ಅವೈಜ್ಞಾನಿಕ ರಸ್ತೆ ಉಬ್ಬು
ಬನ್ನೇರುಘಟ್ಟ ರಸ್ತೆಯ ಗೊಟ್ಟಿಗೆರೆಯಿಂದ ಅಂಜನಾಪುರದ ಕಡೆ ಹೋಗುವ ಕೆಂಬತ್ತಳ್ಳಿ ಮುಖ್ಯ ರಸ್ತೆಯಲ್ಲಿ ಹಲವಾರು ಅವೈಜ್ಞಾನಿಕ ರಸ್ತೆ ಉಬ್ಬುಗಳನ್ನು ಸ್ಥಳೀಯರೇ ಹಾಕಿಕೊಂಡಿರುತ್ತಾರೆ.
ಈ ಎಲ್ಲಾ ರಸ್ತೆ ಉಬ್ಬುಗಳ ನಡುವಿನ ಅಂತರ ಅತಿ ಕಡಿಮೆಯಾಗಿದೆ. ಇದರಿಂದಾಗಿ ಆ ರಸ್ತೆಯಲ್ಲಿ ಸಂಚರಿಸುವ ವಾಹನ ಚಾಲಕರಿಗೆ, ಸವಾರರಿಗೆ ಭಾರಿ ತೊಂದರೆಯಾಗುತ್ತಿದೆ.
ಆದ್ದರಿಂದ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಇದರ ಬಗ್ಗೆ ಗಮನಹರಿಸಿ ಈ ರಸ್ತೆ ಉಬ್ಬುಗಳನ್ನು ತೆರವುಗೊಳಿಸಿ ಸುಗಮಸಂಚಾರಕ್ಕೆ ವ್ಯವಸ್ಥೆ ಮಾಡಬೇಕೆಂದು ನನ್ನ ಮನವಿ.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.