<p><strong>ಗುವಾಹಟಿ (ಐಎಎನ್ಎಸ್):</strong> ಅಸ್ಸಾಂನಲ್ಲಿ ಕೋಮು ಗಲಭೆಯಿಂದ ಉಂಟಾದ ಹಿಂಸಾಚಾರಕ್ಕೆ ಬಾಂಗ್ಲಾದೇಶದಿಂದ ಬಂದ ವಲಸಿಗರೇ ಕಾರಣ ಎಂದು ಮಂಗಳವಾರ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರು ಆರೋಪಿಸಿದರು.<br /> <br /> ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು `ಈ ಬಿಕ್ಕಟ್ಟನ್ನು ಬಗೆಹರಿಸಲು ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ~ ಎಂದು ಹೇಳಿದರು.<br /> <br /> `ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ರಾಜಕೀಯ ತಂತ್ರದ ಪರಿಣಾಮ ಬಾಂಗ್ಲಾದೇಶದವರು ಅಕ್ರಮವಾಗಿ ವಲಸೆ ಬಂದು ದೊಡ್ಡ ಪ್ರಮಾಣದಲ್ಲಿ ಭೂಮಿ ಕಬಳಿಸಿರುವುದರಿಂದ, ಸ್ವಂತ ನೆಲದಲ್ಲೇ ಅಸ್ಸಾಂನ ಜನರಿಗೆ ಅಭದ್ರತೆಯ ಭಯ ಕಾಡುತ್ತಿದೆ~ ಎಂದು ಅಡ್ವಾಣಿ ತಿಳಿಸಿದರು.<br /> <br /> ಅಷ್ಟೇ ಅಲ್ಲದೇ ಸ್ವಂತ ನೆಲದಲ್ಲೇ ಬೋಡೊಗಳನ್ನು ಕೀಳಾಗಿ ಕಾಣುವಂತ ಪರಿಸ್ಥಿತಿ ಉದ್ಭವಿಸಿದ್ದು, ಇದರಿಂದ ಬೋಡೊಗಳು ಜನಾಂಗೀಯ ಸಮಸ್ಯೆಯನ್ನು ಕೂಡ ಎದುರಿಸುವಂತಾಗಿದೆ ಎಂದು ಹೇಳಿದರು. <br /> <br /> ಕಳೆದ ಒಂದು ವಾರದಿಂದ ಅಸ್ಸಾಂ ಬೋಡೊಗಳು ಹಾಗೂ ಬಾಂಗ್ಲಾದೇಶದಿಂದ ವಲಸೆ ಬಂದ ಬಂಗಾಳಿ ಭಾಷಿಕ ಮುಸ್ಲಿಮರ ನಡುವಿನ ಜನಾಂಗೀಯ ಕದನದಿಂದ ಹೊತ್ತಿ ಉರಿಯುತ್ತಿದೆ. ಬೋಡೊ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಇಲ್ಲಿನ ನಾಲ್ಕು ಜಿಲ್ಲೆಗಳಲ್ಲಿ ಹಿಂಸೆ ಭುಗಿಲೆದ್ದಿದೆ. <br /> <br /> ಈ ಗಲಭೆ ಇವರೆಗೆ 56ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. 2 ಲಕ್ಷಕ್ಕೂ ಹೆಚ್ಚು ಜನ ಮನೆ, ಜಾನುವಾರುಗಳನ್ನು ತೊರೆದು ಓಡಿಹೋಗಿದ್ದಾರೆ. ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ (ಐಎಎನ್ಎಸ್):</strong> ಅಸ್ಸಾಂನಲ್ಲಿ ಕೋಮು ಗಲಭೆಯಿಂದ ಉಂಟಾದ ಹಿಂಸಾಚಾರಕ್ಕೆ ಬಾಂಗ್ಲಾದೇಶದಿಂದ ಬಂದ ವಲಸಿಗರೇ ಕಾರಣ ಎಂದು ಮಂಗಳವಾರ ಬಿಜೆಪಿ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ ಅವರು ಆರೋಪಿಸಿದರು.<br /> <br /> ಗಲಭೆ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು `ಈ ಬಿಕ್ಕಟ್ಟನ್ನು ಬಗೆಹರಿಸಲು ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ~ ಎಂದು ಹೇಳಿದರು.<br /> <br /> `ರಾಜ್ಯ ಹಾಗೂ ಕೇಂದ್ರ ಸರ್ಕಾರಗಳ ರಾಜಕೀಯ ತಂತ್ರದ ಪರಿಣಾಮ ಬಾಂಗ್ಲಾದೇಶದವರು ಅಕ್ರಮವಾಗಿ ವಲಸೆ ಬಂದು ದೊಡ್ಡ ಪ್ರಮಾಣದಲ್ಲಿ ಭೂಮಿ ಕಬಳಿಸಿರುವುದರಿಂದ, ಸ್ವಂತ ನೆಲದಲ್ಲೇ ಅಸ್ಸಾಂನ ಜನರಿಗೆ ಅಭದ್ರತೆಯ ಭಯ ಕಾಡುತ್ತಿದೆ~ ಎಂದು ಅಡ್ವಾಣಿ ತಿಳಿಸಿದರು.<br /> <br /> ಅಷ್ಟೇ ಅಲ್ಲದೇ ಸ್ವಂತ ನೆಲದಲ್ಲೇ ಬೋಡೊಗಳನ್ನು ಕೀಳಾಗಿ ಕಾಣುವಂತ ಪರಿಸ್ಥಿತಿ ಉದ್ಭವಿಸಿದ್ದು, ಇದರಿಂದ ಬೋಡೊಗಳು ಜನಾಂಗೀಯ ಸಮಸ್ಯೆಯನ್ನು ಕೂಡ ಎದುರಿಸುವಂತಾಗಿದೆ ಎಂದು ಹೇಳಿದರು. <br /> <br /> ಕಳೆದ ಒಂದು ವಾರದಿಂದ ಅಸ್ಸಾಂ ಬೋಡೊಗಳು ಹಾಗೂ ಬಾಂಗ್ಲಾದೇಶದಿಂದ ವಲಸೆ ಬಂದ ಬಂಗಾಳಿ ಭಾಷಿಕ ಮುಸ್ಲಿಮರ ನಡುವಿನ ಜನಾಂಗೀಯ ಕದನದಿಂದ ಹೊತ್ತಿ ಉರಿಯುತ್ತಿದೆ. ಬೋಡೊ ಬುಡಕಟ್ಟು ಜನಾಂಗದ ಪ್ರಾಬಲ್ಯವಿರುವ ಇಲ್ಲಿನ ನಾಲ್ಕು ಜಿಲ್ಲೆಗಳಲ್ಲಿ ಹಿಂಸೆ ಭುಗಿಲೆದ್ದಿದೆ. <br /> <br /> ಈ ಗಲಭೆ ಇವರೆಗೆ 56ಕ್ಕೂ ಹೆಚ್ಚು ಜೀವಗಳನ್ನು ಬಲಿ ತೆಗೆದುಕೊಂಡಿದೆ. 2 ಲಕ್ಷಕ್ಕೂ ಹೆಚ್ಚು ಜನ ಮನೆ, ಜಾನುವಾರುಗಳನ್ನು ತೊರೆದು ಓಡಿಹೋಗಿದ್ದಾರೆ. ಪುನರ್ವಸತಿ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>