<p><strong>ಕುಮಟಾ: </strong>ಮಾಜಿ ಸಚಿವ ಕುಮಾರ ಬಂಗಾರಪ್ಪ ಮಂಗಳವಾರ ಕುಮಟಾ ತಾಲ್ಲೂಕಿನ ಪುಣ್ಯಕ್ಷೇತ್ರ ಗೋಕರ್ಣದಲ್ಲಿ ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅಪರ ಕಾರ್ಯ ನೆರವೇರಿಸಿದರು.<br /> <br /> ಮುಂಜಾನೆ 8 ಗಂಟೆಯ ಹೊತ್ತಿಗೆ ಸಮುದ್ರ ದರ್ಶನ ಮಾಡಿ ಬಂದ ಕುಮಾರ ಬಂಗಾರಪ್ಪ ಅವರು ಕೋಟಿ ತೀರ್ಥದಲ್ಲಿ ತಂದೆಯ ಅಪರ ಕಾರ್ಯಗಳನ್ನು ಆರಂಭಿಸಿದರು. ದಶವಿಧ ಸ್ನಾನ, ನಿತ್ಯವಿಧಿ ನಂತರ ಕೋಟಿತೀರ್ಥದ ದಡದಲ್ಲಿ ಕೇಶಮಂಡನ ಮಾಡಿಸಿಕೊಂಡರು. ನಂತರ ತಾಮ್ರ ಗಂಗೆಯಲ್ಲಿ ಚಿತಾಭಸ್ಮ ವಿಸರ್ಜಿಸಿದರು.<br /> <br /> `ತಂದೆಯ ಆತ್ಮಕ್ಕೆ ಶಾಂತಿ ಬಯಸಿ ನಾನು ಕೈಕೊಂಡ ಅಪರ ಕಾರ್ಯಗಳ ಬಗ್ಗೆ ನನಗೆ ತೃಪ್ತಿ ಉಂಟಾಗಿದೆ~ ಎಂದು ಪತ್ರಕರ್ತರಿಗೆ ಅವರು ತಿಳಿಸಿದರು. <br /> <br /> ಕುಮಾರ ಬಂಗಾರಪ್ಪ ಅವರೊಂದಿಗೆ ಹೊಸನಗರ ಕ್ಷೇತ್ರದ ಮಾಜಿ ಶಾಸಕ ಡಾ. ನಾರಾಯಣಪ್ಪ, ಕುಮಟಾ ಮಾಜಿ ಶಾಸಕ ಕೆ.ಎಚ್. ಗೌಡ, ಮಾಜಿ ಶಾಸಕರುಗಳಾದ ವಿರೂಪಾಕ್ಷಪ್ಪ, ಸಿ.ವಿ. ಹುಲಿಮನೆ ಹಾಗೂ ಬಂಧುಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕುಮಟಾ: </strong>ಮಾಜಿ ಸಚಿವ ಕುಮಾರ ಬಂಗಾರಪ್ಪ ಮಂಗಳವಾರ ಕುಮಟಾ ತಾಲ್ಲೂಕಿನ ಪುಣ್ಯಕ್ಷೇತ್ರ ಗೋಕರ್ಣದಲ್ಲಿ ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ಬಂಗಾರಪ್ಪ ಅವರ ಅಪರ ಕಾರ್ಯ ನೆರವೇರಿಸಿದರು.<br /> <br /> ಮುಂಜಾನೆ 8 ಗಂಟೆಯ ಹೊತ್ತಿಗೆ ಸಮುದ್ರ ದರ್ಶನ ಮಾಡಿ ಬಂದ ಕುಮಾರ ಬಂಗಾರಪ್ಪ ಅವರು ಕೋಟಿ ತೀರ್ಥದಲ್ಲಿ ತಂದೆಯ ಅಪರ ಕಾರ್ಯಗಳನ್ನು ಆರಂಭಿಸಿದರು. ದಶವಿಧ ಸ್ನಾನ, ನಿತ್ಯವಿಧಿ ನಂತರ ಕೋಟಿತೀರ್ಥದ ದಡದಲ್ಲಿ ಕೇಶಮಂಡನ ಮಾಡಿಸಿಕೊಂಡರು. ನಂತರ ತಾಮ್ರ ಗಂಗೆಯಲ್ಲಿ ಚಿತಾಭಸ್ಮ ವಿಸರ್ಜಿಸಿದರು.<br /> <br /> `ತಂದೆಯ ಆತ್ಮಕ್ಕೆ ಶಾಂತಿ ಬಯಸಿ ನಾನು ಕೈಕೊಂಡ ಅಪರ ಕಾರ್ಯಗಳ ಬಗ್ಗೆ ನನಗೆ ತೃಪ್ತಿ ಉಂಟಾಗಿದೆ~ ಎಂದು ಪತ್ರಕರ್ತರಿಗೆ ಅವರು ತಿಳಿಸಿದರು. <br /> <br /> ಕುಮಾರ ಬಂಗಾರಪ್ಪ ಅವರೊಂದಿಗೆ ಹೊಸನಗರ ಕ್ಷೇತ್ರದ ಮಾಜಿ ಶಾಸಕ ಡಾ. ನಾರಾಯಣಪ್ಪ, ಕುಮಟಾ ಮಾಜಿ ಶಾಸಕ ಕೆ.ಎಚ್. ಗೌಡ, ಮಾಜಿ ಶಾಸಕರುಗಳಾದ ವಿರೂಪಾಕ್ಷಪ್ಪ, ಸಿ.ವಿ. ಹುಲಿಮನೆ ಹಾಗೂ ಬಂಧುಗಳು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>