<p>ಪಾವಗಡ: ಬರ ಪರಿಹಾರ ನಿರ್ವಹಣೆಯಲ್ಲಿ ಸರ್ಕಾರ ಎಡವಿದ್ದು, ಜನತೆ ಸಮಸ್ಯೆಗೆ ಸಿಲುಕಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.<br /> <br /> ತಾಲ್ಲೂಕಿಗೆ ನಾಗಲಮಡಿಕೆಗೆ ಶುಕ್ರವಾರ ಭೇಟಿ ನೀಡಿದ್ದ ಸಂದರ್ಭ ಮಾತನಾಡಿದ ಅವರು, ಸರ್ಕಾರಕ್ಕೆ ಬರದ ತೀವ್ರತೆ ಅರ್ಥವಾಗಿರಲಿಲ್ಲ. ಕಾಂಗ್ರೆಸ್ ಬರ ಅಧ್ಯಯನಕ್ಕೆ ಹೋರಟ ನಂತರ ಬರಪರಿಹಾರ ಕಾಮಗಾರಿ ಚುರುಕುಗೊಂಡಿವೆ ಎಂದರು.<br /> <br /> ಬಿಜೆಪಿ ಆಂತರಿಕ ಕಿತ್ತಾಟ, ಬದ್ಧತೆ ರಹಿತ ಅಧಿಕಾರದಿಂದ ರಾಜ್ಯದ ಸಾವಿರಾರು ಹಳ್ಳಿಗಳು ಕುಡಿಯುವ ನೀರಿನ ಕೊರತೆ ಎದುರಿಸುತ್ತಿವೆ. ದನಕರುಗಳಿಗೆ ಮೇವು ಇಲ್ಲ. ಜನ ವಲಸೆ ಹೋಗುವ ಸ್ಥಿತಿ ತಂದಿಟ್ಟಿದ್ದಾರೆ ಎಂದು ಆರೋಪಿಸಿದರು. <br /> <br /> ರಾಜ್ಯದಲ್ಲಿ ಕೋಟಿಗೂ ಹೆಚ್ಚು ರಾಸುಗಳಿದ್ದು, ಕೇವಲ 43 ಗೋಶಾಲೆ ತೆರೆಯಲಾಗಿದೆ. ಮೇವು ಬ್ಯಾಂಕ್ ಸ್ಥಾಪಿಸಿ ಮೇವನ್ನು ಉಚಿತವಾಗಿ ನೀಡಬೇಕು ಎಂದರು. <br /> <br /> ಶಾಸಕರಾದ ವೆಂಕಟರಮಣಪ್ಪ, ವಿ.ಆರ್. ಸುದರ್ಶನ್, ಮಂಜುನಾಥ್, ಕೆಪಿಸಿಸಿ ಕಾರ್ಯದರ್ಶಿ. ಎ ಶ್ರಿನಿವಾಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹಮದ್, ಬಸವರಾಜರಾಯರೆಡ್ಡಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್ . ರಾಜಣ್ಣ, ಸುದೇಶ್ಕುಮಾರ್, ಎಚ್. ವಿ.ವೆಂಕಟೇಶ್, ಜಂಪಯ್ಯ, ಜಿ.ಎಸ್ . ಧರ್ಮಪಾಲ್, ಚಿಕ್ಕನಾಗಪ್ಪ ಮುಂತಾದವರು ಭಾಗವಹಿಸಿದ್ದರು. <br /> <br /> <strong>ಅಧಿಕಾರ ಬಿಡಲಿ: ಆಗ್ರಹ </strong><br /> ಮಧುಗಿರಿ: ಸರ್ಕಾರ ಆಡಳಿತ ನಡೆಸಲು ಅನುಭವ ಇಲ್ಲದಿದ್ದರೆ ಅಧಿಕಾರ ಬಿಟ್ಟುಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ.<br /> <br /> ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಬರವನ್ನು ಎದುರಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. 123 ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ಪ್ರದೇಶ ಎಂದು ಘೋಷಿಸಿದೆ.<br /> <br /> ರಾಜ್ಯ ಸರ್ಕಾರದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರ ರೂ. 169 ಕೋಟಿ ಬಿಡುಗಡೆ ಮಾಡಿದೆ. ಇದಲ್ಲದೆ ಕುಡಿಯುವ ನೀರಿಗಾಗಿ ರೂ. 127 ಕೋಟಿ ಬಿಡುಗಡೆ ಗೊಳಿಸಿದರೂ ರಾಜಕೀಯ ದುರುದ್ದೇಶದಿಂದ ಕೇಂದ್ರ ಸರ್ಕಾರವನ್ನು ದೂರುವುದು ಸರಿಯಲ್ಲ ಎಂದರು.<br /> <br /> ಮಧುಗಿರಿ ತಾಲ್ಲೂಕಿಗೆ ಕೇವಲ ರೂ. 30 ಲಕ್ಷ ಮಾತ್ರ ಬಿಡುಗಡೆಗೊಳಿಸಿರುವು ದರಿಂದ ಬರ ಪರಿಸ್ಧಿತಿ ಎದುರಿಸಲು ಸಾಧ್ಯವಿಲ್ಲ. ಗೋಶಾಲೆ ವ್ಯವಸ್ಧೆಯನ್ನು ತಕ್ಷಣ ಕೈಗೊಳ್ಳಬೇಕಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಪಾವಗಡ: ಬರ ಪರಿಹಾರ ನಿರ್ವಹಣೆಯಲ್ಲಿ ಸರ್ಕಾರ ಎಡವಿದ್ದು, ಜನತೆ ಸಮಸ್ಯೆಗೆ ಸಿಲುಕಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆರೋಪಿಸಿದ್ದಾರೆ.<br /> <br /> ತಾಲ್ಲೂಕಿಗೆ ನಾಗಲಮಡಿಕೆಗೆ ಶುಕ್ರವಾರ ಭೇಟಿ ನೀಡಿದ್ದ ಸಂದರ್ಭ ಮಾತನಾಡಿದ ಅವರು, ಸರ್ಕಾರಕ್ಕೆ ಬರದ ತೀವ್ರತೆ ಅರ್ಥವಾಗಿರಲಿಲ್ಲ. ಕಾಂಗ್ರೆಸ್ ಬರ ಅಧ್ಯಯನಕ್ಕೆ ಹೋರಟ ನಂತರ ಬರಪರಿಹಾರ ಕಾಮಗಾರಿ ಚುರುಕುಗೊಂಡಿವೆ ಎಂದರು.<br /> <br /> ಬಿಜೆಪಿ ಆಂತರಿಕ ಕಿತ್ತಾಟ, ಬದ್ಧತೆ ರಹಿತ ಅಧಿಕಾರದಿಂದ ರಾಜ್ಯದ ಸಾವಿರಾರು ಹಳ್ಳಿಗಳು ಕುಡಿಯುವ ನೀರಿನ ಕೊರತೆ ಎದುರಿಸುತ್ತಿವೆ. ದನಕರುಗಳಿಗೆ ಮೇವು ಇಲ್ಲ. ಜನ ವಲಸೆ ಹೋಗುವ ಸ್ಥಿತಿ ತಂದಿಟ್ಟಿದ್ದಾರೆ ಎಂದು ಆರೋಪಿಸಿದರು. <br /> <br /> ರಾಜ್ಯದಲ್ಲಿ ಕೋಟಿಗೂ ಹೆಚ್ಚು ರಾಸುಗಳಿದ್ದು, ಕೇವಲ 43 ಗೋಶಾಲೆ ತೆರೆಯಲಾಗಿದೆ. ಮೇವು ಬ್ಯಾಂಕ್ ಸ್ಥಾಪಿಸಿ ಮೇವನ್ನು ಉಚಿತವಾಗಿ ನೀಡಬೇಕು ಎಂದರು. <br /> <br /> ಶಾಸಕರಾದ ವೆಂಕಟರಮಣಪ್ಪ, ವಿ.ಆರ್. ಸುದರ್ಶನ್, ಮಂಜುನಾಥ್, ಕೆಪಿಸಿಸಿ ಕಾರ್ಯದರ್ಶಿ. ಎ ಶ್ರಿನಿವಾಸ್, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಷಫಿ ಅಹಮದ್, ಬಸವರಾಜರಾಯರೆಡ್ಡಿ, ಡಿಸಿಸಿ ಬ್ಯಾಂಕ್ ಅಧ್ಯಕ್ಷ ಕೆ.ಎನ್ . ರಾಜಣ್ಣ, ಸುದೇಶ್ಕುಮಾರ್, ಎಚ್. ವಿ.ವೆಂಕಟೇಶ್, ಜಂಪಯ್ಯ, ಜಿ.ಎಸ್ . ಧರ್ಮಪಾಲ್, ಚಿಕ್ಕನಾಗಪ್ಪ ಮುಂತಾದವರು ಭಾಗವಹಿಸಿದ್ದರು. <br /> <br /> <strong>ಅಧಿಕಾರ ಬಿಡಲಿ: ಆಗ್ರಹ </strong><br /> ಮಧುಗಿರಿ: ಸರ್ಕಾರ ಆಡಳಿತ ನಡೆಸಲು ಅನುಭವ ಇಲ್ಲದಿದ್ದರೆ ಅಧಿಕಾರ ಬಿಟ್ಟುಬಿಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಆಗ್ರಹಿಸಿದ್ದಾರೆ.<br /> <br /> ಪಟ್ಟಣದಲ್ಲಿ ಶುಕ್ರವಾರ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ಬರವನ್ನು ಎದುರಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. 123 ತಾಲ್ಲೂಕುಗಳನ್ನು ಮಾತ್ರ ಬರಪೀಡಿತ ಪ್ರದೇಶ ಎಂದು ಘೋಷಿಸಿದೆ.<br /> <br /> ರಾಜ್ಯ ಸರ್ಕಾರದ ಶಿಫಾರಸ್ಸಿನಂತೆ ಕೇಂದ್ರ ಸರ್ಕಾರ ರೂ. 169 ಕೋಟಿ ಬಿಡುಗಡೆ ಮಾಡಿದೆ. ಇದಲ್ಲದೆ ಕುಡಿಯುವ ನೀರಿಗಾಗಿ ರೂ. 127 ಕೋಟಿ ಬಿಡುಗಡೆ ಗೊಳಿಸಿದರೂ ರಾಜಕೀಯ ದುರುದ್ದೇಶದಿಂದ ಕೇಂದ್ರ ಸರ್ಕಾರವನ್ನು ದೂರುವುದು ಸರಿಯಲ್ಲ ಎಂದರು.<br /> <br /> ಮಧುಗಿರಿ ತಾಲ್ಲೂಕಿಗೆ ಕೇವಲ ರೂ. 30 ಲಕ್ಷ ಮಾತ್ರ ಬಿಡುಗಡೆಗೊಳಿಸಿರುವು ದರಿಂದ ಬರ ಪರಿಸ್ಧಿತಿ ಎದುರಿಸಲು ಸಾಧ್ಯವಿಲ್ಲ. ಗೋಶಾಲೆ ವ್ಯವಸ್ಧೆಯನ್ನು ತಕ್ಷಣ ಕೈಗೊಳ್ಳಬೇಕಾಗಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>