<p><strong>ಮಡಿಕೇರಿ:</strong> ಸಂಸದ ಎಚ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಹಲವು ಯೋಜನೆಗಳಲ್ಲಿ ನಡೆದ ಅವ್ಯವಹಾರಗಳು, ಕಳಪೆ ಕಾಮಗಾರಿಗಳು ಪ್ರತಿಧ್ವನಿಸಿದವು.<br /> <br /> ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿ ಯಾನದಡಿ ಕೋಟ್ಯಾಂತರ ರೂಪಾಯಿ ಅವ್ಯ ವಹಾರ, ಗ್ರಾಮ ಸಡಕ್ ಯೋಜನೆಯ ಕಳಪೆ ಕಾಮಗಾರಿಗಳು ಹಾಗೂ ರೇಷ್ಮೆಹಡ್ಲು- ಚಂದನ ಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಆರೋಪಗಳು ಇಡೀ ಸಭೆಯಲ್ಲಿ ರಿಂಗಣಿಸಿದವು. ಪ್ರತಿ ಆರೋಪಕ್ಕೂ ತನಿಖೆ ನಡೆಸಲು ಹಾಗೂ ವರದಿ ನೀಡಲು ಅಧಿಕಾರಿಗಳಿಗೆ ಆದೇಶ ನೀಡಲಾಯಿತು. <br /> <br /> <strong>ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ:</strong> ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಯಾದ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಕಾರ್ಯಕ್ರಮದ ಅನುಷ್ಠಾನದಲ್ಲಿ ಕೋಟ್ಯಾಂತರ ರೂಪಾಯಿ ಹಣ ದುರುಪಯೋಗವಾಗಿದೆ ಎಂದು ಸಮಿತಿ ಸದಸ್ಯ ಬಿ.ಎಸ್. ತಮ್ಮಯ್ಯ ಪ್ರಸ್ತಾಪಿಸಿದರು.<br /> <br /> ಮಾರ್ಚ್ ಒಂದೇ ತಿಂಗಳಲ್ಲಿ ರೂ1.60 ಕೋಟಿ ಹಣ ಪಡೆಯಲಾಗಿದೆ. ಇಡೀ ಕಾರ್ಯಕ್ರಮದಲ್ಲಿ ಹಣದ ಗೋಲ್ಮಾಲ್ ನಡೆದಿದೆ. ಲೋಕಾ ಯುಕ್ತ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.<br /> ಇದಕ್ಕೆ ಸಮಿತಿಯ ಮತ್ತೋರ್ವ ಸದಸ್ಯೆ ಸರಿತಾ ಪೂಣಚ್ಚ ಕೂಡ ಸಾಥ್ ನೀಡಿದರು.<br /> <br /> ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸದ ಎಚ್.ವಿಶ್ವನಾಥ್ ಮಾತನಾಡಿ, ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಇದರ ಬಗ್ಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿ ಒಂದು ತಿಂಗಳಲ್ಲಿ ವರದಿ ನೀಡಬೇಕೆಂದು ಸೂಚನೆ ನೀಡಿದರು.</p>.<p><strong>ರೇಷ್ಮೆಹಡ್ಲು ಹಾಗೂ ಚಂದನಕೆರೆ</strong><br /> ಇವೆರಡು ಕೆರೆಗಳ ಅಭಿವೃದ್ಧಿ ಕಾಮಗಾರಿ ಯಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿವೆ ಎಂದು ಸರಿತಾ ಪೂಣಚ್ಚ ಆರೋಪಿಸಿದರು.<br /> <br /> ಮಧ್ಯಪ್ರವೇಶಿಸಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರವಿಕುಶಾಲಪ್ಪ ಅವರು, ಜಿಲ್ಲೆಗೆ ಒಳ್ಳೆಯ ದಾಗಲಿ ಎಂದು ಕಾಮಗಾರಿಗಳನ್ನು ಕೈಗೆತ್ತಿ ಕೊಳ್ಳುತ್ತೇವೆ. ಆದರೆ, ಈಗ ಎಲ್ಲದಕ್ಕೂ ವಿರೋಧ ವ್ಯಕ್ತವಾಗುತ್ತಿದೆ ಎಂದರು.<br /> <br /> ಪ್ರತಿಯಾಗಿ ಮಾತನಾಡಿದ ಸಂಸದ ವಿಶ್ವನಾಥ್, ಹಣ ಸಾರ್ವಜನಿಕರದ್ದು. ಇದು ಪೋಲಾಗಬಾರದು ಎನ್ನುವುದಷ್ಟೇ ಸರಿತಾ ಅವರ ಆಶಯ. ಇದನ್ನು ವೈಯಕ್ತಿಕವಾಗಿ ತೆಗೆದು ಕೊಳ್ಳಬೇಡಿ ಎಂದರು. <br /> <br /> ಪ್ರಕರಣದ ಬಗ್ಗೆ ಸಮಗ್ರ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು.<br /> <br /> <strong>ಗ್ರಾಮ ಸಡಕ್ ಯೋಜನೆ <br /> </strong>ಕೊಡಗು ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಿಸಲಾಗಿರುವ ರಸ್ತೆಗಳ ಕಾಮಗಾರಿ ಕಳಪೆಯಾಗಿದೆ ಎಂದು ಸದಸ್ಯರು ಆರೋಪಿಸಿದರು.<br /> <br /> ಆರೋಪ ಆಲಿಸಿದ ಸಂಸದರು, ಗ್ರಾಮ ಸಡಕ್ ಯೋಜನೆಯಡಿ ನಿರ್ಮಾಣವಾಗಿರುವ ಎಲ್ಲ ರಸ್ತೆಗಳನ್ನು ಉಪವಿಭಾಗಾಧಿಕಾರಿ, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಹಾಗೂ ಜಾಗೃತಿ ಸದಸ್ಯರು ವೀಕ್ಷಿಸಿ ವರದಿ ನೀಡಬೇಕೆಂದು ಸಂಸದರು ಸೂಚಿಸಿದರು.<br /> <br /> <strong>ನೀರಿಗಾಗಿ ರೂ 32 ಕೋಟಿ</strong><br /> ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ ಕುಡಿಯುವ ನೀರು ಪೂರೈಸಲು 32 ಕೋಟಿ ಕ್ರೀಯಾ ಯೋಜನೆಗೆ ಅನುಮತಿ ದೊರೆತಿದ್ದು, ಮಾರ್ಚ್ ಅಂತ್ಯದೊಳಗೆ 15 ಕೋಟಿ ರೂಪಾಯಿ ಖರ್ಚು ಮಾಡುವ ಗುರಿ ಹೊಂದಲಾಗಿದೆ. ಈಗಾಗಲೇ 8 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಜಿ.ಪಂ. ಕಾರ್ಯಪಾಲಕ ಅಭಿಯಂತರರಾದ ಕೇಶವ ಮೂರ್ತಿ ಮಾಹಿತಿ ನೀಡಿದರು. <br /> <br /> ಕೊಡಗು ಜಿಲ್ಲೆಯಲ್ಲಿ ಬಾವಿಗೆ ಹೆಚ್ಚು ಬೇಡಿಕೆಯಿದ್ದು, ಅದಕ್ಕಾಗಿ ಒಂದೂವರೆ ಕೋಟಿ ರೂಪಾಯಿ ವೆಚ್ಚ ಮಾಡಲು ನಿರ್ಧರಿಸಲಾಗಿದೆ ಎಂದರು. <br /> <br /> ಜಿ.ಪಂ. ಅಧ್ಯಕ್ಷರಾದ ರವಿ ಕುಶಾಲಪ್ಪ ಅವರು ಜಿಲ್ಲೆಯಲ್ಲಿ ಬಾವಿಗೆ ಹೆಚ್ಚು ಬೇಡಿಕೆ ಇರುವುದರಿಂದ ಲೋಕಸಭಾ ಸದಸ್ಯರಾದ ವಿಶ್ವನಾಥ್ ಅವರು ವಿಶೇಷ ಯೋಜನೆಯಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು. <br /> <br /> ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಟಿ.ಪಿ.ರಮೇಶ್, ಕರಿಯಪ್ಪ ಅವರು ಹಲವು ವಿಷಯಗಳ ಕುರಿತು ಬೆಳಕು ಚೆಲ್ಲಿದರು. <br /> <br /> <strong>ಗಿರಿಜನ ಹಕ್ಕು ಕಾಯ್ದೆ</strong><br /> ಅರಣ್ಯ ಪ್ರದೇಶದಲ್ಲಿ ವಾಸವಿರುವ ಗಿರಿಜನರಿಗೆ ಅರಣ್ಯ ಹಕ್ಕು ನೀಡಲು ವಿಳಂಬವಾಗುತ್ತಿರುವುದಕ್ಕೆ ಆಕ್ರೋಶಗೊಂಡ ಸಂಸದರು, ಗಿರಿಜನ ಹಕ್ಕುಕಾಯ್ದೆಯನ್ನು ಆದಷ್ಟು ಬೇಗನೇ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.<br /> <br /> ಈ ಹಿನ್ನೆಲೆಯಲ್ಲಿ ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಅರಣ್ಯ ಸಂರಕ್ಷಣಾ ಧಿಕಾರಿಗಳ ಸಭೆ ಕರೆಯುವಂತೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯುವುದಾಗಿ ಸಂಸದರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಡಿಕೇರಿ:</strong> ಸಂಸದ ಎಚ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಶುಕ್ರವಾರ ನಡೆದ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಹಲವು ಯೋಜನೆಗಳಲ್ಲಿ ನಡೆದ ಅವ್ಯವಹಾರಗಳು, ಕಳಪೆ ಕಾಮಗಾರಿಗಳು ಪ್ರತಿಧ್ವನಿಸಿದವು.<br /> <br /> ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿ ಯಾನದಡಿ ಕೋಟ್ಯಾಂತರ ರೂಪಾಯಿ ಅವ್ಯ ವಹಾರ, ಗ್ರಾಮ ಸಡಕ್ ಯೋಜನೆಯ ಕಳಪೆ ಕಾಮಗಾರಿಗಳು ಹಾಗೂ ರೇಷ್ಮೆಹಡ್ಲು- ಚಂದನ ಕೆರೆ ಅಭಿವೃದ್ಧಿ ಕಾಮಗಾರಿಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರದ ಆರೋಪಗಳು ಇಡೀ ಸಭೆಯಲ್ಲಿ ರಿಂಗಣಿಸಿದವು. ಪ್ರತಿ ಆರೋಪಕ್ಕೂ ತನಿಖೆ ನಡೆಸಲು ಹಾಗೂ ವರದಿ ನೀಡಲು ಅಧಿಕಾರಿಗಳಿಗೆ ಆದೇಶ ನೀಡಲಾಯಿತು. <br /> <br /> <strong>ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ:</strong> ಕೇಂದ್ರದ ಮಹತ್ವಾಕಾಂಕ್ಷೆಯ ಯೋಜನೆಯಾದ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ ಕಾರ್ಯಕ್ರಮದ ಅನುಷ್ಠಾನದಲ್ಲಿ ಕೋಟ್ಯಾಂತರ ರೂಪಾಯಿ ಹಣ ದುರುಪಯೋಗವಾಗಿದೆ ಎಂದು ಸಮಿತಿ ಸದಸ್ಯ ಬಿ.ಎಸ್. ತಮ್ಮಯ್ಯ ಪ್ರಸ್ತಾಪಿಸಿದರು.<br /> <br /> ಮಾರ್ಚ್ ಒಂದೇ ತಿಂಗಳಲ್ಲಿ ರೂ1.60 ಕೋಟಿ ಹಣ ಪಡೆಯಲಾಗಿದೆ. ಇಡೀ ಕಾರ್ಯಕ್ರಮದಲ್ಲಿ ಹಣದ ಗೋಲ್ಮಾಲ್ ನಡೆದಿದೆ. ಲೋಕಾ ಯುಕ್ತ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.<br /> ಇದಕ್ಕೆ ಸಮಿತಿಯ ಮತ್ತೋರ್ವ ಸದಸ್ಯೆ ಸರಿತಾ ಪೂಣಚ್ಚ ಕೂಡ ಸಾಥ್ ನೀಡಿದರು.<br /> <br /> ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಸದ ಎಚ್.ವಿಶ್ವನಾಥ್ ಮಾತನಾಡಿ, ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಇದರ ಬಗ್ಗೆ ಜಿಲ್ಲಾಧಿಕಾರಿಯವರು ಸಭೆ ನಡೆಸಿ ಒಂದು ತಿಂಗಳಲ್ಲಿ ವರದಿ ನೀಡಬೇಕೆಂದು ಸೂಚನೆ ನೀಡಿದರು.</p>.<p><strong>ರೇಷ್ಮೆಹಡ್ಲು ಹಾಗೂ ಚಂದನಕೆರೆ</strong><br /> ಇವೆರಡು ಕೆರೆಗಳ ಅಭಿವೃದ್ಧಿ ಕಾಮಗಾರಿ ಯಲ್ಲಿ ಸಾಕಷ್ಟು ಅವ್ಯವಹಾರಗಳು ನಡೆದಿವೆ ಎಂದು ಸರಿತಾ ಪೂಣಚ್ಚ ಆರೋಪಿಸಿದರು.<br /> <br /> ಮಧ್ಯಪ್ರವೇಶಿಸಿದ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ರವಿಕುಶಾಲಪ್ಪ ಅವರು, ಜಿಲ್ಲೆಗೆ ಒಳ್ಳೆಯ ದಾಗಲಿ ಎಂದು ಕಾಮಗಾರಿಗಳನ್ನು ಕೈಗೆತ್ತಿ ಕೊಳ್ಳುತ್ತೇವೆ. ಆದರೆ, ಈಗ ಎಲ್ಲದಕ್ಕೂ ವಿರೋಧ ವ್ಯಕ್ತವಾಗುತ್ತಿದೆ ಎಂದರು.<br /> <br /> ಪ್ರತಿಯಾಗಿ ಮಾತನಾಡಿದ ಸಂಸದ ವಿಶ್ವನಾಥ್, ಹಣ ಸಾರ್ವಜನಿಕರದ್ದು. ಇದು ಪೋಲಾಗಬಾರದು ಎನ್ನುವುದಷ್ಟೇ ಸರಿತಾ ಅವರ ಆಶಯ. ಇದನ್ನು ವೈಯಕ್ತಿಕವಾಗಿ ತೆಗೆದು ಕೊಳ್ಳಬೇಡಿ ಎಂದರು. <br /> <br /> ಪ್ರಕರಣದ ಬಗ್ಗೆ ಸಮಗ್ರ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು.<br /> <br /> <strong>ಗ್ರಾಮ ಸಡಕ್ ಯೋಜನೆ <br /> </strong>ಕೊಡಗು ಜಿಲ್ಲೆಯಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ ನಿರ್ಮಿಸಲಾಗಿರುವ ರಸ್ತೆಗಳ ಕಾಮಗಾರಿ ಕಳಪೆಯಾಗಿದೆ ಎಂದು ಸದಸ್ಯರು ಆರೋಪಿಸಿದರು.<br /> <br /> ಆರೋಪ ಆಲಿಸಿದ ಸಂಸದರು, ಗ್ರಾಮ ಸಡಕ್ ಯೋಜನೆಯಡಿ ನಿರ್ಮಾಣವಾಗಿರುವ ಎಲ್ಲ ರಸ್ತೆಗಳನ್ನು ಉಪವಿಭಾಗಾಧಿಕಾರಿ, ಜಿಲ್ಲಾ ಪಂಚಾಯಿತಿ ಎಂಜಿನಿಯರ್ ಹಾಗೂ ಜಾಗೃತಿ ಸದಸ್ಯರು ವೀಕ್ಷಿಸಿ ವರದಿ ನೀಡಬೇಕೆಂದು ಸಂಸದರು ಸೂಚಿಸಿದರು.<br /> <br /> <strong>ನೀರಿಗಾಗಿ ರೂ 32 ಕೋಟಿ</strong><br /> ಜಿಲ್ಲೆಯಲ್ಲಿ ಪ್ರಸಕ್ತ ಸಾಲಿಗೆ ಕುಡಿಯುವ ನೀರು ಪೂರೈಸಲು 32 ಕೋಟಿ ಕ್ರೀಯಾ ಯೋಜನೆಗೆ ಅನುಮತಿ ದೊರೆತಿದ್ದು, ಮಾರ್ಚ್ ಅಂತ್ಯದೊಳಗೆ 15 ಕೋಟಿ ರೂಪಾಯಿ ಖರ್ಚು ಮಾಡುವ ಗುರಿ ಹೊಂದಲಾಗಿದೆ. ಈಗಾಗಲೇ 8 ಕೋಟಿ ರೂ. ಬಿಡುಗಡೆಯಾಗಿದೆ ಎಂದು ಜಿ.ಪಂ. ಕಾರ್ಯಪಾಲಕ ಅಭಿಯಂತರರಾದ ಕೇಶವ ಮೂರ್ತಿ ಮಾಹಿತಿ ನೀಡಿದರು. <br /> <br /> ಕೊಡಗು ಜಿಲ್ಲೆಯಲ್ಲಿ ಬಾವಿಗೆ ಹೆಚ್ಚು ಬೇಡಿಕೆಯಿದ್ದು, ಅದಕ್ಕಾಗಿ ಒಂದೂವರೆ ಕೋಟಿ ರೂಪಾಯಿ ವೆಚ್ಚ ಮಾಡಲು ನಿರ್ಧರಿಸಲಾಗಿದೆ ಎಂದರು. <br /> <br /> ಜಿ.ಪಂ. ಅಧ್ಯಕ್ಷರಾದ ರವಿ ಕುಶಾಲಪ್ಪ ಅವರು ಜಿಲ್ಲೆಯಲ್ಲಿ ಬಾವಿಗೆ ಹೆಚ್ಚು ಬೇಡಿಕೆ ಇರುವುದರಿಂದ ಲೋಕಸಭಾ ಸದಸ್ಯರಾದ ವಿಶ್ವನಾಥ್ ಅವರು ವಿಶೇಷ ಯೋಜನೆಯಡಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿದರು. <br /> <br /> ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರಾದ ಟಿ.ಪಿ.ರಮೇಶ್, ಕರಿಯಪ್ಪ ಅವರು ಹಲವು ವಿಷಯಗಳ ಕುರಿತು ಬೆಳಕು ಚೆಲ್ಲಿದರು. <br /> <br /> <strong>ಗಿರಿಜನ ಹಕ್ಕು ಕಾಯ್ದೆ</strong><br /> ಅರಣ್ಯ ಪ್ರದೇಶದಲ್ಲಿ ವಾಸವಿರುವ ಗಿರಿಜನರಿಗೆ ಅರಣ್ಯ ಹಕ್ಕು ನೀಡಲು ವಿಳಂಬವಾಗುತ್ತಿರುವುದಕ್ಕೆ ಆಕ್ರೋಶಗೊಂಡ ಸಂಸದರು, ಗಿರಿಜನ ಹಕ್ಕುಕಾಯ್ದೆಯನ್ನು ಆದಷ್ಟು ಬೇಗನೇ ಅನುಷ್ಠಾನಗೊಳಿಸಲು ಕ್ರಮಕೈಗೊಳ್ಳುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು.<br /> <br /> ಈ ಹಿನ್ನೆಲೆಯಲ್ಲಿ ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳ ಜಿಲ್ಲಾಧಿಕಾರಿ ಹಾಗೂ ಅರಣ್ಯ ಸಂರಕ್ಷಣಾ ಧಿಕಾರಿಗಳ ಸಭೆ ಕರೆಯುವಂತೆ ಪ್ರಾದೇಶಿಕ ಆಯುಕ್ತರಿಗೆ ಪತ್ರ ಬರೆಯುವುದಾಗಿ ಸಂಸದರು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>