<p><strong>ದಾವಣಗೆರೆ:</strong> ಅವರಿಗೇನು ಕನಸು ಬಿದ್ದಿತ್ತೇ?<br /> <br /> - `ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಕೇವಲ ಒಂದು ವರ್ಷ ಇರುತ್ತಾರೆ' ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ತೋಟಗಾರಿಕೆ ಮತ್ತು ಎಪಿಎಂಸಿ ಸಚಿವ ಶಾಮನೂರು ಶಿವಶಂಕರಪ್ಪ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದು ಹೀಗೆ.<br /> <br /> ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಸಿದ್ದರಾಮಯ್ಯ ಐದು ವರ್ಷವೂ ಮುಖ್ಯಮಂತ್ರಿಯಾಗಿರುತ್ತಾರೆ. ಯಡಿಯೂರಪ್ಪ ಅವರಿಗಾಗಲೀ, ಜನರಿಗಾಗಲೀ ಭಯ ಬೇಡ' ಎಂದು ಹೇಳಿದರು.<br /> <br /> ತೋಟಗಾರಿಕೆ ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ. ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಕ್ಕೆ ಹಣಕಾಸಿನ ಕೊರತೆ ಇಲ್ಲ. ಕೇಂದ್ರ ಸಚಿವರೊಂದಿಗೆ ವ್ಯವಹರಿಸಿ ಹೆಚ್ಚಿನ ಅನುದಾನ ತರಲಾಗುವುದು.<br /> <br /> ಬೆಳೆಗಾರರಿಗೆ ಹೆಚ್ಚಿನ ಸಬ್ಸಿಡಿ ಕೊಡಿಸಲಾಗುವುದು. ಪುಷ್ಪೋದ್ಯಮ ಹಾಗೂ ತೋಟಗಾರಿಕೆ ಬೆಳೆಗಳಿಗೆ ಉತ್ತೇಜನ ನೀಡಲಾಗುವುದು. ಅದರಲ್ಲೂ ದಾಳಿಂಬೆ, ದ್ರಾಕ್ಷಿ ಮೊದಲಾದ ಹಣ್ಣಿನ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲು ಪ್ರೋತ್ಸಾಹಿಸಲಾಗುವುದು. ರಫ್ತು ಮಾಡುವುದಕ್ಕೆ ಬಹಳಷ್ಟು ಅವಕಾಗಳಿವೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ದಾವಣಗೆರೆ:</strong> ಅವರಿಗೇನು ಕನಸು ಬಿದ್ದಿತ್ತೇ?<br /> <br /> - `ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಿ ಕೇವಲ ಒಂದು ವರ್ಷ ಇರುತ್ತಾರೆ' ಎಂಬ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿಕೆಗೆ ತೋಟಗಾರಿಕೆ ಮತ್ತು ಎಪಿಎಂಸಿ ಸಚಿವ ಶಾಮನೂರು ಶಿವಶಂಕರಪ್ಪ ವ್ಯಂಗ್ಯವಾಗಿ ಪ್ರತಿಕ್ರಿಯೆ ನೀಡಿದ್ದು ಹೀಗೆ.<br /> <br /> ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಸಿದ್ದರಾಮಯ್ಯ ಐದು ವರ್ಷವೂ ಮುಖ್ಯಮಂತ್ರಿಯಾಗಿರುತ್ತಾರೆ. ಯಡಿಯೂರಪ್ಪ ಅವರಿಗಾಗಲೀ, ಜನರಿಗಾಗಲೀ ಭಯ ಬೇಡ' ಎಂದು ಹೇಳಿದರು.<br /> <br /> ತೋಟಗಾರಿಕೆ ಇಲಾಖೆಯ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲು ಸಾಧ್ಯವಾಗಿಲ್ಲ. ಇಲಾಖೆಯಲ್ಲಿ ಅಭಿವೃದ್ಧಿ ಕಾರ್ಯಕ್ರಮಕ್ಕೆ ಹಣಕಾಸಿನ ಕೊರತೆ ಇಲ್ಲ. ಕೇಂದ್ರ ಸಚಿವರೊಂದಿಗೆ ವ್ಯವಹರಿಸಿ ಹೆಚ್ಚಿನ ಅನುದಾನ ತರಲಾಗುವುದು.<br /> <br /> ಬೆಳೆಗಾರರಿಗೆ ಹೆಚ್ಚಿನ ಸಬ್ಸಿಡಿ ಕೊಡಿಸಲಾಗುವುದು. ಪುಷ್ಪೋದ್ಯಮ ಹಾಗೂ ತೋಟಗಾರಿಕೆ ಬೆಳೆಗಳಿಗೆ ಉತ್ತೇಜನ ನೀಡಲಾಗುವುದು. ಅದರಲ್ಲೂ ದಾಳಿಂಬೆ, ದ್ರಾಕ್ಷಿ ಮೊದಲಾದ ಹಣ್ಣಿನ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲು ಪ್ರೋತ್ಸಾಹಿಸಲಾಗುವುದು. ರಫ್ತು ಮಾಡುವುದಕ್ಕೆ ಬಹಳಷ್ಟು ಅವಕಾಗಳಿವೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>