<p><strong>ವಿಜಾಪುರ: </strong>ಜಗತ್ತಿನ ಎರಡನೆಯ ಅತಿ ದೊಡ್ಡ ಉಕ್ಕು ತಯಾರಿಕಾ ಸಂಸ್ಥೆ ದಕ್ಷಿಣ ಕೊರಿಯಾದ ‘ಪಾಸ್ಕೊ’ ಸಂಸ್ಥೆಯು ಅವಳಿ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ಉಕ್ಕು ಘಟಕ ಸ್ಥಾಪಿಸಲು ನಿರ್ಧರಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಮುರುಗೇಶ ನಿರಾಣಿ ಹೇಳಿದರು.<br /> <br /> ಕೃಷ್ಣಾ ನದಿ ಪಕ್ಕದಲ್ಲಿ ಅಂದರೆ ವಿಜಾಪುರ ಜಿಲ್ಲೆಯ ಕೊಲ್ಹಾರ, ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ- ಹುನಗುಂದ ಮಧ್ಯದಲ್ಲಿ ಹಾಗೂ ಗದಗ ಬಳಿ ಸ್ಥಳ ಗುರುತಿಸಲಾಗಿದೆ. ಈ ಸಂಸ್ಥೆಯ ಅಧಿಕಾರಿಗಳು ಶೀಘ್ರವೇ ಸ್ಥಳ ಪರಿಶೀಲನೆ ನಡೆಸಿ ನಿವೇಶನ ಅಂತಿಮಗೊಳಿಸಲಿದ್ದಾರೆ ಎಂದು ಬುಧವಾರ ಇಲ್ಲಿ ತಿಳಿಸಿದರು.<br /> ವಾರ್ಷಿಕ ಆರು ದಶಲಕ್ಷ ಟನ್ ಉತ್ಪಾದನಾ ಸಾಮರ್ಥ್ಯದ ಕಾರ್ಖಾನೆ ಇದಾಗಿದ್ದು, 32 ಸಾವಿರ ಕೋಟಿ ರೂಪಾಯಿ ಹೂಡಿಕೆಯಾಗಲಿದೆ. ಭೂಮಿ ಖರೀದಿಗಾಗಿ ಈ ಸಂಸ್ಥೆಯವರು ಈಗಾಗಲೆ 60 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರಕ್ಕೆ ಜಮಾ ಮಾಡಿದ್ದಾರೆ ಎಂದರು.<br /> <br /> ವಿಜಾಪುರ ನಗರದಲ್ಲಿ ಎಟ್ಕೊ ಡೆನಿಮ್ ಸಿದ್ಧ ಉಡುಪು ತಯಾರಿಕಾ ಸಂಸ್ಥೆ ಕಾಮಗಾರಿ ಆರಂಭಿಸಿದ್ದು, ವರ್ಷದಲ್ಲಿ ಉತ್ಪಾದನೆ ನಡೆಸಲಿದೆ ಎಂದರು.<br /> ಬಸವನ ಬಾಗೇವಾಡಿ ತಾಲ್ಲೂಕಿನ ಕೂಡಗಿ ಬಳಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದಿಂದ ಸ್ಥಾಪಿಸಲಾಗುತ್ತಿರುವ 4 ಸಾವಿರ ಮೆಗಾ ವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಸ್ಥಾವರಕ್ಕೆ ವಶಪಡಿಸಿಕೊಳ್ಳುವ ಭೂಮಿಯ ಪೈಕಿ ನೀರಾವರಿ ಭೂಮಿಗೆ ಎಕರೆಗೆ ರೂ. 6 ಲಕ್ಷ ಹಾಗೂ ಒಣ ಬೇಸಾಯಕ್ಕೆ 4.75 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ. ಕೆಲ ರೈತರು ಸ್ವ-ಸಂತೋಷದಿಂದ ಭೂಮಿ ನೀಡುತ್ತಿದ್ದಾರೆ ಎಂದು ಹೇಳಿದರು.<br /> <br /> ರಾಜ್ಯದಲ್ಲಿ ಒಂದು ಲಕ್ಷ ಎಕರೆ ಭೂ ಬ್ಯಾಂಕ್ ಸ್ಥಾಪನೆ ಕಾರ್ಯ ನಡೆಯುತ್ತಿದೆ. ಭೂಮಿ ಸ್ವಾಧೀನಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಬೆಲೆ ಹೆಚ್ಚು ನೀಡಬೇಕು ಎಂಬುದಷ್ಟೇ ಅವರ ಕೋರಿಕೆಯಾಗಿದೆ. ಆದರೂ, ಕೆಲವೆಡೆ ರಾಜಕೀಯ ದುರುದ್ದೇಶದಿಂದ ವಿರೋಧ ವ್ಯಕ್ತವಾಗುತ್ತಿದೆ ಎಂದು ಸಚಿವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ವಿಜಾಪುರ: </strong>ಜಗತ್ತಿನ ಎರಡನೆಯ ಅತಿ ದೊಡ್ಡ ಉಕ್ಕು ತಯಾರಿಕಾ ಸಂಸ್ಥೆ ದಕ್ಷಿಣ ಕೊರಿಯಾದ ‘ಪಾಸ್ಕೊ’ ಸಂಸ್ಥೆಯು ಅವಳಿ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ಉಕ್ಕು ಘಟಕ ಸ್ಥಾಪಿಸಲು ನಿರ್ಧರಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಖಾತೆ ಸಚಿವ ಮುರುಗೇಶ ನಿರಾಣಿ ಹೇಳಿದರು.<br /> <br /> ಕೃಷ್ಣಾ ನದಿ ಪಕ್ಕದಲ್ಲಿ ಅಂದರೆ ವಿಜಾಪುರ ಜಿಲ್ಲೆಯ ಕೊಲ್ಹಾರ, ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ- ಹುನಗುಂದ ಮಧ್ಯದಲ್ಲಿ ಹಾಗೂ ಗದಗ ಬಳಿ ಸ್ಥಳ ಗುರುತಿಸಲಾಗಿದೆ. ಈ ಸಂಸ್ಥೆಯ ಅಧಿಕಾರಿಗಳು ಶೀಘ್ರವೇ ಸ್ಥಳ ಪರಿಶೀಲನೆ ನಡೆಸಿ ನಿವೇಶನ ಅಂತಿಮಗೊಳಿಸಲಿದ್ದಾರೆ ಎಂದು ಬುಧವಾರ ಇಲ್ಲಿ ತಿಳಿಸಿದರು.<br /> ವಾರ್ಷಿಕ ಆರು ದಶಲಕ್ಷ ಟನ್ ಉತ್ಪಾದನಾ ಸಾಮರ್ಥ್ಯದ ಕಾರ್ಖಾನೆ ಇದಾಗಿದ್ದು, 32 ಸಾವಿರ ಕೋಟಿ ರೂಪಾಯಿ ಹೂಡಿಕೆಯಾಗಲಿದೆ. ಭೂಮಿ ಖರೀದಿಗಾಗಿ ಈ ಸಂಸ್ಥೆಯವರು ಈಗಾಗಲೆ 60 ಕೋಟಿ ರೂಪಾಯಿಯನ್ನು ರಾಜ್ಯ ಸರ್ಕಾರಕ್ಕೆ ಜಮಾ ಮಾಡಿದ್ದಾರೆ ಎಂದರು.<br /> <br /> ವಿಜಾಪುರ ನಗರದಲ್ಲಿ ಎಟ್ಕೊ ಡೆನಿಮ್ ಸಿದ್ಧ ಉಡುಪು ತಯಾರಿಕಾ ಸಂಸ್ಥೆ ಕಾಮಗಾರಿ ಆರಂಭಿಸಿದ್ದು, ವರ್ಷದಲ್ಲಿ ಉತ್ಪಾದನೆ ನಡೆಸಲಿದೆ ಎಂದರು.<br /> ಬಸವನ ಬಾಗೇವಾಡಿ ತಾಲ್ಲೂಕಿನ ಕೂಡಗಿ ಬಳಿ ರಾಷ್ಟ್ರೀಯ ಉಷ್ಣ ವಿದ್ಯುತ್ ನಿಗಮದಿಂದ ಸ್ಥಾಪಿಸಲಾಗುತ್ತಿರುವ 4 ಸಾವಿರ ಮೆಗಾ ವ್ಯಾಟ್ ಸಾಮರ್ಥ್ಯದ ಉಷ್ಣ ವಿದ್ಯುತ್ ಸ್ಥಾವರಕ್ಕೆ ವಶಪಡಿಸಿಕೊಳ್ಳುವ ಭೂಮಿಯ ಪೈಕಿ ನೀರಾವರಿ ಭೂಮಿಗೆ ಎಕರೆಗೆ ರೂ. 6 ಲಕ್ಷ ಹಾಗೂ ಒಣ ಬೇಸಾಯಕ್ಕೆ 4.75 ಲಕ್ಷ ರೂಪಾಯಿ ನಿಗದಿ ಮಾಡಲಾಗಿದೆ. ಕೆಲ ರೈತರು ಸ್ವ-ಸಂತೋಷದಿಂದ ಭೂಮಿ ನೀಡುತ್ತಿದ್ದಾರೆ ಎಂದು ಹೇಳಿದರು.<br /> <br /> ರಾಜ್ಯದಲ್ಲಿ ಒಂದು ಲಕ್ಷ ಎಕರೆ ಭೂ ಬ್ಯಾಂಕ್ ಸ್ಥಾಪನೆ ಕಾರ್ಯ ನಡೆಯುತ್ತಿದೆ. ಭೂಮಿ ಸ್ವಾಧೀನಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿಲ್ಲ. ಬೆಲೆ ಹೆಚ್ಚು ನೀಡಬೇಕು ಎಂಬುದಷ್ಟೇ ಅವರ ಕೋರಿಕೆಯಾಗಿದೆ. ಆದರೂ, ಕೆಲವೆಡೆ ರಾಜಕೀಯ ದುರುದ್ದೇಶದಿಂದ ವಿರೋಧ ವ್ಯಕ್ತವಾಗುತ್ತಿದೆ ಎಂದು ಸಚಿವರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>