<p><strong>ಯಲಹಂಕ:</strong> ಡಾ.ಬಿ.ಆರ್.ಅಂಬೇಡ್ಕರ್ರವರ 121ನೇ ಜನ್ಮದಿನಾಚರಣೆ ಹಾಗೂ ಬಾಬು ಜಗಜೀವನ್ರಾಂ ಅವರ 105ನೇ ಜನ್ಮದಿನಾಚರಣೆ ಅಂಗವಾಗಿ ದಲಿತ ಸಂಘರ್ಷ ಸಮಿತಿ (ಸಮತಾವಾದ) ರಾಜ್ಯ ಸಮಿತಿಯ ವತಿಯಿಂದ ಶನಿವಾರ ಯಲಹಂಕದ ತಹಶೀಲ್ದಾರ್ ಕಚೇರಿಯಿಂದ ದೇವನಹಳ್ಳಿಯವರೆಗೆ ಬೈಕ್ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.<br /> <br /> ಬೈಕ್ರ್ಯಾಲಿಗೆ ಚಾಲನೆ ನೀಡಿದ ಸಮಿತಿಯ ರಾಜ್ಯ ಘಟಕದ ಉಪ ಪ್ರಧಾನ ಸಂಚಾಲಕ ಎಚ್.ಮಾರಪ್ಪ, `ಬಾಬಾಸಾಹೇಬ್ ಅಂಬೇಡ್ಕರ್ರವರ ಚಿಂತನೆ, ವಿಚಾರಧಾರೆಗಳು, ದಲಿತ ಮತ್ತು ಹಿಂದುಳಿದ ವರ್ಗದ ಜನರ ಅಭಿವೃದ್ಧಿಗಾಗಿ ನಡೆಸಿದ ಹೋರಾಟಗಳ ಬಗ್ಗೆ ಇಂದಿನ ಯುವಪೀಳಿಗೆಗೆ ಅರಿವು ಮೂಡಿಸುವ ಉದ್ದೇಶದಿಂದ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ~ ಎಂದರು.<br /> <br /> ಗ್ರಾಮೀಣ ಭಾಗಗಳಲ್ಲಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರಿಗಾಗಿ ಮದುವೆ ಇನ್ನಿತರ ಶುಭಕಾರ್ಯಗಳನ್ನು ನಡೆಸಲು ಅನುಕೂಲವಾಗುವಂತೆ ಸಮುದಾಯ ಭವನಗಳನ್ನು ನಿರ್ಮಿಸಿಬೇಕು. ದಲಿತ ಕಾಲೋನಿಗಳಲ್ಲಿ ಸಾಮೂಹಿಕ ಶೌಚಾಲಯದ ಬದಲು ಪ್ರತ್ಯೇಕ ಶೌಚಾಲಯ ನಿರ್ಮಿಸಲು ಕ್ರಮ ಕೈಗೊಳ್ಳಬೇಕು~ ಎಂದು ಅವರು ಒತ್ತಾಯಿಸಿದರು.<br /> <br /> ರ್ಯಾಲಿಯಲ್ಲಿ ಸಮಿತಿಯ ಬೆಂಗಳೂರು ನಗರ ಜಿಲ್ಲಾ ಪ್ರಧಾನ ಸಂಚಾಲಕ ಮುನಿಭೈರಪ್ಪ, ಉಪ ಪ್ರಧಾನ ಸಂಚಾಲಕ ಡಿ.ಚಂದ್ರಪ್ಪ, ಬೆಂಗಳೂರು ಉತ್ತರ ತಾಲ್ಲೂಕು ಪ್ರಧಾನ ಸಂಚಾಲಕ ಡಿ.ವಿ.ವೀರಭದ್ರೇಗೌಡ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಯಲಹಂಕ:</strong> ಡಾ.ಬಿ.ಆರ್.ಅಂಬೇಡ್ಕರ್ರವರ 121ನೇ ಜನ್ಮದಿನಾಚರಣೆ ಹಾಗೂ ಬಾಬು ಜಗಜೀವನ್ರಾಂ ಅವರ 105ನೇ ಜನ್ಮದಿನಾಚರಣೆ ಅಂಗವಾಗಿ ದಲಿತ ಸಂಘರ್ಷ ಸಮಿತಿ (ಸಮತಾವಾದ) ರಾಜ್ಯ ಸಮಿತಿಯ ವತಿಯಿಂದ ಶನಿವಾರ ಯಲಹಂಕದ ತಹಶೀಲ್ದಾರ್ ಕಚೇರಿಯಿಂದ ದೇವನಹಳ್ಳಿಯವರೆಗೆ ಬೈಕ್ರ್ಯಾಲಿ ಹಮ್ಮಿಕೊಳ್ಳಲಾಗಿತ್ತು.<br /> <br /> ಬೈಕ್ರ್ಯಾಲಿಗೆ ಚಾಲನೆ ನೀಡಿದ ಸಮಿತಿಯ ರಾಜ್ಯ ಘಟಕದ ಉಪ ಪ್ರಧಾನ ಸಂಚಾಲಕ ಎಚ್.ಮಾರಪ್ಪ, `ಬಾಬಾಸಾಹೇಬ್ ಅಂಬೇಡ್ಕರ್ರವರ ಚಿಂತನೆ, ವಿಚಾರಧಾರೆಗಳು, ದಲಿತ ಮತ್ತು ಹಿಂದುಳಿದ ವರ್ಗದ ಜನರ ಅಭಿವೃದ್ಧಿಗಾಗಿ ನಡೆಸಿದ ಹೋರಾಟಗಳ ಬಗ್ಗೆ ಇಂದಿನ ಯುವಪೀಳಿಗೆಗೆ ಅರಿವು ಮೂಡಿಸುವ ಉದ್ದೇಶದಿಂದ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ~ ಎಂದರು.<br /> <br /> ಗ್ರಾಮೀಣ ಭಾಗಗಳಲ್ಲಿ ದಲಿತ, ಹಿಂದುಳಿದ ಮತ್ತು ಅಲ್ಪಸಂಖ್ಯಾತರಿಗಾಗಿ ಮದುವೆ ಇನ್ನಿತರ ಶುಭಕಾರ್ಯಗಳನ್ನು ನಡೆಸಲು ಅನುಕೂಲವಾಗುವಂತೆ ಸಮುದಾಯ ಭವನಗಳನ್ನು ನಿರ್ಮಿಸಿಬೇಕು. ದಲಿತ ಕಾಲೋನಿಗಳಲ್ಲಿ ಸಾಮೂಹಿಕ ಶೌಚಾಲಯದ ಬದಲು ಪ್ರತ್ಯೇಕ ಶೌಚಾಲಯ ನಿರ್ಮಿಸಲು ಕ್ರಮ ಕೈಗೊಳ್ಳಬೇಕು~ ಎಂದು ಅವರು ಒತ್ತಾಯಿಸಿದರು.<br /> <br /> ರ್ಯಾಲಿಯಲ್ಲಿ ಸಮಿತಿಯ ಬೆಂಗಳೂರು ನಗರ ಜಿಲ್ಲಾ ಪ್ರಧಾನ ಸಂಚಾಲಕ ಮುನಿಭೈರಪ್ಪ, ಉಪ ಪ್ರಧಾನ ಸಂಚಾಲಕ ಡಿ.ಚಂದ್ರಪ್ಪ, ಬೆಂಗಳೂರು ಉತ್ತರ ತಾಲ್ಲೂಕು ಪ್ರಧಾನ ಸಂಚಾಲಕ ಡಿ.ವಿ.ವೀರಭದ್ರೇಗೌಡ ಮತ್ತಿತರರು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>