ಪ್ರಯತ್ನ ನಡೆಯಬೇಕಾಗಿದೆ~ ಎಂದರು. <br /> <br /> ಸಂಸ್ಥೆಯ ಅಧ್ಯಕ್ಷ ಸೌಂದರ್ಯ ಮಂಜಪ್ಪ, `ಸಂಪತ್ತಿನ ಕೊರತೆ ಹಿನ್ನೆಲೆಯಲ್ಲಿ ಮುಂದಿನ ಮತ್ತು ಇಂದಿನ ಪೀಳಿಗೆ ಜ್ಞಾನ ಆರ್ಥಿಕತೆಯನ್ನು ಮೂಲವಾಗಿ ಪಡೆಯಬೇಕಾದ ಅವಶ್ಯಕತೆ ಇದೆ~ ಎಂದರು. ಬೆಂಗಳೂರು ವಿವಿ ಕುಲಪತಿ ಡಾ.ಎನ್.ಪ್ರಭುದೇವ್, ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ವಿಭಾಗದ ಡೀನ್ ಡಾ.ಎಂ.ರಾಮಚಂದ್ರಗೌಡ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>