<p><strong>ಬಾಗೇಪಲ್ಲಿ</strong>: ನ್ಯಾಯಬೆಲೆ ಅಂಗಡಿಯಲ್ಲಿ ಪದಾರ್ಥಗಳನ್ನು ಅಸಮರ್ಪಕವಾಗಿ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ತಾಲ್ಲೂಕಿನ ತುರುಕೇಶಪಲ್ಲಿ ಹಾಗೂ ಸುತ್ತಮುತ್ತಲಿನ ನೂರಾರು ಗ್ರಾಮಸ್ಥರು ಮಂಗಳವಾರ ತಾಲ್ಲೂಕು ಕಚೇರಿಗೆ ಬೀಗ ಜಡಿದು, ಕಚೇರಿ ಆವರಣದಲ್ಲೇ ಊಟ ಸಿದ್ಧಪಡಿಸಿ ಪ್ರತಿಭಟಿಸಿದರು.<br /> <br /> ಕಳೆದ ಮೂರ್ನಾಲ್ಕು ತಿಂಗಳಿನಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಪದಾರ್ಥಗಳ ವಿತರಣೆ ಅಸ್ತವ್ಯಸ್ತವಾಗಿದೆ. ಸರ್ಕಾರದಿಂದ ಆಹಾರ ವಸ್ತುಗಳು ಪೂರೈಕೆಯಾಗಿದ್ದರೂ ಗ್ರಾಮಸ್ಥರಿಗೆ ವಿತರಿಸುತ್ತಿಲ್ಲ ಎಂದು ಗ್ರಾಮಸ್ಥ ರಮೇಶ್ ಆರೋಪಿಸಿದರು.<br /> <br /> |ಈ ಕುರಿತು ಹಿಂದೊಮ್ಮೆ ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು.ಆದರೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ತುರುಕೇಶಪಲ್ಲಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ವಿತರಣೆ ನಿಲ್ಲಿಸಲಾಗಿದೆ. ನ್ಯಾಯಬೆಲೆ ಅಂಗಡಿ ಮಾಲೀಕ ಹಾಗೂ ಆಹಾರ ಸರಬರಾಜು ಇಲಾಖೆ ಅಧಿಕಾರಿಗಳು ಈ ಕೃತ್ಯದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.<br /> <br /> ಉಪ ತಹಶೀಲ್ದಾರ್ ನಾರಾಯಣಪ್ಪ, ಆಹಾರ ನಿರೀಕ್ಷಕ ನರಸಿಂಹಮೂರ್ತಿ ಹಾಗೂ ಸಬ್ ಇನ್ಸ್ಪೆಕ್ಟರ್ ಜೆ.ಎನ್.ಆನಂದ್ಕುಮಾರ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು.<br /> ತುರುಕೇಶಪಲ್ಲಿ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿಯ ಹಾಲಿ ಪರವಾನಗಿಯನ್ನು ರದ್ದುಪಡಿಸಿ, ಬೇರೆಯವರಿಗೆ ಪರವಾನಗಿ ನೀಡಬೇಕೆಂದು ಧರಣಿ ನಿರತರು ಪಟ್ಟುಹಿಡಿದರು.]</p>.<p>ಹಿರಿಯ ಅಧಿಕಾರಿಗಳ ಬಳಿ ಚರ್ಚಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಯಿತು.ಮುಖಂಡರಾದ ಚೌಡಪ್ಪ, ರಾಜಶೇಖರ, ಕೃಷ್ಣಾರೆಡ್ಡಿ, ಆದಿರೆಡ್ಡಿ, ರಮೇಶ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಾಗೇಪಲ್ಲಿ</strong>: ನ್ಯಾಯಬೆಲೆ ಅಂಗಡಿಯಲ್ಲಿ ಪದಾರ್ಥಗಳನ್ನು ಅಸಮರ್ಪಕವಾಗಿ ವಿತರಿಸಲಾಗುತ್ತಿದೆ ಎಂದು ಆರೋಪಿಸಿ ತಾಲ್ಲೂಕಿನ ತುರುಕೇಶಪಲ್ಲಿ ಹಾಗೂ ಸುತ್ತಮುತ್ತಲಿನ ನೂರಾರು ಗ್ರಾಮಸ್ಥರು ಮಂಗಳವಾರ ತಾಲ್ಲೂಕು ಕಚೇರಿಗೆ ಬೀಗ ಜಡಿದು, ಕಚೇರಿ ಆವರಣದಲ್ಲೇ ಊಟ ಸಿದ್ಧಪಡಿಸಿ ಪ್ರತಿಭಟಿಸಿದರು.<br /> <br /> ಕಳೆದ ಮೂರ್ನಾಲ್ಕು ತಿಂಗಳಿನಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಆಹಾರ ಪದಾರ್ಥಗಳ ವಿತರಣೆ ಅಸ್ತವ್ಯಸ್ತವಾಗಿದೆ. ಸರ್ಕಾರದಿಂದ ಆಹಾರ ವಸ್ತುಗಳು ಪೂರೈಕೆಯಾಗಿದ್ದರೂ ಗ್ರಾಮಸ್ಥರಿಗೆ ವಿತರಿಸುತ್ತಿಲ್ಲ ಎಂದು ಗ್ರಾಮಸ್ಥ ರಮೇಶ್ ಆರೋಪಿಸಿದರು.<br /> <br /> |ಈ ಕುರಿತು ಹಿಂದೊಮ್ಮೆ ಹಿರಿಯ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಗಿತ್ತು.ಆದರೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿ ಮಾಲೀಕರ ವಿರುದ್ಧ ಯಾವುದೇ ಕ್ರಮ ಜರುಗಿಸಿಲ್ಲ. ತುರುಕೇಶಪಲ್ಲಿ ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರಿಗೆ ವಿತರಣೆ ನಿಲ್ಲಿಸಲಾಗಿದೆ. ನ್ಯಾಯಬೆಲೆ ಅಂಗಡಿ ಮಾಲೀಕ ಹಾಗೂ ಆಹಾರ ಸರಬರಾಜು ಇಲಾಖೆ ಅಧಿಕಾರಿಗಳು ಈ ಕೃತ್ಯದಲ್ಲಿ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು.<br /> <br /> ಉಪ ತಹಶೀಲ್ದಾರ್ ನಾರಾಯಣಪ್ಪ, ಆಹಾರ ನಿರೀಕ್ಷಕ ನರಸಿಂಹಮೂರ್ತಿ ಹಾಗೂ ಸಬ್ ಇನ್ಸ್ಪೆಕ್ಟರ್ ಜೆ.ಎನ್.ಆನಂದ್ಕುಮಾರ್ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಮನವೊಲಿಸಲು ಯತ್ನಿಸಿದರು.<br /> ತುರುಕೇಶಪಲ್ಲಿ ಗ್ರಾಮದಲ್ಲಿನ ನ್ಯಾಯಬೆಲೆ ಅಂಗಡಿಯ ಹಾಲಿ ಪರವಾನಗಿಯನ್ನು ರದ್ದುಪಡಿಸಿ, ಬೇರೆಯವರಿಗೆ ಪರವಾನಗಿ ನೀಡಬೇಕೆಂದು ಧರಣಿ ನಿರತರು ಪಟ್ಟುಹಿಡಿದರು.]</p>.<p>ಹಿರಿಯ ಅಧಿಕಾರಿಗಳ ಬಳಿ ಚರ್ಚಿಸಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ ಬಳಿಕ ಪ್ರತಿಭಟನೆ ವಾಪಸ್ ಪಡೆಯಲಾಯಿತು.ಮುಖಂಡರಾದ ಚೌಡಪ್ಪ, ರಾಜಶೇಖರ, ಕೃಷ್ಣಾರೆಡ್ಡಿ, ಆದಿರೆಡ್ಡಿ, ರಮೇಶ ಇತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>