<p><strong>ಬಾಗಲಕೋಟೆ:</strong> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕವಿತಾ ದಡ್ಡೇನವರ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಮುಂದಾಗಿರುವ ಜಿ.ಪಂ. ಬಿಜೆಪಿ ಸದಸ್ಯರ ನಡುವೆ ಭಿನ್ನಮತ ಉಂಟಾಗಿರುವ ಕಾರಣ ಅವಿಶ್ವಾಸ ಗೊತ್ತುವಳಿ ವಿಫಲವಾಗುವ ಸಾಧ್ಯತೆ ಇರುವುದಾಗಿ ತಿಳಿದುಬಂದಿದೆ.<br /> <br /> ಅವಿಶ್ವಾಸ ನಿರ್ಣಯದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಂಬಂಧ ನಗರದಲ್ಲಿ ಬುಧವಾರ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ ನೇತೃತ್ವದಲ್ಲಿ ನಡೆದ ಸಭೆಗೆ ಕೇವಲ ಐದು ಬಿಜೆಪಿ ಸದಸ್ಯರು ಪಾಲ್ಗೊಂಡಿದ್ದರು ಎನ್ನಲಾಗಿದೆ.<br /> <br /> ಈ ನಡುವೆ ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಸಂಬಂಧದ ಪತ್ರಕ್ಕೆ ಸಹಿ ಮಾಡಿದ್ದ ಜಿ.ಪಂ. 17 ಸದಸ್ಯರಲ್ಲಿ 7 ಸದಸ್ಯರು ಅವಿಶ್ವಾಹ ಗೊತ್ತುವಳಿಯಿಂದ ಹಿಂದೆ ಸರಿದು, ಅಧ್ಯಕ್ಷೆಗೆ ಮತ್ತು ಜಿ.ಪಂ. ಮುಖ್ಯಕಾರ್ಯ ನಿರ್ವಹಣಾಧಿಕಾರಿ ಅವರಿಗೆ ಗೊತ್ತುವಳಿ ಹಿಂಪಡೆದಿರುವ ಪತ್ರ ನೀಡಿದ್ದಾರೆ ಎಂದು ತಿಳಿದುಬಂದಿದೆ.<br /> <br /> ಜಿ.ಪಂ. ಬಿಜೆಪಿ ಸದಸ್ಯರಲ್ಲಿ ಎರಡು ಗುಂಪಾಗಿರುವ ಹಿನ್ನೆಲೆಯಲ್ಲಿ ಹಾಲಿ ಅಧ್ಯಕ್ಷೆ ಕವಿತಾ ದಡ್ಡೇನವರ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.<br /> <br /> ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ದೂರವಾಣಿ ಮೂಲಕ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಸಿಇಒ ಅವರನ್ನು ಸಂಪರ್ಕಿಸಲು ಹಲವು ಭಾರಿ `ಪತ್ರಿಕೆ~ ಪ್ರಯತ್ನಿಸಿದರೂ ಇಬ್ಬರೂ ದೂರವಾಣಿ ಕರೆಯನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಸ್ಪಷ್ಟವಾಗಿ ತಿಳಿದುಬಂದಿಲ್ಲ.<br /> <br /> ಆದರೆ ಈ ಬಗ್ಗೆ `ಪ್ರಜಾವಾಣಿ~ಗೆ ಪ್ರತಿಕ್ರಿಯಸಿರುವ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಸಂಬಂಧ ಬುಧವಾರ ನಡೆದ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.<br /> <br /> ಅವಿಶ್ವಾಸ ಗೊತ್ತುವಳಿ ಮಂಡಿಸಲು ಶೀಘ್ರ ಸಭೆ ಕರೆಯುವಂತೆ ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಜಿ.ಪಾಟೀಲ ಅವರಿಗೆ ಗುರುವಾರ ಜಿ.ಪಂ. ಬಿಜೆಪಿ ಸದಸ್ಯರು ಮನವಿ ಪತ್ರ ನೀಡಲಿದ್ದಾರೆ ಎಂದು ತಿಳಿಸಿದರು.<br /> <br /> ಸಭೆಯಲ್ಲಿ ಕೆಲ ಸದಸ್ಯರು ಹಾಲಿ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರೇ ಮುಂದಿನ ಅವಧಿಗೂ ಮುಂದುವರಿಯಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು, ಆದರೆ ಬಹುತೇಕ ಸದಸ್ಯರು ಬದಲಾವಣೆಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸುವುದು ನಿಶ್ಚಿತ ಎಂದರು.<br /> <br /> ಒಟ್ಟಾರೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷರ ಬದಲಾವಣೆ ಸಾಧ್ಯತೆ ಬಹುತೇಕ ಆಗದು ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗಲಕೋಟೆ:</strong> ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಕವಿತಾ ದಡ್ಡೇನವರ ಅವರ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸಲು ಮುಂದಾಗಿರುವ ಜಿ.ಪಂ. ಬಿಜೆಪಿ ಸದಸ್ಯರ ನಡುವೆ ಭಿನ್ನಮತ ಉಂಟಾಗಿರುವ ಕಾರಣ ಅವಿಶ್ವಾಸ ಗೊತ್ತುವಳಿ ವಿಫಲವಾಗುವ ಸಾಧ್ಯತೆ ಇರುವುದಾಗಿ ತಿಳಿದುಬಂದಿದೆ.<br /> <br /> ಅವಿಶ್ವಾಸ ನಿರ್ಣಯದ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳುವ ಸಂಬಂಧ ನಗರದಲ್ಲಿ ಬುಧವಾರ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ ನೇತೃತ್ವದಲ್ಲಿ ನಡೆದ ಸಭೆಗೆ ಕೇವಲ ಐದು ಬಿಜೆಪಿ ಸದಸ್ಯರು ಪಾಲ್ಗೊಂಡಿದ್ದರು ಎನ್ನಲಾಗಿದೆ.<br /> <br /> ಈ ನಡುವೆ ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಸಂಬಂಧದ ಪತ್ರಕ್ಕೆ ಸಹಿ ಮಾಡಿದ್ದ ಜಿ.ಪಂ. 17 ಸದಸ್ಯರಲ್ಲಿ 7 ಸದಸ್ಯರು ಅವಿಶ್ವಾಹ ಗೊತ್ತುವಳಿಯಿಂದ ಹಿಂದೆ ಸರಿದು, ಅಧ್ಯಕ್ಷೆಗೆ ಮತ್ತು ಜಿ.ಪಂ. ಮುಖ್ಯಕಾರ್ಯ ನಿರ್ವಹಣಾಧಿಕಾರಿ ಅವರಿಗೆ ಗೊತ್ತುವಳಿ ಹಿಂಪಡೆದಿರುವ ಪತ್ರ ನೀಡಿದ್ದಾರೆ ಎಂದು ತಿಳಿದುಬಂದಿದೆ.<br /> <br /> ಜಿ.ಪಂ. ಬಿಜೆಪಿ ಸದಸ್ಯರಲ್ಲಿ ಎರಡು ಗುಂಪಾಗಿರುವ ಹಿನ್ನೆಲೆಯಲ್ಲಿ ಹಾಲಿ ಅಧ್ಯಕ್ಷೆ ಕವಿತಾ ದಡ್ಡೇನವರ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳುವ ಸಾಧ್ಯತೆ ದಟ್ಟವಾಗಿದೆ.<br /> <br /> ಈ ಬಗ್ಗೆ ಪ್ರತಿಕ್ರಿಯೆ ಪಡೆಯಲು ದೂರವಾಣಿ ಮೂಲಕ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಸಿಇಒ ಅವರನ್ನು ಸಂಪರ್ಕಿಸಲು ಹಲವು ಭಾರಿ `ಪತ್ರಿಕೆ~ ಪ್ರಯತ್ನಿಸಿದರೂ ಇಬ್ಬರೂ ದೂರವಾಣಿ ಕರೆಯನ್ನು ಸ್ವೀಕರಿಸದ ಹಿನ್ನೆಲೆಯಲ್ಲಿ ಸ್ಪಷ್ಟವಾಗಿ ತಿಳಿದುಬಂದಿಲ್ಲ.<br /> <br /> ಆದರೆ ಈ ಬಗ್ಗೆ `ಪ್ರಜಾವಾಣಿ~ಗೆ ಪ್ರತಿಕ್ರಿಯಸಿರುವ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಬಸಲಿಂಗಪ್ಪ ನಾವಲಗಿ, ಅಧ್ಯಕ್ಷೆ ವಿರುದ್ಧ ಅವಿಶ್ವಾಸ ಗೊತ್ತುವಳಿ ಮಂಡಿಸುವ ಸಂಬಂಧ ಬುಧವಾರ ನಡೆದ ಸಭೆಯಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.<br /> <br /> ಅವಿಶ್ವಾಸ ಗೊತ್ತುವಳಿ ಮಂಡಿಸಲು ಶೀಘ್ರ ಸಭೆ ಕರೆಯುವಂತೆ ಜಿ.ಪಂ. ಮುಖ್ಯಕಾರ್ಯನಿರ್ವಹಣಾಧಿಕಾರಿ ಎಸ್.ಜಿ.ಪಾಟೀಲ ಅವರಿಗೆ ಗುರುವಾರ ಜಿ.ಪಂ. ಬಿಜೆಪಿ ಸದಸ್ಯರು ಮನವಿ ಪತ್ರ ನೀಡಲಿದ್ದಾರೆ ಎಂದು ತಿಳಿಸಿದರು.<br /> <br /> ಸಭೆಯಲ್ಲಿ ಕೆಲ ಸದಸ್ಯರು ಹಾಲಿ ಅಧ್ಯಕ್ಷೆ ಮತ್ತು ಉಪಾಧ್ಯಕ್ಷರೇ ಮುಂದಿನ ಅವಧಿಗೂ ಮುಂದುವರಿಯಲಿ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು, ಆದರೆ ಬಹುತೇಕ ಸದಸ್ಯರು ಬದಲಾವಣೆಯಾಗಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಅವಿಶ್ವಾಸ ಗೊತ್ತುವಳಿ ಮಂಡಿಸುವುದು ನಿಶ್ಚಿತ ಎಂದರು.<br /> <br /> ಒಟ್ಟಾರೆ ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ, ಉಪಾಧ್ಯಕ್ಷರ ಬದಲಾವಣೆ ಸಾಧ್ಯತೆ ಬಹುತೇಕ ಆಗದು ಎಂದು ತಿಳಿದುಬಂದಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>