<p><strong>ಗುವಾಹಟಿ (ಐಎಎನ್ಎಸ್) : </strong>ಅಸ್ಸಾಂನ ಬೋಡೋಲ್ಯಾಂಡ್ ಪ್ರಾಂತ್ಯದ ಜಿಲ್ಲೆಯಾದ ಕೊಕ್ರಝಾರ್ನಲ್ಲಿ ಶಂಕಿತ ಉಗ್ರರು ಕಳೆದ ಕೆಲ ದಿನಗಳಿಂದ ನಡೆಸುತ್ತಿದ್ದ ಹಿಂಸಾಚಾರ ತಣ್ಣಗಾಗಿದ್ದು, ಜಿಲ್ಲೆಯಲ್ಲಿ ಹೇರಿದ್ದ ಅನಿರ್ಧಿಷ್ಟಾವಧಿ ನಿಷೇಧಾಜ್ಞೆಯನ್ನು ಭಾನುವಾರ ಆರು ಗಂಟೆಗಳ ಕಾಲ ಸಡಿಲಗೊಳಿಸಲಾಗಿದೆ.<br /> <br /> ಕೊಕ್ರಝಾರ್ನ 5 ಗ್ರಾಮಗಳು ಮತ್ತು ಗೊಸಾಯಿಗಾನ್ ಜಿಲ್ಲೆಯ ನಾಲ್ಕು ಗ್ರಾಮಗಳನ್ನು ಹೊರತುಪಡಿಸಿ ಉಳಿದೆಡೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರಗೆ ನಿಷೇಧಾಜ್ಞೆಯನ್ನು ಸಡಿಲಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> ಕೊಕ್ರಝಾರ್ ಜಿಲ್ಲೆಯಲ್ಲಿ ಸೇನಾ ತುಕಡಿಗಳು ಪಥಸಂಚಲನ ಮುಂದುವರಿದಿದ್ದು, ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಕೇಂದ್ರ ಪ್ಯಾರಾ ಮಿಲಿಟರಿ ಪಡೆಯ 65 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.<br /> <br /> ನವೆಂಬರ್ 10ರಿಂದ ಮರುಕಳಿಸಿದ ಹಿಂಸಾಚಾರದಿಂದ ಒಟ್ಟು 11 ಮಂದಿ ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ 65ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗುವಾಹಟಿ (ಐಎಎನ್ಎಸ್) : </strong>ಅಸ್ಸಾಂನ ಬೋಡೋಲ್ಯಾಂಡ್ ಪ್ರಾಂತ್ಯದ ಜಿಲ್ಲೆಯಾದ ಕೊಕ್ರಝಾರ್ನಲ್ಲಿ ಶಂಕಿತ ಉಗ್ರರು ಕಳೆದ ಕೆಲ ದಿನಗಳಿಂದ ನಡೆಸುತ್ತಿದ್ದ ಹಿಂಸಾಚಾರ ತಣ್ಣಗಾಗಿದ್ದು, ಜಿಲ್ಲೆಯಲ್ಲಿ ಹೇರಿದ್ದ ಅನಿರ್ಧಿಷ್ಟಾವಧಿ ನಿಷೇಧಾಜ್ಞೆಯನ್ನು ಭಾನುವಾರ ಆರು ಗಂಟೆಗಳ ಕಾಲ ಸಡಿಲಗೊಳಿಸಲಾಗಿದೆ.<br /> <br /> ಕೊಕ್ರಝಾರ್ನ 5 ಗ್ರಾಮಗಳು ಮತ್ತು ಗೊಸಾಯಿಗಾನ್ ಜಿಲ್ಲೆಯ ನಾಲ್ಕು ಗ್ರಾಮಗಳನ್ನು ಹೊರತುಪಡಿಸಿ ಉಳಿದೆಡೆ ಬೆಳಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರಗೆ ನಿಷೇಧಾಜ್ಞೆಯನ್ನು ಸಡಿಲಗೊಳಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.<br /> <br /> ಕೊಕ್ರಝಾರ್ ಜಿಲ್ಲೆಯಲ್ಲಿ ಸೇನಾ ತುಕಡಿಗಳು ಪಥಸಂಚಲನ ಮುಂದುವರಿದಿದ್ದು, ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲು ಕೇಂದ್ರ ಪ್ಯಾರಾ ಮಿಲಿಟರಿ ಪಡೆಯ 65 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.<br /> <br /> ನವೆಂಬರ್ 10ರಿಂದ ಮರುಕಳಿಸಿದ ಹಿಂಸಾಚಾರದಿಂದ ಒಟ್ಟು 11 ಮಂದಿ ಮೃತಪಟ್ಟಿದ್ದು, ಘಟನೆಗೆ ಸಂಬಂಧಿಸಿದಂತೆ 65ಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>