<p><strong>ಹೈದರಾಬಾದ್ (ಐಎಎನ್ಎಸ್): </strong>ಉತ್ತರಾಖಂಡ ಪ್ರವಾಹದಲ್ಲಿ ಸಿಲುಕಿದ್ದ ಆಂಧ್ರಪ್ರದೇಶದ ಯಾತ್ರಿಗಳಿಗಾಗಿ ತೆಲುಗು ದೇಶಂ ಪಕ್ಷ (ಟಿಡಿಪಿ) ವ್ಯವಸ್ಥೆ ಮಾಡಿದ್ದ ಬಾಡಿಗೆ ವಿಮಾನದಲ್ಲಿ ಸುಮಾರು 200 ಯಾತ್ರಿಗಳು ಸೋಮವಾರ ತಡರಾತ್ರಿ ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.<br /> <br /> ರಾಜಧಾನಿಗೆ ಬಂದಿಳಿದ ಯಾತ್ರಿಗಳನ್ನು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರ ಮಗ ಲೋಕೇಶ್ ಬರ ಮಾಡಿಕೊಂಡರು. ಅಲ್ಲದೆ, ನಿಲ್ದಾಣದಿಂದ ತಮ್ಮ ಸ್ವಂತ ಊರುಗಳಿಗೆ ಯಾತ್ರಿಗಳು ತೆರಳಲು ಪಕ್ಷದ ನಾಯಕರು ವಿಶೇಷ ಬಸ್ ವ್ಯವಸ್ಥೆ ಕೂಡ ಮಾಡಿದ್ದರು.<br /> <br /> `ಉತ್ತರಾಖಂಡದಿಂದ ರಾಜ್ಯದ ಯಾತ್ರಿಗಳು ಸುರಕ್ಷಿತವಾಗಿ ವಾಪಸ್ಸಾಗಲು ರಾಜ್ಯದ ಕಾಂಗ್ರೆಸ್ ಸರ್ಕಾರ ಸರಿಯಾಗಿ ಕ್ರಮ ಕೈಗೊಂಡಿಲ್ಲ' ಎಂದು ದೆಹಲಿಯಲ್ಲಿರುವ ಚಂದ್ರಬಾಬು ನಾಯ್ಡು ಟೀಕಿಸಿದ್ದಾರೆ.<br /> <br /> `ರಾಜ್ಯದಿಂದ ಯಾತ್ರೆ ಕೈಗೊಂಡಿದ್ದ 2,772 ಯಾತ್ರಿಕರಲ್ಲಿ 1,500 ಮಂದಿ ವಾಪಸ್ಸಾಗ್ದ್ದಿದಾರೆ. ಪ್ರವಾಹದಲ್ಲಿ 8 ಜನ ಮೃತಪಟಿರುವುದು ದೃಢಪಟ್ಟಿದ್ದು, 35 ಮಂದಿ ಕಾಣೆಯಾಗಿದ್ದಾರೆ. ಅಲ್ಲದೆ, 1000 ಯಾತ್ರಿಗಳು ಇನ್ನು ಉತ್ತರಾಖಂಡದಲ್ಲೇ ಸಿಲುಕಿಕೊಂಡಿದ್ದಾರೆ' ಎಂದು ಇಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಐಎಎನ್ಎಸ್): </strong>ಉತ್ತರಾಖಂಡ ಪ್ರವಾಹದಲ್ಲಿ ಸಿಲುಕಿದ್ದ ಆಂಧ್ರಪ್ರದೇಶದ ಯಾತ್ರಿಗಳಿಗಾಗಿ ತೆಲುಗು ದೇಶಂ ಪಕ್ಷ (ಟಿಡಿಪಿ) ವ್ಯವಸ್ಥೆ ಮಾಡಿದ್ದ ಬಾಡಿಗೆ ವಿಮಾನದಲ್ಲಿ ಸುಮಾರು 200 ಯಾತ್ರಿಗಳು ಸೋಮವಾರ ತಡರಾತ್ರಿ ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದರು.<br /> <br /> ರಾಜಧಾನಿಗೆ ಬಂದಿಳಿದ ಯಾತ್ರಿಗಳನ್ನು ಟಿಡಿಪಿ ಮುಖ್ಯಸ್ಥ ಎನ್. ಚಂದ್ರಬಾಬು ನಾಯ್ಡು ಅವರ ಮಗ ಲೋಕೇಶ್ ಬರ ಮಾಡಿಕೊಂಡರು. ಅಲ್ಲದೆ, ನಿಲ್ದಾಣದಿಂದ ತಮ್ಮ ಸ್ವಂತ ಊರುಗಳಿಗೆ ಯಾತ್ರಿಗಳು ತೆರಳಲು ಪಕ್ಷದ ನಾಯಕರು ವಿಶೇಷ ಬಸ್ ವ್ಯವಸ್ಥೆ ಕೂಡ ಮಾಡಿದ್ದರು.<br /> <br /> `ಉತ್ತರಾಖಂಡದಿಂದ ರಾಜ್ಯದ ಯಾತ್ರಿಗಳು ಸುರಕ್ಷಿತವಾಗಿ ವಾಪಸ್ಸಾಗಲು ರಾಜ್ಯದ ಕಾಂಗ್ರೆಸ್ ಸರ್ಕಾರ ಸರಿಯಾಗಿ ಕ್ರಮ ಕೈಗೊಂಡಿಲ್ಲ' ಎಂದು ದೆಹಲಿಯಲ್ಲಿರುವ ಚಂದ್ರಬಾಬು ನಾಯ್ಡು ಟೀಕಿಸಿದ್ದಾರೆ.<br /> <br /> `ರಾಜ್ಯದಿಂದ ಯಾತ್ರೆ ಕೈಗೊಂಡಿದ್ದ 2,772 ಯಾತ್ರಿಕರಲ್ಲಿ 1,500 ಮಂದಿ ವಾಪಸ್ಸಾಗ್ದ್ದಿದಾರೆ. ಪ್ರವಾಹದಲ್ಲಿ 8 ಜನ ಮೃತಪಟಿರುವುದು ದೃಢಪಟ್ಟಿದ್ದು, 35 ಮಂದಿ ಕಾಣೆಯಾಗಿದ್ದಾರೆ. ಅಲ್ಲದೆ, 1000 ಯಾತ್ರಿಗಳು ಇನ್ನು ಉತ್ತರಾಖಂಡದಲ್ಲೇ ಸಿಲುಕಿಕೊಂಡಿದ್ದಾರೆ' ಎಂದು ಇಲ್ಲಿನ ಅಧಿಕಾರಿಗಳು ತಿಳಿಸಿದ್ದಾರೆ.<br /> </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>