<p><strong>ಹೈದರಾಬಾದ್ (ಐಎಎನ್ಎಸ್): </strong>ಕರ್ನೂಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ದಿನಗಳಲ್ಲಿಯೇ 11 ಶಿಶುಗಳು ಮೃತಪಟ್ಟಿರುವುದರ ಬಗ್ಗೆ ಮುಖ್ಯಮಂತ್ರಿ ಎನ್. ಕಿರಣ್ ಕುಮಾರ್ ರೆಡ್ಡಿ ಶುಕ್ರವಾರ ತನಿಖೆಗೆ ಆದೇಶಿಸಿದ್ದಾರೆ. <br /> <br /> ಈ ಸರ್ಕಾರಿ ಆಸ್ಪತ್ರೆಯಲ್ಲಿ ಮೇಲ್ನೋಟಕ್ಕೆ ವೈದ್ಯಕೀಯ ನಿರ್ಲಕ್ಷತೆಯು ಕಂಡು ಬಂದಿದ್ದು, ಅವಶ್ಯ ಕ್ರಮಗಳನ್ನು ಕೈಗೊಳ್ಳಲು ಇಬ್ಬರು ಸಚಿವರನ್ನು ಈ ಆಸ್ಪತ್ರೆಗೆ ಕಳುಹಿಸಲಾಗಿದೆ.<br /> <br /> ಆಸ್ಪತ್ರೆಯಲ್ಲಿ ಆಮ್ಲಜನಕದ ಸರಬರಾಜು ವ್ಯವಸ್ಥೆಯಲ್ಲಿ ಕೊರೆತೆ ಕಂಡುಬಂದಿತ್ತು. ಈ ಹಿನ್ನೆಯಲ್ಲಿ ಗುರುವಾರ ಆಸ್ಪತ್ರೆಯಲ್ಲಿ ಏಳು ಶಿಶುಗಳು ಮೃತಪಟ್ಟಿವೆ. ನಂತರ ನಾಲ್ಕು ಶಿಶುಗಳು ಹಸುನೀಗಿವೆ. ಈ ಎಲ್ಲಾ ಶಿಶುಗಳು ಜನಿಸಿ ಒಂದರಿಂದ ಐದು ದಿನಗಳು ಮಾತ್ರ ಆಗಿದೆ ಎನ್ನಲಾಗಿದೆ. <br /> <br /> ಆಮ್ಲಜನಕ ಸರಬರಾಜು ಮಾಡುವ ಕೊಳವೆ ದುಸ್ಥಿತಿಯಿಂದ ಕೂಡಿದ್ದರಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇದಕ್ಕೆ ಆಸ್ಪತ್ರೆಯಲ್ಲಿ ಅಧಿಕಾರಿಗಳ ನಿರ್ಲಕ್ಷತೆಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. <br /> <br /> ‘ಘಟನೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ತಿಳಿಯಲು ಪರಿಣಿತ ಅಧಿಕಾರಿಗಳ ತಂಡವನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ~ ಎಂದು ಆರೋಗ್ಯ ಸಚಿವ ಡಿ.ಎಲ್. ರವೀಂದ್ರ ರೆಡ್ಡಿ ಅವರು ತಿಳಿಸಿದ್ದಾರೆ. <br /> <br /> ಈ ಅಚಾತುರ್ಯಕ್ಕೆ ವೈದ್ಯಕೀಯ ನಿರ್ಲಕ್ಷತೆ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹೈದರಾಬಾದ್ (ಐಎಎನ್ಎಸ್): </strong>ಕರ್ನೂಲ್ ಜಿಲ್ಲೆಯ ಸರ್ಕಾರಿ ಆಸ್ಪತ್ರೆಯಲ್ಲಿ ಎರಡು ದಿನಗಳಲ್ಲಿಯೇ 11 ಶಿಶುಗಳು ಮೃತಪಟ್ಟಿರುವುದರ ಬಗ್ಗೆ ಮುಖ್ಯಮಂತ್ರಿ ಎನ್. ಕಿರಣ್ ಕುಮಾರ್ ರೆಡ್ಡಿ ಶುಕ್ರವಾರ ತನಿಖೆಗೆ ಆದೇಶಿಸಿದ್ದಾರೆ. <br /> <br /> ಈ ಸರ್ಕಾರಿ ಆಸ್ಪತ್ರೆಯಲ್ಲಿ ಮೇಲ್ನೋಟಕ್ಕೆ ವೈದ್ಯಕೀಯ ನಿರ್ಲಕ್ಷತೆಯು ಕಂಡು ಬಂದಿದ್ದು, ಅವಶ್ಯ ಕ್ರಮಗಳನ್ನು ಕೈಗೊಳ್ಳಲು ಇಬ್ಬರು ಸಚಿವರನ್ನು ಈ ಆಸ್ಪತ್ರೆಗೆ ಕಳುಹಿಸಲಾಗಿದೆ.<br /> <br /> ಆಸ್ಪತ್ರೆಯಲ್ಲಿ ಆಮ್ಲಜನಕದ ಸರಬರಾಜು ವ್ಯವಸ್ಥೆಯಲ್ಲಿ ಕೊರೆತೆ ಕಂಡುಬಂದಿತ್ತು. ಈ ಹಿನ್ನೆಯಲ್ಲಿ ಗುರುವಾರ ಆಸ್ಪತ್ರೆಯಲ್ಲಿ ಏಳು ಶಿಶುಗಳು ಮೃತಪಟ್ಟಿವೆ. ನಂತರ ನಾಲ್ಕು ಶಿಶುಗಳು ಹಸುನೀಗಿವೆ. ಈ ಎಲ್ಲಾ ಶಿಶುಗಳು ಜನಿಸಿ ಒಂದರಿಂದ ಐದು ದಿನಗಳು ಮಾತ್ರ ಆಗಿದೆ ಎನ್ನಲಾಗಿದೆ. <br /> <br /> ಆಮ್ಲಜನಕ ಸರಬರಾಜು ಮಾಡುವ ಕೊಳವೆ ದುಸ್ಥಿತಿಯಿಂದ ಕೂಡಿದ್ದರಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಇದಕ್ಕೆ ಆಸ್ಪತ್ರೆಯಲ್ಲಿ ಅಧಿಕಾರಿಗಳ ನಿರ್ಲಕ್ಷತೆಯೇ ಕಾರಣ ಎಂಬುದು ಮೇಲ್ನೋಟಕ್ಕೆ ಕಂಡು ಬಂದಿದೆ. <br /> <br /> ‘ಘಟನೆಗೆ ಸಂಬಂಧಿಸಿದಂತೆ ಮಾಹಿತಿಯನ್ನು ತಿಳಿಯಲು ಪರಿಣಿತ ಅಧಿಕಾರಿಗಳ ತಂಡವನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ~ ಎಂದು ಆರೋಗ್ಯ ಸಚಿವ ಡಿ.ಎಲ್. ರವೀಂದ್ರ ರೆಡ್ಡಿ ಅವರು ತಿಳಿಸಿದ್ದಾರೆ. <br /> <br /> ಈ ಅಚಾತುರ್ಯಕ್ಕೆ ವೈದ್ಯಕೀಯ ನಿರ್ಲಕ್ಷತೆ ಕಂಡುಬಂದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮವನ್ನು ಕೈಗೊಳ್ಳಲಾಗುವುದು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>