<p>ನವದೆಹಲಿ (ಪಿಟಿಐ): ಗಡಿ ಭದ್ರತೆಗೆ ಎರಡು ಯುದ್ಧ ವಿಮಾನಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಸುಮಾರು 1,500 ಕೋಟಿ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಗಡಿ ಭದ್ರತಾ ಪಡೆ (ಬಿಎಸ್ಎಫ್) ಹಾಗೂ ರಕ್ಷಣಾ ಸಚಿವಾಲಯದಿಂದ ಸಿಬಿಐ ದಾಖಲೆಗಳನ್ನು ಕೇಳಿದೆ.<br /> <br /> ಇದಕ್ಕಾಗಿ 2009ರಲ್ಲಿ ಅಂತಿಮಗೊಂಡ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳನ್ನು ಕೇಳಿರುವುದಾಗಿ ಸಿಬಿಐ ಮೂಲಗಳು ತಿಳಿಸಿವೆ.<br /> <br /> ರಕ್ಷಣಾ ಸಚಿವಾಲಯದ `ಅಜ್ಞಾತ~ ಅಧಿಕಾರಿಗಳ ವಿರುದ್ಧ ಆರಂಭಗೊಂಡಿರುವ ತನಿಖೆ ಇನ್ನು ಮೂರು ತಿಂಗಳೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದೂ ಅವು ಹೇಳಿವೆ.<br /> <br /> ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದ ತಾಂತ್ರಿಕ ಮೌಲ್ಯಮಾಪನ ಸಮಿತಿಯ (ಟಿಇಸಿ) ವರದಿಯನ್ನು ಅಂತಿಮಗೊಳಿಸುವಾಗ ಬಿಎಸ್ಎಫ್ನ ಹಿರಿಯ ಅಧಿಕಾರಿಗಳಿಬ್ಬರ ಸಹಿಯನ್ನು ನಕಲು ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.<br /> <br /> ಸಹಿಯನ್ನು ನಕಲು ಮಾಡಿದ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಸಲುವಾಗಿ ಕೈಬರಹ ಹಾಗೂ ಇತರ ವಿವರ ತಿಳಿದುಕೊಳ್ಳಲು ದಾಖಲೆಗಳನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಒಳಡಿಸುವಂತೆ ತನಿಖಾ ತಂಡವು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನವದೆಹಲಿ (ಪಿಟಿಐ): ಗಡಿ ಭದ್ರತೆಗೆ ಎರಡು ಯುದ್ಧ ವಿಮಾನಗಳ ಖರೀದಿ ಪ್ರಕ್ರಿಯೆಯಲ್ಲಿ ನಡೆದಿದೆ ಎನ್ನಲಾದ ಸುಮಾರು 1,500 ಕೋಟಿ ರೂಪಾಯಿ ಅವ್ಯವಹಾರಕ್ಕೆ ಸಂಬಂಧಿಸಿದಂತೆ ಗಡಿ ಭದ್ರತಾ ಪಡೆ (ಬಿಎಸ್ಎಫ್) ಹಾಗೂ ರಕ್ಷಣಾ ಸಚಿವಾಲಯದಿಂದ ಸಿಬಿಐ ದಾಖಲೆಗಳನ್ನು ಕೇಳಿದೆ.<br /> <br /> ಇದಕ್ಕಾಗಿ 2009ರಲ್ಲಿ ಅಂತಿಮಗೊಂಡ ಟೆಂಡರ್ ಪ್ರಕ್ರಿಯೆಗೆ ಸಂಬಂಧಿಸಿದ ದಾಖಲೆಗಳನ್ನು ಕೇಳಿರುವುದಾಗಿ ಸಿಬಿಐ ಮೂಲಗಳು ತಿಳಿಸಿವೆ.<br /> <br /> ರಕ್ಷಣಾ ಸಚಿವಾಲಯದ `ಅಜ್ಞಾತ~ ಅಧಿಕಾರಿಗಳ ವಿರುದ್ಧ ಆರಂಭಗೊಂಡಿರುವ ತನಿಖೆ ಇನ್ನು ಮೂರು ತಿಂಗಳೊಳಗೆ ಪೂರ್ಣಗೊಳ್ಳುವ ನಿರೀಕ್ಷೆ ಇದೆ ಎಂದೂ ಅವು ಹೇಳಿವೆ.<br /> <br /> ಯುದ್ಧ ವಿಮಾನ ಖರೀದಿಗೆ ಸಂಬಂಧಿಸಿದ ತಾಂತ್ರಿಕ ಮೌಲ್ಯಮಾಪನ ಸಮಿತಿಯ (ಟಿಇಸಿ) ವರದಿಯನ್ನು ಅಂತಿಮಗೊಳಿಸುವಾಗ ಬಿಎಸ್ಎಫ್ನ ಹಿರಿಯ ಅಧಿಕಾರಿಗಳಿಬ್ಬರ ಸಹಿಯನ್ನು ನಕಲು ಮಾಡಿದ ಆರೋಪಕ್ಕೆ ಸಂಬಂಧಿಸಿದ ಪ್ರಕರಣ ಇದಾಗಿದೆ.<br /> <br /> ಸಹಿಯನ್ನು ನಕಲು ಮಾಡಿದ ವ್ಯಕ್ತಿಗಳನ್ನು ಪತ್ತೆ ಹಚ್ಚುವ ಸಲುವಾಗಿ ಕೈಬರಹ ಹಾಗೂ ಇತರ ವಿವರ ತಿಳಿದುಕೊಳ್ಳಲು ದಾಖಲೆಗಳನ್ನು ವಿಧಿ ವಿಜ್ಞಾನ ಪರೀಕ್ಷೆಗೆ ಒಳಡಿಸುವಂತೆ ತನಿಖಾ ತಂಡವು ಆಗ್ರಹಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>