<p><strong>ನವದೆಹಲಿ (ಪಿಟಿಐ): </strong>ಅಸ್ಸಾಂ ಹಿಂಸಾಚಾರ ಹಾಗೂ ಅದಕ್ಕೆ ಸಂಬಂಧಿಸಿ ಮುಂಬೈನಲ್ಲಿ ನಡೆದ ಗಲಭೆ ಪ್ರಕರಣ ಸೋಮವಾರ ಲೋಕಸಭೆಯ ಕಲಾಪದಲ್ಲಿ ಪ್ರತಿಧ್ವನಿಸಿತು. <br /> <br /> ಘಟನೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸುವಂತೆ ಶಿವಸೇನಾ ಹಾಗೂ ಬಿಜೆಪಿ ಸದಸ್ಯರು ಸರ್ಕಾರವನ್ನು ಒತ್ತಾಯಿಸಿ ಸಭಾಧ್ಯಕ್ಷರ ಪೀಠದ ಎದುರು ಪ್ರತಿಭಟನೆ ನಡೆಸಿದರು. ಸದಸ್ಯರ ಗದ್ದಲದಿಂದಾಗಿ ಸ್ಪೀಕರ್ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು.<br /> <br /> ಶೂನ್ಯವೇಳೆಯಲ್ಲಿ ಈ ವಿಚಾರ ಚರ್ಚೆಗೆ ಬಂದಿತು. ಶಿವಸೇನಾ ಸಂಸದರು ಘಟನೆ ಕುರಿತು ಪಕ್ಷದ ಮುಖವಾಣಿ `ಸಾಮ್ನಾ~ದಲ್ಲಿ ಪ್ರಕಟವಾಗಿರುವ ವರದಿಯ ಪ್ರತಿಗಳನ್ನು ಸದನದಲ್ಲಿ ತೂರಿದರು. `ಇದು ಧರ್ಮಾಂಧ ಜಿಹಾದಿ~ಗಳ ಕೃತ್ಯ. ಘಟನೆಯನ್ನು ನಿಯಂತ್ರಿಸುವಲ್ಲಿ ಮಹಾರಾಷ್ಟ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.</p>.<p><br /> ಆಡಳಿತಪಕ್ಷ ಮತ್ತು ವಿರೋಧ ಪಕ್ಷದವರ ನಡುವೆ ವಾಕ್ಸಮರ ಏರ್ಪಟ್ಟಿತು. ಸಭಾಧ್ಯಕ್ಷೆ ಮೀರಾಕುಮಾರಿ ಅವರು ಸದನ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು. ಕಲಾಪ ಮತ್ತೆ ಆರಂಭವಾದ ನಂತರ ಶಿವಸೇನಾ ಸಂಸದರು ಗುಂಪು ಗುಂಪಾಗಿ ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸರ್ಕಾರದ ವಜಾಕ್ಕೆ ಆಗ್ರಹಿಸಿದರು. ಬಿಜೆಪಿ ಸಂಸದರು ಪ್ರತಿಭಟನೆಗೆ ಜೊತೆಯಾದರು. <br /> <br /> ಆಗ ಉಪ ಸಭಾಧ್ಯಕ್ಷ ಕರಿಯಾ ಮುಂಡಾ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು. ಪ್ರತಿಭಟನೆಗೂ ಮುನ್ನ, ಶಿವಸೇನಾ ನಾಯಕ ಅನಂತ್ ಗೀತೆ, `ಪ್ರತಿಭಟನಾ ಮೆರವಣಿಗೆ ನಡೆಸಲು ರಾಜ್ಯ ಸರ್ಕಾರ ರಜಾ ಅಕಾಡೆಮಿ ಮತ್ತು ಅವಾಮಿ ವಿಕಾಸ್ ಪಾರ್ಟಿ ಅನುಮತಿ ಕೊಟ್ಟಿದ್ದೇಕೆ~ ಎಂದು ಪ್ರಶ್ನಿಸಿದರು. ಇದಕ್ಕೆ ದನಿಗೂಡಿಸಿದ ಶಿವಸೇನಾ ಸಂಸದರು, `ಪ್ರಧಾನಿಯವರು ಈ ಪ್ರಶ್ನೆಗೆ ಉತ್ತರಿಸಬೇಕೆಂದು~ ಪಟ್ಟು ಹಿಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ (ಪಿಟಿಐ): </strong>ಅಸ್ಸಾಂ ಹಿಂಸಾಚಾರ ಹಾಗೂ ಅದಕ್ಕೆ ಸಂಬಂಧಿಸಿ ಮುಂಬೈನಲ್ಲಿ ನಡೆದ ಗಲಭೆ ಪ್ರಕರಣ ಸೋಮವಾರ ಲೋಕಸಭೆಯ ಕಲಾಪದಲ್ಲಿ ಪ್ರತಿಧ್ವನಿಸಿತು. <br /> <br /> ಘಟನೆಯನ್ನು ನಿಯಂತ್ರಿಸುವಲ್ಲಿ ವಿಫಲವಾಗಿರುವ ಮಹಾರಾಷ್ಟ್ರ ಸರ್ಕಾರವನ್ನು ವಜಾಗೊಳಿಸುವಂತೆ ಶಿವಸೇನಾ ಹಾಗೂ ಬಿಜೆಪಿ ಸದಸ್ಯರು ಸರ್ಕಾರವನ್ನು ಒತ್ತಾಯಿಸಿ ಸಭಾಧ್ಯಕ್ಷರ ಪೀಠದ ಎದುರು ಪ್ರತಿಭಟನೆ ನಡೆಸಿದರು. ಸದಸ್ಯರ ಗದ್ದಲದಿಂದಾಗಿ ಸ್ಪೀಕರ್ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು.<br /> <br /> ಶೂನ್ಯವೇಳೆಯಲ್ಲಿ ಈ ವಿಚಾರ ಚರ್ಚೆಗೆ ಬಂದಿತು. ಶಿವಸೇನಾ ಸಂಸದರು ಘಟನೆ ಕುರಿತು ಪಕ್ಷದ ಮುಖವಾಣಿ `ಸಾಮ್ನಾ~ದಲ್ಲಿ ಪ್ರಕಟವಾಗಿರುವ ವರದಿಯ ಪ್ರತಿಗಳನ್ನು ಸದನದಲ್ಲಿ ತೂರಿದರು. `ಇದು ಧರ್ಮಾಂಧ ಜಿಹಾದಿ~ಗಳ ಕೃತ್ಯ. ಘಟನೆಯನ್ನು ನಿಯಂತ್ರಿಸುವಲ್ಲಿ ಮಹಾರಾಷ್ಟ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದರು.</p>.<p><br /> ಆಡಳಿತಪಕ್ಷ ಮತ್ತು ವಿರೋಧ ಪಕ್ಷದವರ ನಡುವೆ ವಾಕ್ಸಮರ ಏರ್ಪಟ್ಟಿತು. ಸಭಾಧ್ಯಕ್ಷೆ ಮೀರಾಕುಮಾರಿ ಅವರು ಸದನ ಕಲಾಪವನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದೂಡಿದರು. ಕಲಾಪ ಮತ್ತೆ ಆರಂಭವಾದ ನಂತರ ಶಿವಸೇನಾ ಸಂಸದರು ಗುಂಪು ಗುಂಪಾಗಿ ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಸರ್ಕಾರದ ವಜಾಕ್ಕೆ ಆಗ್ರಹಿಸಿದರು. ಬಿಜೆಪಿ ಸಂಸದರು ಪ್ರತಿಭಟನೆಗೆ ಜೊತೆಯಾದರು. <br /> <br /> ಆಗ ಉಪ ಸಭಾಧ್ಯಕ್ಷ ಕರಿಯಾ ಮುಂಡಾ ಕಲಾಪವನ್ನು ಮಂಗಳವಾರಕ್ಕೆ ಮುಂದೂಡಿದರು. ಪ್ರತಿಭಟನೆಗೂ ಮುನ್ನ, ಶಿವಸೇನಾ ನಾಯಕ ಅನಂತ್ ಗೀತೆ, `ಪ್ರತಿಭಟನಾ ಮೆರವಣಿಗೆ ನಡೆಸಲು ರಾಜ್ಯ ಸರ್ಕಾರ ರಜಾ ಅಕಾಡೆಮಿ ಮತ್ತು ಅವಾಮಿ ವಿಕಾಸ್ ಪಾರ್ಟಿ ಅನುಮತಿ ಕೊಟ್ಟಿದ್ದೇಕೆ~ ಎಂದು ಪ್ರಶ್ನಿಸಿದರು. ಇದಕ್ಕೆ ದನಿಗೂಡಿಸಿದ ಶಿವಸೇನಾ ಸಂಸದರು, `ಪ್ರಧಾನಿಯವರು ಈ ಪ್ರಶ್ನೆಗೆ ಉತ್ತರಿಸಬೇಕೆಂದು~ ಪಟ್ಟು ಹಿಡಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>