<p>ನಮ್ಮ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡರು (ಡಿವಿಎಸ್) ತಮ್ಮಿಂದ ತಪ್ಪುಗಳಾದಾಗ ಎಚ್ಚರಿಸಿ ಎಂದು ಭಾಷಣಗಳಲ್ಲಿ ಹೇಳುತ್ತಿರುವುದರಿಂದ ನಾನೀಗ ಆ ಕೆಲಸವನ್ನು ಮಾಡುತ್ತಿದ್ದೆೀನೆ. ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮದ ಶಾಲೆಯ ಬೆಳ್ಳಿಹಬ್ಬದಲ್ಲಿ ದೀಪ ಬೆಳಗಿಸಿದ ಅವರು ಮುಖ್ಯಮಂತ್ರಿ ಆಗಿರುವಷ್ಟು ಕಾಲ ತನ್ನ ತಿಂಗಳ ಸಂಬಳವನ್ನು ಆ ಶಾಲೆಗೆ ನೀಡುವುದಾಗಿ ಘೋಷಿಸಿದರು. ಜನರೆಲ್ಲಾ ಚಪ್ಪಾಳೆ ತಟ್ಟಿದರು. ಎಲ್ಲರಿಗೂ ಖುಷಿಯಾಯಿತು. ಆದರೆ ಇದು ಸರಿಯೇ ಎಂಬುದೀಗ ಪ್ರಶ್ನೆ.<br /> <br /> ಮುಖ್ಯಮಂತ್ರಿಗಳ ಸಂಬಳ ಎಷ್ಟೆಂದು ನನಗೆ ಗೊತ್ತಿಲ್ಲ. ಅದು ಎಷ್ಟೇ ಇರಲಿ, ಒಂದೇ ರೂಪಾಯಿ ಆಗಿರಲಿ. ಆದರೆ ಅವರಿಂದ ದೇಣಿಗೆ ಪಡೆಯುವುದೆಂದರೆ ಅದಕ್ಕೆ ಬೇರೆಯೇ ಗೌರವ ಇದೆ. ಇದೀಗ ಆ ಗೌರವವು ಒಂದು ಆಂಗ್ಲಮಾಧ್ಯಮ ಶಾಲೆಗೆ ಹೋಯಿತಲ್ಲಾ! <br /> <br /> ಇದು ಸರಿಯೇ? ಅದರ ಬದಲು ಅವರು ಅದೇ ವೇದಿಕೆಯಿಂದ ಅದೇ ಸಂಸ್ಥೆ ನಡೆಸುತ್ತಿರುವ `ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ~ ಕೊಡುತ್ತೇನೆಂದಿದ್ದರೆ ಕನ್ನಡಿಗರೆಲ್ಲ ಆನಂದಿಸಬಹುದಿತ್ತು. ಕರ್ನಾಟಕದ ಆಡಳಿತದ ಚುಕ್ಕಾಣಿ ಹಿಡಿದ ಅವರು ನೀಡುವ ಒಳ್ಳೆಯ ಸಂದೇಶವಾಗುತ್ತಿತ್ತು. ಆದರೆ ನಮ್ಮ ಕರುನಾಡಿನ ಮುಖ್ಯಮಂತ್ರಿ ಕನ್ನಡದ ಕರುಳು ಹಿಂಡುತ್ತಿರುವ ಆಂಗ್ಲಮಾಧ್ಯಮಕ್ಕೆ ಶಕ್ತಿ ನೀಡುತ್ತಿರುವುದು ಎಂತಹ ವಿಪರ್ಯಾಸ! ಇದು ಎಡವಿದ್ದೇ ಅಲ್ಲವೇ?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಮ್ಮ ಮುಖ್ಯಮಂತ್ರಿ ಡಿ. ವಿ. ಸದಾನಂದ ಗೌಡರು (ಡಿವಿಎಸ್) ತಮ್ಮಿಂದ ತಪ್ಪುಗಳಾದಾಗ ಎಚ್ಚರಿಸಿ ಎಂದು ಭಾಷಣಗಳಲ್ಲಿ ಹೇಳುತ್ತಿರುವುದರಿಂದ ನಾನೀಗ ಆ ಕೆಲಸವನ್ನು ಮಾಡುತ್ತಿದ್ದೆೀನೆ. ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮದ ಶಾಲೆಯ ಬೆಳ್ಳಿಹಬ್ಬದಲ್ಲಿ ದೀಪ ಬೆಳಗಿಸಿದ ಅವರು ಮುಖ್ಯಮಂತ್ರಿ ಆಗಿರುವಷ್ಟು ಕಾಲ ತನ್ನ ತಿಂಗಳ ಸಂಬಳವನ್ನು ಆ ಶಾಲೆಗೆ ನೀಡುವುದಾಗಿ ಘೋಷಿಸಿದರು. ಜನರೆಲ್ಲಾ ಚಪ್ಪಾಳೆ ತಟ್ಟಿದರು. ಎಲ್ಲರಿಗೂ ಖುಷಿಯಾಯಿತು. ಆದರೆ ಇದು ಸರಿಯೇ ಎಂಬುದೀಗ ಪ್ರಶ್ನೆ.<br /> <br /> ಮುಖ್ಯಮಂತ್ರಿಗಳ ಸಂಬಳ ಎಷ್ಟೆಂದು ನನಗೆ ಗೊತ್ತಿಲ್ಲ. ಅದು ಎಷ್ಟೇ ಇರಲಿ, ಒಂದೇ ರೂಪಾಯಿ ಆಗಿರಲಿ. ಆದರೆ ಅವರಿಂದ ದೇಣಿಗೆ ಪಡೆಯುವುದೆಂದರೆ ಅದಕ್ಕೆ ಬೇರೆಯೇ ಗೌರವ ಇದೆ. ಇದೀಗ ಆ ಗೌರವವು ಒಂದು ಆಂಗ್ಲಮಾಧ್ಯಮ ಶಾಲೆಗೆ ಹೋಯಿತಲ್ಲಾ! <br /> <br /> ಇದು ಸರಿಯೇ? ಅದರ ಬದಲು ಅವರು ಅದೇ ವೇದಿಕೆಯಿಂದ ಅದೇ ಸಂಸ್ಥೆ ನಡೆಸುತ್ತಿರುವ `ವಿವೇಕಾನಂದ ಕನ್ನಡ ಮಾಧ್ಯಮ ಶಾಲೆಗೆ~ ಕೊಡುತ್ತೇನೆಂದಿದ್ದರೆ ಕನ್ನಡಿಗರೆಲ್ಲ ಆನಂದಿಸಬಹುದಿತ್ತು. ಕರ್ನಾಟಕದ ಆಡಳಿತದ ಚುಕ್ಕಾಣಿ ಹಿಡಿದ ಅವರು ನೀಡುವ ಒಳ್ಳೆಯ ಸಂದೇಶವಾಗುತ್ತಿತ್ತು. ಆದರೆ ನಮ್ಮ ಕರುನಾಡಿನ ಮುಖ್ಯಮಂತ್ರಿ ಕನ್ನಡದ ಕರುಳು ಹಿಂಡುತ್ತಿರುವ ಆಂಗ್ಲಮಾಧ್ಯಮಕ್ಕೆ ಶಕ್ತಿ ನೀಡುತ್ತಿರುವುದು ಎಂತಹ ವಿಪರ್ಯಾಸ! ಇದು ಎಡವಿದ್ದೇ ಅಲ್ಲವೇ?</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>