<p><strong>ಉಚ್ಚಿಲ (ಪಡುಬಿದ್ರಿ):</strong> ಉಚ್ಚಿಲದ ಕಟ್ಟಿಂಗೇರಿ ಕೆರೆಯ ಅಸಮರ್ಪಕ ಕಾಮಗಾರಿಯಿಂದ ಫಲವತ್ತಾದ ಕೃಷಿ ಭೂಮಿಗೆ ನೀರು ನುಗ್ಗಿ ಭತ್ತದ ಕೃಷಿ ನಾಶವಾಗಿದೆ.<br /> <br /> ಉಚ್ಚಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 15 ಎಕರೆ ಪ್ರದೇಶದಲ್ಲಿ ವ್ಯಾಪಿಸಿರುವ ಕಟ್ಟಿಂಗೇರಿ ಕೆರೆಯನ್ನು ಸುಮಾರು 70 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಂಡಿತ್ತು. ಮಳೆಗಾಲ ಆರಂಭವಾಗುವ ಕೆಲವೇ ತಿಂಗಳ ಮೊದಲು ಕಾಮಗಾರಿ ಆರಂಭಗೊಂಡಿತ್ತು.<br /> <br /> ಆದರೆ ಮಳೆಗಾಲ ಆರಂಭಗೊಂಡ ಬಳಿಕ ಕಾಮಗಾರಿ ಸ್ಥಗಿತಗೊಳ್ಳುವ ಮೂಲಕ ಅಸಮರ್ಪಕವಾಗಿದೆ. ಇದರಿಂದ ಮುಳ್ಳಗುಡ್ಡೆ ಎಂಬಲ್ಲಿಯ ರಮೇಶ ಎಂಬವರ ಎರಡು ಎಕರೆ ಪ್ರದೇಶದ ಕೃಷಿ ಭೂಮಿ ಸಂಪೂರ್ಣ ನಾಶವಾಗಿದೆ.<br /> <br /> ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕೃಷಿಕ ರಾಜೇಶ್ `ನಾವು ಹಲವು ವರ್ಷಗಳಿಂದ ಭತ್ತದ ಕೃಷಿ ಮಾಡುತ್ತಿದ್ದೇವೆ. ಈ ಬಾರಿ ನಮಗೆ ನಷ್ಟವಾಗಿದೆ. ಈ ಬಗ್ಗೆ ನಾವು ಉಚ್ಚಿಲ ಬಡಾ ಗ್ರಾಮ ಪಂಚಾಯತಿಗೆ ದೂರು ನೀಡಿದ್ದರೂ, ಯಾವುದೇ ಪ್ರಯೋಜನ ಆಗಿಲ್ಲ' ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಉಚ್ಚಿಲ (ಪಡುಬಿದ್ರಿ):</strong> ಉಚ್ಚಿಲದ ಕಟ್ಟಿಂಗೇರಿ ಕೆರೆಯ ಅಸಮರ್ಪಕ ಕಾಮಗಾರಿಯಿಂದ ಫಲವತ್ತಾದ ಕೃಷಿ ಭೂಮಿಗೆ ನೀರು ನುಗ್ಗಿ ಭತ್ತದ ಕೃಷಿ ನಾಶವಾಗಿದೆ.<br /> <br /> ಉಚ್ಚಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುಮಾರು 15 ಎಕರೆ ಪ್ರದೇಶದಲ್ಲಿ ವ್ಯಾಪಿಸಿರುವ ಕಟ್ಟಿಂಗೇರಿ ಕೆರೆಯನ್ನು ಸುಮಾರು 70 ಲಕ್ಷ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯವನ್ನು ಕೈಗೆತ್ತಿಕೊಂಡಿತ್ತು. ಮಳೆಗಾಲ ಆರಂಭವಾಗುವ ಕೆಲವೇ ತಿಂಗಳ ಮೊದಲು ಕಾಮಗಾರಿ ಆರಂಭಗೊಂಡಿತ್ತು.<br /> <br /> ಆದರೆ ಮಳೆಗಾಲ ಆರಂಭಗೊಂಡ ಬಳಿಕ ಕಾಮಗಾರಿ ಸ್ಥಗಿತಗೊಳ್ಳುವ ಮೂಲಕ ಅಸಮರ್ಪಕವಾಗಿದೆ. ಇದರಿಂದ ಮುಳ್ಳಗುಡ್ಡೆ ಎಂಬಲ್ಲಿಯ ರಮೇಶ ಎಂಬವರ ಎರಡು ಎಕರೆ ಪ್ರದೇಶದ ಕೃಷಿ ಭೂಮಿ ಸಂಪೂರ್ಣ ನಾಶವಾಗಿದೆ.<br /> <br /> ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಕೃಷಿಕ ರಾಜೇಶ್ `ನಾವು ಹಲವು ವರ್ಷಗಳಿಂದ ಭತ್ತದ ಕೃಷಿ ಮಾಡುತ್ತಿದ್ದೇವೆ. ಈ ಬಾರಿ ನಮಗೆ ನಷ್ಟವಾಗಿದೆ. ಈ ಬಗ್ಗೆ ನಾವು ಉಚ್ಚಿಲ ಬಡಾ ಗ್ರಾಮ ಪಂಚಾಯತಿಗೆ ದೂರು ನೀಡಿದ್ದರೂ, ಯಾವುದೇ ಪ್ರಯೋಜನ ಆಗಿಲ್ಲ' ಎಂದು ದೂರಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>