<p><strong>ತಿ.ನರಸೀಪುರ: </strong>ರಾಜ್ಯ ಸಂಸದರ ಹಾಗೂ ರಾಜ್ಯ ಸರ್ಕಾರದ ಕೃಷಿ ಸಚಿವರ ಬೇಜವಾಬ್ದಾರಿತನದಿಂದಾಗಿ ರಾಜ್ಯದ ರೈತರಿಗೆ ಸಿಗಬೇಕಾದ ರಸಗೊಬ್ಬರ ಆಂಧ್ರ ಪ್ರದೇಶದ ಪಾಲಾಗುತ್ತಿರುವುದನ್ನು ಕರ್ನಾಟಕ ರಾಜ್ಯ ರೈತ ಸಂಘ ಖಂಡಿಸಿದೆ.<br /> <br /> ರಾಜ್ಯದ ರೈತರಿಗೆ ರಸಗೊಬ್ಬರ ಸಾಕಾಗುತ್ತಿಲ್ಲ. ಇಂತಹ ವೇಳೆ ರಾಜ್ಯದ ಲೋಕಸಭಾ ಸದಸ್ಯರು ಹಾಗೂ ಕೃಷಿ ಸಚಿವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಹೆಚ್ಚಿನ ರಸಗೊಬ್ಬರ ತರಿಸಿ ರೈತರಿಗೆ ಸರಬರಾಜು ಮಾಡುವ ಬದಲು ನಿರ್ಲಕ್ಷ್ಯ ತೋರಿಸಿದ್ದಾರೆ. <br /> <br /> ಇದರ ಪರಿಣಾಮವಾಗಿ ನಮ್ಮ ರೈತರು ಈಗ ಸಂಕಷ್ಟಕ್ಕೀಡಾಗುವಂತಾಗಿದೆ. ಇದರಿಂದ ರಸಗೊಬ್ಬರದ ಕೊರತೆ ಉಂಟಾದಲ್ಲಿ ಅದರ ಬೆಲೆ ಕೂಡ ಹೆಚ್ಚಾಗುವುದು ರೈತರಿಗೆ ಮತ್ತಷ್ಟು ಹೊರೆ ಮಾಡಿದೆ. ಇದಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಅಧ್ಯಕ್ಷ ಆಲಗೂಡು ಮಹಾದೇವ್ ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ತಿ.ನರಸೀಪುರ: </strong>ರಾಜ್ಯ ಸಂಸದರ ಹಾಗೂ ರಾಜ್ಯ ಸರ್ಕಾರದ ಕೃಷಿ ಸಚಿವರ ಬೇಜವಾಬ್ದಾರಿತನದಿಂದಾಗಿ ರಾಜ್ಯದ ರೈತರಿಗೆ ಸಿಗಬೇಕಾದ ರಸಗೊಬ್ಬರ ಆಂಧ್ರ ಪ್ರದೇಶದ ಪಾಲಾಗುತ್ತಿರುವುದನ್ನು ಕರ್ನಾಟಕ ರಾಜ್ಯ ರೈತ ಸಂಘ ಖಂಡಿಸಿದೆ.<br /> <br /> ರಾಜ್ಯದ ರೈತರಿಗೆ ರಸಗೊಬ್ಬರ ಸಾಕಾಗುತ್ತಿಲ್ಲ. ಇಂತಹ ವೇಳೆ ರಾಜ್ಯದ ಲೋಕಸಭಾ ಸದಸ್ಯರು ಹಾಗೂ ಕೃಷಿ ಸಚಿವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ ಹೆಚ್ಚಿನ ರಸಗೊಬ್ಬರ ತರಿಸಿ ರೈತರಿಗೆ ಸರಬರಾಜು ಮಾಡುವ ಬದಲು ನಿರ್ಲಕ್ಷ್ಯ ತೋರಿಸಿದ್ದಾರೆ. <br /> <br /> ಇದರ ಪರಿಣಾಮವಾಗಿ ನಮ್ಮ ರೈತರು ಈಗ ಸಂಕಷ್ಟಕ್ಕೀಡಾಗುವಂತಾಗಿದೆ. ಇದರಿಂದ ರಸಗೊಬ್ಬರದ ಕೊರತೆ ಉಂಟಾದಲ್ಲಿ ಅದರ ಬೆಲೆ ಕೂಡ ಹೆಚ್ಚಾಗುವುದು ರೈತರಿಗೆ ಮತ್ತಷ್ಟು ಹೊರೆ ಮಾಡಿದೆ. ಇದಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಅಧ್ಯಕ್ಷ ಆಲಗೂಡು ಮಹಾದೇವ್ ಪತ್ರಿಕಾ ಹೇಳಿಕೆಯಲ್ಲಿ ಆರೋಪಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>