<p><strong>ಗುವಾಹಟಿ (ಪಿಟಿಐ): </strong>ಭಾರಿ ಮಳೆ ಹಾಗೂ ಪ್ರವಾಹದಿಂದ ಅಪಾರ ಪ್ರಮಾಣದ ಹಾನಿಗೆ ಒಳಗಾಗಿರುವ ಅಸ್ಸಾಂಗೆ ಪ್ರಧಾನಿ ಮನಮೋಹನ್ ಸಿಂಗ್ ಅವರು 500 ಕೋಟಿ ರೂಪಾಯಿ ಪರಿಹಾರ ಕೊಡುಗೆ ಪ್ರಕಟಿಸಿದ್ದಾರೆ.<br /> <br /> ಪ್ರವಾಹ ಪೀಡಿತ ಪ್ರದೇಶಗಳಾದ ಜೋರಾತ್, ದಿಮಜಿ ಮತ್ತು ದಕ್ಷಿಣ ದಿನಾಜಪುರಗಳಲ್ಲಿ ಪ್ರಧಾನಿ ಸಿಂಗ್ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ವೈಮಾನಿಕ ಸಮೀಕ್ಷೆ ನಡೆಸಿದರು. ವ್ಯಾಪಕ ಪ್ರಮಾಣದಲ್ಲಿ ಜೀವ ಹಾಗೂ ಆಸ್ತಿ ಹಾನಿಯಾಗಿರುವುದಾಗಿ ಹೇಳಿದ್ದಾರೆ.<br /> <br /> ಪ್ರವಾಹ ಹಾಗೂ ಭೂ ಕುಸಿತದಿಂದ ಇದುವರೆಗೆ 77 ಮಂದಿ ಮೃತಪಟ್ಟಿದ್ದು, ಐದು ಲಕ್ಷಕ್ಕೂ ಅಧಿಕ ಮಂದಿ ನಿರ್ವಸಿತರಾಗಿದ್ದಾರೆ. ಮೃತಪಟ್ಟವರ ಕುಟುಂಬದವರಿಗೆ ತಲಾ ಒಂದು ಲಕ್ಷ ಪರಿಹಾರವನ್ನು ಈ ಸಂದರ್ಭದಲ್ಲಿ ಘೋಷಿಸಿದರು. <br /> <br /> ಆದಷ್ಟು ಶೀಘ್ರವಾಗಿ ಪರಿಹಾರ ಕಾಮಗಾರಿ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.<br /> ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ 640 ರಕ್ಷಣಾ ಕಾರ್ಯಕರ್ತರು, ಹೆಚ್ಚುವರಿಯಾಗಿ 752 ಯೋಧರು ಮತ್ತು 71 ಬೋಟ್ಗಳನ್ನು ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ನಿಯೋಜಿಸಲಾಗಿದೆ.<br /> <br /> ಪರಿಹಾರ ಕಾರ್ಯಕರ್ತರು ಇಲ್ಲಿಯವರೆಗೆ 20 ಟನ್ ಪರಿಹಾರ ಸಾಮಗ್ರಿಗಳನ್ನು ಹೆಲಿಕಾಪ್ಟರ್ಗಳ ಮೂಲಕ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಿತರಿಸಿದ್ದಾರೆ ಎಂದು ಪ್ರಧಾನಿ ತಿಳಿಸಿದರು.<br /> <br /> ರಾಜ್ಯದಾದ್ಯಂತ 768 ನಿರಾಶ್ರಿತರ ಶಿಬಿರಗಳಲ್ಲಿ 4.84 ಲಕ್ಷ ಮಂದಿ ಆಶ್ರಯ ಪಡೆದಿದ್ದಾರೆ. ಸಾಕಷ್ಟು ಆಹಾರ ಧಾನ್ಯಗಳು ರಾಜ್ಯ ಸರ್ಕಾರದ ಉಗ್ರಾಣದಲ್ಲಿದ್ದು, ರಾಜ್ಯದಿಂದ ಮತ್ತಷ್ಟು ಕೋರಿಕೆ ಬಂದರೆ ಕೇಂದ್ರ ಸರಬರಾಜು ಮಾಡುವುದಾಗಿ ಸಿಂಗ್ ಹೇಳಿದರು.<br /> <br /> ಬರಾಕ್ ಕಣಿವೆ ಪ್ರದೇಶ, ತ್ರಿಪುರಾ ಹಾಗೂ ಮಿಜೋರಾಂನಲ್ಲಿ ಹಾನಿಗೊಂಡಿರುವ ರೈಲು ಹಳಿಗಳನ್ನು ಅದಷ್ಟು ಬೇಗ ಸರಿಪಡಿಸುವಂತೆ ರೈಲ್ವೆ ಸಚಿವಾಲಯಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ (ಪಿಟಿಐ): </strong>ಭಾರಿ ಮಳೆ ಹಾಗೂ ಪ್ರವಾಹದಿಂದ ಅಪಾರ ಪ್ರಮಾಣದ ಹಾನಿಗೆ ಒಳಗಾಗಿರುವ ಅಸ್ಸಾಂಗೆ ಪ್ರಧಾನಿ ಮನಮೋಹನ್ ಸಿಂಗ್ ಅವರು 500 ಕೋಟಿ ರೂಪಾಯಿ ಪರಿಹಾರ ಕೊಡುಗೆ ಪ್ರಕಟಿಸಿದ್ದಾರೆ.<br /> <br /> ಪ್ರವಾಹ ಪೀಡಿತ ಪ್ರದೇಶಗಳಾದ ಜೋರಾತ್, ದಿಮಜಿ ಮತ್ತು ದಕ್ಷಿಣ ದಿನಾಜಪುರಗಳಲ್ಲಿ ಪ್ರಧಾನಿ ಸಿಂಗ್ ಹಾಗೂ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಸೋಮವಾರ ವೈಮಾನಿಕ ಸಮೀಕ್ಷೆ ನಡೆಸಿದರು. ವ್ಯಾಪಕ ಪ್ರಮಾಣದಲ್ಲಿ ಜೀವ ಹಾಗೂ ಆಸ್ತಿ ಹಾನಿಯಾಗಿರುವುದಾಗಿ ಹೇಳಿದ್ದಾರೆ.<br /> <br /> ಪ್ರವಾಹ ಹಾಗೂ ಭೂ ಕುಸಿತದಿಂದ ಇದುವರೆಗೆ 77 ಮಂದಿ ಮೃತಪಟ್ಟಿದ್ದು, ಐದು ಲಕ್ಷಕ್ಕೂ ಅಧಿಕ ಮಂದಿ ನಿರ್ವಸಿತರಾಗಿದ್ದಾರೆ. ಮೃತಪಟ್ಟವರ ಕುಟುಂಬದವರಿಗೆ ತಲಾ ಒಂದು ಲಕ್ಷ ಪರಿಹಾರವನ್ನು ಈ ಸಂದರ್ಭದಲ್ಲಿ ಘೋಷಿಸಿದರು. <br /> <br /> ಆದಷ್ಟು ಶೀಘ್ರವಾಗಿ ಪರಿಹಾರ ಕಾಮಗಾರಿ ಕೈಗೊಳ್ಳುವಂತೆ ಅವರು ಅಧಿಕಾರಿಗಳಿಗೆ ಸೂಚಿಸಿದರು.<br /> ರಾಷ್ಟ್ರೀಯ ವಿಪತ್ತು ಪರಿಹಾರ ಪಡೆಯ 640 ರಕ್ಷಣಾ ಕಾರ್ಯಕರ್ತರು, ಹೆಚ್ಚುವರಿಯಾಗಿ 752 ಯೋಧರು ಮತ್ತು 71 ಬೋಟ್ಗಳನ್ನು ಪ್ರವಾಹದಲ್ಲಿ ಸಿಲುಕಿರುವ ಜನರ ರಕ್ಷಣೆಗೆ ನಿಯೋಜಿಸಲಾಗಿದೆ.<br /> <br /> ಪರಿಹಾರ ಕಾರ್ಯಕರ್ತರು ಇಲ್ಲಿಯವರೆಗೆ 20 ಟನ್ ಪರಿಹಾರ ಸಾಮಗ್ರಿಗಳನ್ನು ಹೆಲಿಕಾಪ್ಟರ್ಗಳ ಮೂಲಕ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಿತರಿಸಿದ್ದಾರೆ ಎಂದು ಪ್ರಧಾನಿ ತಿಳಿಸಿದರು.<br /> <br /> ರಾಜ್ಯದಾದ್ಯಂತ 768 ನಿರಾಶ್ರಿತರ ಶಿಬಿರಗಳಲ್ಲಿ 4.84 ಲಕ್ಷ ಮಂದಿ ಆಶ್ರಯ ಪಡೆದಿದ್ದಾರೆ. ಸಾಕಷ್ಟು ಆಹಾರ ಧಾನ್ಯಗಳು ರಾಜ್ಯ ಸರ್ಕಾರದ ಉಗ್ರಾಣದಲ್ಲಿದ್ದು, ರಾಜ್ಯದಿಂದ ಮತ್ತಷ್ಟು ಕೋರಿಕೆ ಬಂದರೆ ಕೇಂದ್ರ ಸರಬರಾಜು ಮಾಡುವುದಾಗಿ ಸಿಂಗ್ ಹೇಳಿದರು.<br /> <br /> ಬರಾಕ್ ಕಣಿವೆ ಪ್ರದೇಶ, ತ್ರಿಪುರಾ ಹಾಗೂ ಮಿಜೋರಾಂನಲ್ಲಿ ಹಾನಿಗೊಂಡಿರುವ ರೈಲು ಹಳಿಗಳನ್ನು ಅದಷ್ಟು ಬೇಗ ಸರಿಪಡಿಸುವಂತೆ ರೈಲ್ವೆ ಸಚಿವಾಲಯಕ್ಕೆ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೂಚಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>