<p>ಬಾಗೇಪಲ್ಲಿ: ಸ್ವಾರ್ಥ ಹಾಗೂ ಅಹಂಕಾರದ ನಡುವೆ ದೇವ ನಾಮಸ್ಮರಣೆ ಕಡಿಮೆಯಾಗಿದೆ ಎಂದು ಕೈವಾರ ಕ್ಷೇತ್ರ ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಂ ವಿಷಾದ ವ್ಯಕ್ತಪಡಿಸಿದರು. <br /> <br /> ಪಟ್ಟಣದ ಹೊರವಲಯದ ಐತಿಹಾಸಿಕ ಗಡಿದಂ ಬೆಟ್ಟದ ಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಯೋಗಿನಾರೇಯಣ ತಾತಯ್ಯರವರ ದೇವಸ್ಥಾನ ಪೂಜೆ ಭೂಮಿ ಸಮಾರಂಭದಲ್ಲಿ ಯೋಗಿವರ್ಯರಿಗೆ ವಿಶೇಷ ಪೂಜೆ ಸಮರ್ಪಿಸಿ ಮಾತನಾಡಿದರು.<br /> <br /> ಇದೇ ವೇಳೆ ಭೂಮಿ ಪೂಜೆ ಅಂಗವಾಗಿ ವಿಶೇಷ ಅಭಿಷೇಕ, ರಾಜೋಪಚಾರ, ಶೋಡಶೋಪಚಾರ, ಅಷ್ಟಾವಧಾನ ಸೇವೆ, ವಿವಿಧ ಫಲ ಪುಷ್ಪಗಳಿಂದ ಪುನುಗು, ಜವ್ವಾಜಿ, ಕೇಸರಿ, ಗೋರೋಜನ ಛತ್ರ ಚಮರಾದಿ ಬಿರುದು ಬಾವಲಿ ಗಳೊಂದಿಗೆ ಯೋಗಿವರ್ಯ ರಿಗೆ ಸಮರ್ಪಿಸಿದರು. <br /> <br /> ಕ್ಷೇತ್ರದ ಸಂಯೋಜಕ ವಾನರಾಸಿ ಬಾಲಕೃಷ್ಣ ಭಾಗವತರ್ ಸಂಕೀರ್ತನೆ ಪ್ರಸ್ತುತ ಪಡಿಸಿದರು.<br /> ತಾತಯ್ಯ ಅವರ ಭಕ್ತಾಧಿಗಳಿಂದ ಭಜನೆ ಹಾಗೂ ಅಷ್ಟಾಕ್ಷರಿ ಮಂತ್ರ ನಡೆಸಿದರು. ಯೋಗಿನಾರೇಯಣ ತಾತಯ್ಯ ಅವರ ದೇಗುಲ ನಿರ್ಮಿಸಲು ಭೂಮಿ ನೀಡಿದ ಶಾರದಮ್ಮ ಹಾಗೂ ಜಯ ರಾಮಪ್ಪ ಅವರನ್ನು ಅಭಿನಂದಿಸಲಾಯಿತು.ವಿಶ್ವಸ್ಥ ಮಂಡಲಿ ಸದಸ್ಯ ಕೆ.ನರಸಿಂಹಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಬಾಗೇಪಲ್ಲಿ: ಸ್ವಾರ್ಥ ಹಾಗೂ ಅಹಂಕಾರದ ನಡುವೆ ದೇವ ನಾಮಸ್ಮರಣೆ ಕಡಿಮೆಯಾಗಿದೆ ಎಂದು ಕೈವಾರ ಕ್ಷೇತ್ರ ಧರ್ಮಾಧಿಕಾರಿ ಡಾ.ಎಂ.ಆರ್.ಜಯರಾಂ ವಿಷಾದ ವ್ಯಕ್ತಪಡಿಸಿದರು. <br /> <br /> ಪಟ್ಟಣದ ಹೊರವಲಯದ ಐತಿಹಾಸಿಕ ಗಡಿದಂ ಬೆಟ್ಟದ ಕ್ಷೇತ್ರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಯೋಗಿನಾರೇಯಣ ತಾತಯ್ಯರವರ ದೇವಸ್ಥಾನ ಪೂಜೆ ಭೂಮಿ ಸಮಾರಂಭದಲ್ಲಿ ಯೋಗಿವರ್ಯರಿಗೆ ವಿಶೇಷ ಪೂಜೆ ಸಮರ್ಪಿಸಿ ಮಾತನಾಡಿದರು.<br /> <br /> ಇದೇ ವೇಳೆ ಭೂಮಿ ಪೂಜೆ ಅಂಗವಾಗಿ ವಿಶೇಷ ಅಭಿಷೇಕ, ರಾಜೋಪಚಾರ, ಶೋಡಶೋಪಚಾರ, ಅಷ್ಟಾವಧಾನ ಸೇವೆ, ವಿವಿಧ ಫಲ ಪುಷ್ಪಗಳಿಂದ ಪುನುಗು, ಜವ್ವಾಜಿ, ಕೇಸರಿ, ಗೋರೋಜನ ಛತ್ರ ಚಮರಾದಿ ಬಿರುದು ಬಾವಲಿ ಗಳೊಂದಿಗೆ ಯೋಗಿವರ್ಯ ರಿಗೆ ಸಮರ್ಪಿಸಿದರು. <br /> <br /> ಕ್ಷೇತ್ರದ ಸಂಯೋಜಕ ವಾನರಾಸಿ ಬಾಲಕೃಷ್ಣ ಭಾಗವತರ್ ಸಂಕೀರ್ತನೆ ಪ್ರಸ್ತುತ ಪಡಿಸಿದರು.<br /> ತಾತಯ್ಯ ಅವರ ಭಕ್ತಾಧಿಗಳಿಂದ ಭಜನೆ ಹಾಗೂ ಅಷ್ಟಾಕ್ಷರಿ ಮಂತ್ರ ನಡೆಸಿದರು. ಯೋಗಿನಾರೇಯಣ ತಾತಯ್ಯ ಅವರ ದೇಗುಲ ನಿರ್ಮಿಸಲು ಭೂಮಿ ನೀಡಿದ ಶಾರದಮ್ಮ ಹಾಗೂ ಜಯ ರಾಮಪ್ಪ ಅವರನ್ನು ಅಭಿನಂದಿಸಲಾಯಿತು.ವಿಶ್ವಸ್ಥ ಮಂಡಲಿ ಸದಸ್ಯ ಕೆ.ನರಸಿಂಹಪ್ಪ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>