<p><strong>ತುಮಕೂರು:</strong> ನಗರಸಭೆಯಲ್ಲಿ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿದ್ದ ಬಿಜೆಪಿಯ ಯಶೋಧಾ ಗಂಗಪ್ಪ ಅವರನ್ನು ಅಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಶುಕ್ರವಾರ ಅವಿಶ್ವಾಸ ನಿರ್ಣಯ ಮಂಡಿಸಿ ಪದಚ್ಯುತಿಗೊಳಿಸಿದರು.<br /> <br /> ಯಶೋಧಾ ಗಂಗಪ್ಪ ಸಭೆ ಕರೆಯಲು ವಿಫಲವಾದ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಅಸ್ಲಾಂ ಪಾಷಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ಜಯ ಸಿಕ್ಕಿತು.<br /> <br /> ಈ ಹಿಂದೆ ಸದಸ್ಯರು ತಂದಿದ್ದ ಅವಿಶ್ವಾಸ ಗೊತ್ತುವಳಿ ಕಾನೂನುಬದ್ಧವಾಗಿಲ್ಲ ಎಂದು ಯಶೋಧಾ ಗಂಗಪ್ಪ ಹೈಕೋರ್ಟ್ಗೆ ಡಿಸೆಂಬರ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಆದೇಶದಂತೆ ಎರಡನೇ ಸಲ ಅವಿಶ್ವಾಸ ಸೂಚನೆ ಮಂಡಿಸಲಾಗಿತ್ತು. ಜ. 30ರಂದು ಈ ವಿವಾದ ವಿಚಾರಣೆಗೆ ಬರಲಿದ್ದು, ಶುಕ್ರವಾರ ಮಂಡಿಸಿದ ಅವಿಶ್ವಾಸ ನಿರ್ಣಯ ಕೋರ್ಟ್ ತೀರ್ಪಿಗೆ ಬದ್ಧವಾಗಿರಬೇಕಾಗುತ್ತದೆ. <br /> <br /> ಒಟ್ಟು 35 ಸದಸ್ಯ ಬಲದ ನಗರಸಭೆಯಲ್ಲಿ ಬಿಜೆಪಿ ಎಲ್ಲ ಸದಸ್ಯರು ಗೈರು ಹಾಜರಾಗಿದ್ದರು. ಕಾಂಗ್ರೆಸ್-ಜೆಡಿಎಸ್ನ 24 ಸದಸ್ಯರು ಹಾಗೂ ವಿಧಾನಪರಿಷತ್ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್ ಅವಿಶ್ವಾಸ ಪರ ಮತ ಚಲಾಯಿಸಿದರು. <br /> <br /> ಬಿಜೆಪಿ ಕೇವಲ 9 ಸದಸ್ಯ ಬಲವನ್ನು ಹೊಂದಿದ್ದು, ಅದರಲ್ಲಿ ಐವರು ಸದಸ್ಯರು ಇತ್ತೀಚೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತುಮಕೂರು:</strong> ನಗರಸಭೆಯಲ್ಲಿ ಆಪರೇಷನ್ ಕಮಲದ ಮೂಲಕ ಅಧಿಕಾರ ಹಿಡಿದಿದ್ದ ಬಿಜೆಪಿಯ ಯಶೋಧಾ ಗಂಗಪ್ಪ ಅವರನ್ನು ಅಧ್ಯಕ್ಷ ಸ್ಥಾನದಿಂದ ಕಾಂಗ್ರೆಸ್, ಜೆಡಿಎಸ್ ಸದಸ್ಯರು ಶುಕ್ರವಾರ ಅವಿಶ್ವಾಸ ನಿರ್ಣಯ ಮಂಡಿಸಿ ಪದಚ್ಯುತಿಗೊಳಿಸಿದರು.<br /> <br /> ಯಶೋಧಾ ಗಂಗಪ್ಪ ಸಭೆ ಕರೆಯಲು ವಿಫಲವಾದ ಹಿನ್ನೆಲೆಯಲ್ಲಿ ಉಪಾಧ್ಯಕ್ಷ ಅಸ್ಲಾಂ ಪಾಷಾ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವಿಶ್ವಾಸ ನಿರ್ಣಯಕ್ಕೆ ಜಯ ಸಿಕ್ಕಿತು.<br /> <br /> ಈ ಹಿಂದೆ ಸದಸ್ಯರು ತಂದಿದ್ದ ಅವಿಶ್ವಾಸ ಗೊತ್ತುವಳಿ ಕಾನೂನುಬದ್ಧವಾಗಿಲ್ಲ ಎಂದು ಯಶೋಧಾ ಗಂಗಪ್ಪ ಹೈಕೋರ್ಟ್ಗೆ ಡಿಸೆಂಬರ್ನಲ್ಲಿ ಅರ್ಜಿ ಸಲ್ಲಿಸಿದ್ದರು. ಕೋರ್ಟ್ ಆದೇಶದಂತೆ ಎರಡನೇ ಸಲ ಅವಿಶ್ವಾಸ ಸೂಚನೆ ಮಂಡಿಸಲಾಗಿತ್ತು. ಜ. 30ರಂದು ಈ ವಿವಾದ ವಿಚಾರಣೆಗೆ ಬರಲಿದ್ದು, ಶುಕ್ರವಾರ ಮಂಡಿಸಿದ ಅವಿಶ್ವಾಸ ನಿರ್ಣಯ ಕೋರ್ಟ್ ತೀರ್ಪಿಗೆ ಬದ್ಧವಾಗಿರಬೇಕಾಗುತ್ತದೆ. <br /> <br /> ಒಟ್ಟು 35 ಸದಸ್ಯ ಬಲದ ನಗರಸಭೆಯಲ್ಲಿ ಬಿಜೆಪಿ ಎಲ್ಲ ಸದಸ್ಯರು ಗೈರು ಹಾಜರಾಗಿದ್ದರು. ಕಾಂಗ್ರೆಸ್-ಜೆಡಿಎಸ್ನ 24 ಸದಸ್ಯರು ಹಾಗೂ ವಿಧಾನಪರಿಷತ್ ಸದಸ್ಯ ಡಾ.ಎಂ.ಆರ್.ಹುಲಿನಾಯ್ಕರ್ ಅವಿಶ್ವಾಸ ಪರ ಮತ ಚಲಾಯಿಸಿದರು. <br /> <br /> ಬಿಜೆಪಿ ಕೇವಲ 9 ಸದಸ್ಯ ಬಲವನ್ನು ಹೊಂದಿದ್ದು, ಅದರಲ್ಲಿ ಐವರು ಸದಸ್ಯರು ಇತ್ತೀಚೆಗೆ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>