<p><strong>ಬೆಂಗಳೂರು:</strong> ಬಿಬಿಎಂಪಿಯಲ್ಲಿ ನಡೆದಿರುವ ಅವ್ಯವಹಾರಗಳನ್ನು ಲೆಕ್ಕ ನಿಯಂತ್ರಕರು ಹಾಗೂ ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿ ಬಹಿರಂಗಪಡಿಸಿದ್ದು, ಈ ವಿಷಯವಾಗಿ ಚರ್ಚಿಸಲು ವಿಶೇಷ ಸಭೆ ಕರೆಯಬೇಕು ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಎಂ.ಕೆ. ಗುಣಶೇಖರ್ ಒತ್ತಾಯಿಸಿದರು.<br /> <br /> ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, `ಬಿಬಿಎಂಪಿಯಲ್ಲಿ ಬಿಜೆಪಿ ನಡೆಸಿದ ಕರ್ಮಕಾಂಡವೇ ಸಿಎಜಿ ವರದಿಯಲ್ಲಿ ಪ್ರತಿಬಿಂಬಿತವಾಗಿದೆ' ಎಂದು ಆರೋಪಿಸಿದರು.<br /> <br /> `ಸಿಎಜಿ ವರದಿ ಪ್ರಕಾರ ಬಿಬಿಎಂಪಿಗೆ ರೂ 140 ಕೋಟಿಯಷ್ಟು ನಷ್ಟ ಉಂಟಾಗಿದೆ. ಈ ನಷ್ಟಕ್ಕೆ ಯಾರು ಹೊಣೆ ಮತ್ತು ಅದನ್ನು ತುಂಬಿ ಕೊಡುವವರು ಯಾರು' ಎಂದು ಪ್ರಶ್ನಿಸಿದರು.<br /> <br /> `ಸಿಎಜಿ ವರದಿ ವಿಧಾನ ಮಂಡಲದಲ್ಲಿ ಮಂಡನೆಯಾಗಿದ್ದು, ಅದನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ವಿಳಂಬವಾಗುತ್ತದೆ. ಹೀಗಾಗಿ ಬಿಬಿಎಂಪಿ ಈ ಸಂಬಂಧ ಶೀಘ್ರ ಕ್ರಮ ಜರುಗಿಸುವ ಅಗತ್ಯವಿದೆ' ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಬಿಬಿಎಂಪಿಯಲ್ಲಿ ನಡೆದಿರುವ ಅವ್ಯವಹಾರಗಳನ್ನು ಲೆಕ್ಕ ನಿಯಂತ್ರಕರು ಹಾಗೂ ಮಹಾಲೆಕ್ಕಪರಿಶೋಧಕರ (ಸಿಎಜಿ) ವರದಿ ಬಹಿರಂಗಪಡಿಸಿದ್ದು, ಈ ವಿಷಯವಾಗಿ ಚರ್ಚಿಸಲು ವಿಶೇಷ ಸಭೆ ಕರೆಯಬೇಕು ಎಂದು ಬಿಬಿಎಂಪಿ ವಿರೋಧ ಪಕ್ಷದ ನಾಯಕ ಎಂ.ಕೆ. ಗುಣಶೇಖರ್ ಒತ್ತಾಯಿಸಿದರು.<br /> <br /> ಸೋಮವಾರ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, `ಬಿಬಿಎಂಪಿಯಲ್ಲಿ ಬಿಜೆಪಿ ನಡೆಸಿದ ಕರ್ಮಕಾಂಡವೇ ಸಿಎಜಿ ವರದಿಯಲ್ಲಿ ಪ್ರತಿಬಿಂಬಿತವಾಗಿದೆ' ಎಂದು ಆರೋಪಿಸಿದರು.<br /> <br /> `ಸಿಎಜಿ ವರದಿ ಪ್ರಕಾರ ಬಿಬಿಎಂಪಿಗೆ ರೂ 140 ಕೋಟಿಯಷ್ಟು ನಷ್ಟ ಉಂಟಾಗಿದೆ. ಈ ನಷ್ಟಕ್ಕೆ ಯಾರು ಹೊಣೆ ಮತ್ತು ಅದನ್ನು ತುಂಬಿ ಕೊಡುವವರು ಯಾರು' ಎಂದು ಪ್ರಶ್ನಿಸಿದರು.<br /> <br /> `ಸಿಎಜಿ ವರದಿ ವಿಧಾನ ಮಂಡಲದಲ್ಲಿ ಮಂಡನೆಯಾಗಿದ್ದು, ಅದನ್ನು ಸಾರ್ವಜನಿಕ ಲೆಕ್ಕಪತ್ರ ಸಮಿತಿ ಪರಿಶೀಲಿಸಿ ಕ್ರಮ ಕೈಗೊಳ್ಳಲು ವಿಳಂಬವಾಗುತ್ತದೆ. ಹೀಗಾಗಿ ಬಿಬಿಎಂಪಿ ಈ ಸಂಬಂಧ ಶೀಘ್ರ ಕ್ರಮ ಜರುಗಿಸುವ ಅಗತ್ಯವಿದೆ' ಎಂದು ಪ್ರತಿಪಾದಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>