<p><strong>ಮೈಸೂರು: </strong> `ಕೇಂದ್ರ ಚುನಾವಣಾ ಆಯೋಗವು ಫೆಬ್ರುವರಿ ತಿಂಗಳಲ್ಲೇ ಚುನಾವಣೆ ನಡೆಸಿದರೆ ಅದಕ್ಕೆ ಬಿಜೆಪಿ ಸಿದ್ಧ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೋಮವಾರ ತಿಳಿಸಿದರು.<br /> <br /> ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಶೆಟ್ಟರ್ ಅವರು, ಲಲಿತ ಮಹಲ್ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. ಇದರಲ್ಲಿ ಅನುಮಾನ ಬೇಡ. ಮೊದಲೇ ಚುನಾವಣೆ ನಡೆದರೂ ಚಿಂತೆ ಇಲ್ಲ~ ಎಂದರು.<br /> <br /> `ಬಿಜೆಪಿ ವರಿಷ್ಠ ಅಡ್ವಾಣಿ ವಿರುದ್ಧ ಖಾರವಾಗಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವುದು ಉತ್ತಮ ಬೆಳವಣಿಗೆ~ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>`ವಿಧಾನಸಭಾ ಕ್ಷೇತ್ರಗಳ ಆಧಾರದ ಮೇಲೆ ತಾಲ್ಲೂಕು ರಚನೆ ಆಗಬೇಕು ಎಂಬುದರ ಬಗ್ಗೆ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುವುದು. ವಿಧಾನಸಭಾ ಕ್ಷೇತ್ರಗಳನ್ನು ತಾಲ್ಲೂಕುಗಳಾಗಿ ಮಾಡಬೇಕು ಎಂಬುದು ಸ್ಥಳೀಯ ಜನರ ಆಶಯವಾಗಿದೆ. ತಾಲ್ಲೂಕುಗಳ ರಚನೆಗೆ ಸಂಬಂಧಿಸಿದಂತೆ ಶೀಘ್ರವೇ ಸಂಪುಟ ಉಪ ಸಮಿತಿ ರಚಿಸಲಾಗುವುದು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು: </strong> `ಕೇಂದ್ರ ಚುನಾವಣಾ ಆಯೋಗವು ಫೆಬ್ರುವರಿ ತಿಂಗಳಲ್ಲೇ ಚುನಾವಣೆ ನಡೆಸಿದರೆ ಅದಕ್ಕೆ ಬಿಜೆಪಿ ಸಿದ್ಧ~ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಸೋಮವಾರ ತಿಳಿಸಿದರು.<br /> <br /> ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ನಗರಕ್ಕೆ ಆಗಮಿಸಿದ್ದ ಶೆಟ್ಟರ್ ಅವರು, ಲಲಿತ ಮಹಲ್ ಹೆಲಿಪ್ಯಾಡ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, `ಸರ್ಕಾರ ಅವಧಿ ಪೂರ್ಣಗೊಳಿಸಲಿದೆ. ಇದರಲ್ಲಿ ಅನುಮಾನ ಬೇಡ. ಮೊದಲೇ ಚುನಾವಣೆ ನಡೆದರೂ ಚಿಂತೆ ಇಲ್ಲ~ ಎಂದರು.<br /> <br /> `ಬಿಜೆಪಿ ವರಿಷ್ಠ ಅಡ್ವಾಣಿ ವಿರುದ್ಧ ಖಾರವಾಗಿ ಮಾತನಾಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ತಮ್ಮ ಹೇಳಿಕೆ ಬಗ್ಗೆ ವಿಷಾದ ವ್ಯಕ್ತಪಡಿಸಿರುವುದು ಉತ್ತಮ ಬೆಳವಣಿಗೆ~ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p>.<p>`ವಿಧಾನಸಭಾ ಕ್ಷೇತ್ರಗಳ ಆಧಾರದ ಮೇಲೆ ತಾಲ್ಲೂಕು ರಚನೆ ಆಗಬೇಕು ಎಂಬುದರ ಬಗ್ಗೆ ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗುವುದು. ವಿಧಾನಸಭಾ ಕ್ಷೇತ್ರಗಳನ್ನು ತಾಲ್ಲೂಕುಗಳಾಗಿ ಮಾಡಬೇಕು ಎಂಬುದು ಸ್ಥಳೀಯ ಜನರ ಆಶಯವಾಗಿದೆ. ತಾಲ್ಲೂಕುಗಳ ರಚನೆಗೆ ಸಂಬಂಧಿಸಿದಂತೆ ಶೀಘ್ರವೇ ಸಂಪುಟ ಉಪ ಸಮಿತಿ ರಚಿಸಲಾಗುವುದು~ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>