<p><strong>ನವದೆಹಲಿ (ಪಿಟಿಐ): </strong>ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಬಂಧನ ಭೀತಿಯಿಂದಾಗಿ ತಲೆಮರಿಸಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಪುತ್ರ ನಾರಾಯಣ್ ಸಾಯಿ ಅವರನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಸೂರತ್ ನಲ್ಲಿ ಬಂಧಿಸಿದ್ದಾರೆ.</p>.<p>‘ದೆಹಲಿ –ಹರಿಯಾಣ ಗಡಿಯಲ್ಲಿ ನಾರಾಯಣ ಸಾಯಿ ಅವರನ್ನು ಬಂಧಿಸಲಾಗಿದೆ. ಜೊತೆಗೆ ಅವರ ಆಪ್ತ ಹನುಮಾನ್ ಅವರನ್ನೂ ಬಂಧಿಸಲಾಗಿದೆ’ ಎಂಧು ದೆಹಲಿ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರವೀಂದ್ರ ಯಾದವ್ ಬುಧವಾರ ಪಿಟಿಐಗೆ ತಿಳಿಸಿದರು.</p>.<p>ಬಂಧನದಿಂದ ಪಾರಾಗಲು ಸಾಯಿ ಸಿಖ್ ವ್ಯಕ್ತಿಯಂತೆ ವೇಷ ಬದಲಾಯಿಸಿಕೊಂಡಿದ್ದರು ಎಂದು ದೆಹಲಿ ಪೊಲೀಸ್ ಮೂಲಗಳು ಹೇಳಿವೆ.</p>.<p>ಇತ್ತ ಅಹಮದಾಬಾದ್ನಲ್ಲಿ ಪ್ರತಿಕ್ರಿಯಿಸಿರುವ ಗುಜರಾತ್ ಪೊಲೀಸ್ ಮಹಾ ನಿರ್ದೇಶಕ ಪ್ರಮೋದ್ ಕುಮಾರ್,ಸೂರತ್ನ ಜಹಾಂಗೀರಪುರ ಪೊಲೀಸ್ ಠಾಣೆಯಲ್ಲಿ ಸಹೋದರಿಯರಿಬ್ಬರು ಅಸಾರಾಮ್ ಬಾಪು ಹಾಗೂ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಬೆನ್ನಲ್ಲೆ ಕಳೆದ ಕೆಲ ತಿಂಗಳನಿಂದ ಸಾಯಿ ತಲೆಮರಿಸಿಕೊಂಡಿದ್ದರು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಲೈಂಗಿಕ ಕಿರುಕುಳ ಪ್ರಕರಣ ಸಂಬಂಧ ಬಂಧನ ಭೀತಿಯಿಂದಾಗಿ ತಲೆಮರಿಸಿಕೊಂಡಿದ್ದ ಸ್ವಯಂಘೋಷಿತ ದೇವಮಾನವ ಅಸಾರಾಮ್ ಬಾಪು ಪುತ್ರ ನಾರಾಯಣ್ ಸಾಯಿ ಅವರನ್ನು ದೆಹಲಿ ಅಪರಾಧ ವಿಭಾಗದ ಪೊಲೀಸರು ಸೂರತ್ ನಲ್ಲಿ ಬಂಧಿಸಿದ್ದಾರೆ.</p>.<p>‘ದೆಹಲಿ –ಹರಿಯಾಣ ಗಡಿಯಲ್ಲಿ ನಾರಾಯಣ ಸಾಯಿ ಅವರನ್ನು ಬಂಧಿಸಲಾಗಿದೆ. ಜೊತೆಗೆ ಅವರ ಆಪ್ತ ಹನುಮಾನ್ ಅವರನ್ನೂ ಬಂಧಿಸಲಾಗಿದೆ’ ಎಂಧು ದೆಹಲಿ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರವೀಂದ್ರ ಯಾದವ್ ಬುಧವಾರ ಪಿಟಿಐಗೆ ತಿಳಿಸಿದರು.</p>.<p>ಬಂಧನದಿಂದ ಪಾರಾಗಲು ಸಾಯಿ ಸಿಖ್ ವ್ಯಕ್ತಿಯಂತೆ ವೇಷ ಬದಲಾಯಿಸಿಕೊಂಡಿದ್ದರು ಎಂದು ದೆಹಲಿ ಪೊಲೀಸ್ ಮೂಲಗಳು ಹೇಳಿವೆ.</p>.<p>ಇತ್ತ ಅಹಮದಾಬಾದ್ನಲ್ಲಿ ಪ್ರತಿಕ್ರಿಯಿಸಿರುವ ಗುಜರಾತ್ ಪೊಲೀಸ್ ಮಹಾ ನಿರ್ದೇಶಕ ಪ್ರಮೋದ್ ಕುಮಾರ್,ಸೂರತ್ನ ಜಹಾಂಗೀರಪುರ ಪೊಲೀಸ್ ಠಾಣೆಯಲ್ಲಿ ಸಹೋದರಿಯರಿಬ್ಬರು ಅಸಾರಾಮ್ ಬಾಪು ಹಾಗೂ ಪುತ್ರನ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿದ ಬೆನ್ನಲ್ಲೆ ಕಳೆದ ಕೆಲ ತಿಂಗಳನಿಂದ ಸಾಯಿ ತಲೆಮರಿಸಿಕೊಂಡಿದ್ದರು’ ಎಂದು ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>