<p>ಧರ್ಮಪುರ: ಆಂಗ್ಲ ಮಾಧ್ಯಮ ಶಿಕ್ಷಣ ಜಾರಿಗೊಳಿಸವ ಮೂಲಕ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದು, ಶಿಕ್ಷಕರು ಗುಣಾತ್ಮಕ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಗೀತಾ ಕರೆ ನೀಡಿದರು.<br /> <br /> ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಧರ್ಮಪುರ, ಹರಿಯಬ್ಬೆ, ಖಂಡೇನಹಳ್ಳಿ ಮತ್ತು ಅಬ್ಬಿನಹೊಳೆ ಕ್ಲಸ್ಟರ್ ವತಿಯಿಂದ ಹಮ್ಮಿಕೊಂಡಿದ್ದ ` ಕ್ಲಸ್ಟರ್ ಸಮಲೋಚನಾ ಸಭೆ~ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕ್ಲಸ್ಟರ್ ಮಟ್ಟದ `ಸಮೂಹ ಸಿಂಚನ~ ಮಾಸಿಕ ಸಂಚಿಕೆಯನ್ನು ಬಿಡುಗಡೆ ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ರಾಮಯ್ಯ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ತೊಂದರೆಯಿಂದ ಶಿಕ್ಷಣ ಮುಂದುವರಿಸಲು ಸಾಧ್ಯವಾಗದಂತಹ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಬೇಕು. ಅಂತಹ ವಿದ್ಯಾರ್ಥಿಗಳನ್ನು ಕಸ್ತೂರ ಬಾ ಶಾಲೆಗೆ ಸೇರಿಸಿ ಅಲ್ಲಿ ಅವರಿಗೆ ಉಚಿತವಾದ ಶೈಕ್ಷಣಿಕ ಕೊಡಸಬೇಕು.<br /> <br /> `ಕಡ್ಡಾಯ ಶಿಕ್ಷಣದ ಅಡಿಯಲ್ಲಿ ಗುಣಾತ್ಮಕ ಶಿಕ್ಷಣ~ ತತ್ವಕ್ಕೆ ಅನುಗುಣವಾಗಿ ಪ್ರತಿಯೊಬ್ಬ ಶಿಕ್ಷಕರು ತಮ್ಮ ಕರ್ತವ್ಯಪ್ರಜ್ಞೆಯನ್ನು ಅರಿತು ಕೆಲಸ ನಿರ್ವಹಿಸಬೇಕು ಎಂದರು.<br /> <br /> ಸನ್ಮಾನ ಸ್ವೀಕರಿಸಿದ ಕಾರವಾರ ಜಿಲ್ಲಾ ಉಪ ನಿರ್ದೇಶಕ ರೇವಣಸಿದ್ದಪ್ಪ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವ ಮೂಲಕ ಆತ್ಮ ಗೌರವ ಹೆಚ್ಚಿಸಿಕೊಳ್ಳಿ ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.<br /> <br /> ಶಿಕ್ಷಕರ ಸಂಘದ ಅಧ್ಯಕ್ಷ ಏಕಾಂತಪ್ಪ, ಕಾರ್ಯದರ್ಶಿ ರಮೇಶ್ನಾಯ್ಕ, ಮೂರ್ತಿ, ಸಹಾಯಕ ನಿರ್ದೇಶಕ ಚಿನ್ನರಾಜು, ತಿಪ್ಪೇಸ್ವಾಮಿ, ಶಿಕ್ಷಣ ಸಂಯೋಜಕ ಸತೀಶ್, ಸುನಂದಮ್ಮ ಮಾತನಾಡಿದರು.<br /> <br /> ಗುರುಮೂರ್ತಿ, ಶಿವಕುಮಾರ್, ಸಿಆರ್ಪಿ ನಾಗರಾಜು, ಚನ್ನಕೇಶವಗೌಡ, ಮುಖ್ಯ ಶಿಕ್ಷಕ ಹನುಮಂತರಾಯ, ಮಂಜುನಾಥ್, ರಂಗನಾಥ್ ಉಪಸ್ಥಿತರಿದ್ದರು. ಸಣ್ಣಗಂಗಮ್ಮ ಪ್ರಾರ್ಥಿಸಿದರು. ಗುರುಸ್ವಾಮಿ ಸ್ವಾಗತಿಸಿದರು. ಓ. ರಂಗನಾಥ್ ಕಾರ್ಯಕ್ರಮ ನಿರೂಪಿಸಿದರು. ಲಕ್ಕಪ್ಪ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಧರ್ಮಪುರ: ಆಂಗ್ಲ ಮಾಧ್ಯಮ ಶಿಕ್ಷಣ ಜಾರಿಗೊಳಿಸವ ಮೂಲಕ ಸರ್ಕಾರ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಿದ್ದು, ಶಿಕ್ಷಕರು ಗುಣಾತ್ಮಕ ಶಿಕ್ಷಣ ನೀಡಲು ಮುಂದಾಗಬೇಕು ಎಂದು ಕ್ಷೇತ್ರ ಸಮನ್ವಯ ಅಧಿಕಾರಿ ಗೀತಾ ಕರೆ ನೀಡಿದರು.<br /> <br /> ಇಲ್ಲಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಶನಿವಾರ ಧರ್ಮಪುರ, ಹರಿಯಬ್ಬೆ, ಖಂಡೇನಹಳ್ಳಿ ಮತ್ತು ಅಬ್ಬಿನಹೊಳೆ ಕ್ಲಸ್ಟರ್ ವತಿಯಿಂದ ಹಮ್ಮಿಕೊಂಡಿದ್ದ ` ಕ್ಲಸ್ಟರ್ ಸಮಲೋಚನಾ ಸಭೆ~ ಉದ್ಘಾಟಿಸಿ ಅವರು ಮಾತನಾಡಿದರು.<br /> <br /> ಕ್ಲಸ್ಟರ್ ಮಟ್ಟದ `ಸಮೂಹ ಸಿಂಚನ~ ಮಾಸಿಕ ಸಂಚಿಕೆಯನ್ನು ಬಿಡುಗಡೆ ಮಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಪಿ. ರಾಮಯ್ಯ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕ ತೊಂದರೆಯಿಂದ ಶಿಕ್ಷಣ ಮುಂದುವರಿಸಲು ಸಾಧ್ಯವಾಗದಂತಹ ವಿದ್ಯಾರ್ಥಿಗಳನ್ನು ಶಿಕ್ಷಕರು ಗುರುತಿಸಬೇಕು. ಅಂತಹ ವಿದ್ಯಾರ್ಥಿಗಳನ್ನು ಕಸ್ತೂರ ಬಾ ಶಾಲೆಗೆ ಸೇರಿಸಿ ಅಲ್ಲಿ ಅವರಿಗೆ ಉಚಿತವಾದ ಶೈಕ್ಷಣಿಕ ಕೊಡಸಬೇಕು.<br /> <br /> `ಕಡ್ಡಾಯ ಶಿಕ್ಷಣದ ಅಡಿಯಲ್ಲಿ ಗುಣಾತ್ಮಕ ಶಿಕ್ಷಣ~ ತತ್ವಕ್ಕೆ ಅನುಗುಣವಾಗಿ ಪ್ರತಿಯೊಬ್ಬ ಶಿಕ್ಷಕರು ತಮ್ಮ ಕರ್ತವ್ಯಪ್ರಜ್ಞೆಯನ್ನು ಅರಿತು ಕೆಲಸ ನಿರ್ವಹಿಸಬೇಕು ಎಂದರು.<br /> <br /> ಸನ್ಮಾನ ಸ್ವೀಕರಿಸಿದ ಕಾರವಾರ ಜಿಲ್ಲಾ ಉಪ ನಿರ್ದೇಶಕ ರೇವಣಸಿದ್ದಪ್ಪ ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿ ಸೇವೆ ಸಲ್ಲಿಸುವ ಮೂಲಕ ಆತ್ಮ ಗೌರವ ಹೆಚ್ಚಿಸಿಕೊಳ್ಳಿ ಎಂದು ಶಿಕ್ಷಕರಿಗೆ ಕಿವಿಮಾತು ಹೇಳಿದರು.<br /> <br /> ಶಿಕ್ಷಕರ ಸಂಘದ ಅಧ್ಯಕ್ಷ ಏಕಾಂತಪ್ಪ, ಕಾರ್ಯದರ್ಶಿ ರಮೇಶ್ನಾಯ್ಕ, ಮೂರ್ತಿ, ಸಹಾಯಕ ನಿರ್ದೇಶಕ ಚಿನ್ನರಾಜು, ತಿಪ್ಪೇಸ್ವಾಮಿ, ಶಿಕ್ಷಣ ಸಂಯೋಜಕ ಸತೀಶ್, ಸುನಂದಮ್ಮ ಮಾತನಾಡಿದರು.<br /> <br /> ಗುರುಮೂರ್ತಿ, ಶಿವಕುಮಾರ್, ಸಿಆರ್ಪಿ ನಾಗರಾಜು, ಚನ್ನಕೇಶವಗೌಡ, ಮುಖ್ಯ ಶಿಕ್ಷಕ ಹನುಮಂತರಾಯ, ಮಂಜುನಾಥ್, ರಂಗನಾಥ್ ಉಪಸ್ಥಿತರಿದ್ದರು. ಸಣ್ಣಗಂಗಮ್ಮ ಪ್ರಾರ್ಥಿಸಿದರು. ಗುರುಸ್ವಾಮಿ ಸ್ವಾಗತಿಸಿದರು. ಓ. ರಂಗನಾಥ್ ಕಾರ್ಯಕ್ರಮ ನಿರೂಪಿಸಿದರು. ಲಕ್ಕಪ್ಪ ವಂದಿಸಿದರು.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>