<p>ಕೊಳ್ಳೇಗಾಲ: `ಉತ್ಸವಗಳು ಪ್ರತಿಯೊಬ್ಬರಲ್ಲೂ ನೆಮ್ಮದಿ ಮೂಡಿಸಲಿವೆ, ಸಂಬಂಧ ಬೆಸೆಯಲಿವೆ' ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಮಹದೇವಮ್ಮ ಅಭಿಪ್ರಾಯಪಟ್ಟರು.<br /> <br /> ಜಿಲ್ಲಾಡಳಿತ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ತಾಲ್ಲೂಕಿನ ಭರಚುಕ್ಕಿಯಲ್ಲಿ ಆಯೋಜಿಸಿದ್ದ ಜಲಪಾತೋತ್ಸವದ ಕೊನೆ ದಿನ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ಸದಾ ಜಂಜಾಟದಲ್ಲೇ ತೊಡಗಿರುವ ಮಹಿಳೆಯರು ಮತ್ತು ಮಕ್ಕಳು ಕುಟುಂಬ ಸಮೇತರಾಗಿ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಪ್ರಕೃತಿ ಸೌಂದರ್ಯ ಸವಿಯುವ ಮಹತ್ವದ ಅವಕಾಶ ಇದಾಗಿದೆ. ಪ್ರತಿವರ್ಷ ಈ ಉತ್ಸವವನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ನಡೆಸಲು ಜಿಲ್ಲಾಡಳಿತದ ಜೊತೆ ಜಿಲ್ಲೆಯ ಎಲ್ಲ ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದರು.<br /> ಮಕ್ಕಳು, ಯುವಕರು ಹಾಗೂ ಮಹಿಳೆಯರು ಗಾಳಿಪಟ ಹಾರಿಸುವ ಮೂಲಕ ಗಾಳಿಪಟ ಉತ್ಸವಕ್ಕೆ ಕಳೆತಂದರು. ಸೂಕ್ತ ಪ್ರಚಾರದ ಕೊರತೆ ಹಿನ್ನೆಲೆಯಲ್ಲಿ ಗಾಳಿಪಟ ಹಾರಾಟ ಕಡಿಮೆಯಾಗಿತ್ತು.<br /> ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದಾಕ್ಷಾಯಿಣಿ, ಮಾಜಿ ಅಧ್ಯಕ್ಷೆ ಶಶಿಕಲಾ, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಜನಾರ್ಧನ, ಉಪ ತಹಶೀಲ್ದಾರ್ ನಂದಕಿಶೋರ್, ಸತ್ತೇಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಅರುಣ್ಕುಮಾರ್, ಮುಖಂಡ ಯಡಕುರಿಯ ಮಹದೇವ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೊಳ್ಳೇಗಾಲ: `ಉತ್ಸವಗಳು ಪ್ರತಿಯೊಬ್ಬರಲ್ಲೂ ನೆಮ್ಮದಿ ಮೂಡಿಸಲಿವೆ, ಸಂಬಂಧ ಬೆಸೆಯಲಿವೆ' ಎಂದು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷೆ ಮಹದೇವಮ್ಮ ಅಭಿಪ್ರಾಯಪಟ್ಟರು.<br /> <br /> ಜಿಲ್ಲಾಡಳಿತ, ಪ್ರವಾಸೋದ್ಯಮ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ತಾಲ್ಲೂಕಿನ ಭರಚುಕ್ಕಿಯಲ್ಲಿ ಆಯೋಜಿಸಿದ್ದ ಜಲಪಾತೋತ್ಸವದ ಕೊನೆ ದಿನ ಗಾಳಿಪಟ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.<br /> <br /> ಸದಾ ಜಂಜಾಟದಲ್ಲೇ ತೊಡಗಿರುವ ಮಹಿಳೆಯರು ಮತ್ತು ಮಕ್ಕಳು ಕುಟುಂಬ ಸಮೇತರಾಗಿ ಇಂತಹ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಪ್ರಕೃತಿ ಸೌಂದರ್ಯ ಸವಿಯುವ ಮಹತ್ವದ ಅವಕಾಶ ಇದಾಗಿದೆ. ಪ್ರತಿವರ್ಷ ಈ ಉತ್ಸವವನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ನಡೆಸಲು ಜಿಲ್ಲಾಡಳಿತದ ಜೊತೆ ಜಿಲ್ಲೆಯ ಎಲ್ಲ ಸಂಘ ಸಂಸ್ಥೆಗಳು ಕೈಜೋಡಿಸಬೇಕು ಎಂದರು.<br /> ಮಕ್ಕಳು, ಯುವಕರು ಹಾಗೂ ಮಹಿಳೆಯರು ಗಾಳಿಪಟ ಹಾರಿಸುವ ಮೂಲಕ ಗಾಳಿಪಟ ಉತ್ಸವಕ್ಕೆ ಕಳೆತಂದರು. ಸೂಕ್ತ ಪ್ರಚಾರದ ಕೊರತೆ ಹಿನ್ನೆಲೆಯಲ್ಲಿ ಗಾಳಿಪಟ ಹಾರಾಟ ಕಡಿಮೆಯಾಗಿತ್ತು.<br /> ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ದಾಕ್ಷಾಯಿಣಿ, ಮಾಜಿ ಅಧ್ಯಕ್ಷೆ ಶಶಿಕಲಾ, ಪ್ರವಾಸೋದ್ಯಮ ಇಲಾಖೆ ಅಧಿಕಾರಿ ಜನಾರ್ಧನ, ಉಪ ತಹಶೀಲ್ದಾರ್ ನಂದಕಿಶೋರ್, ಸತ್ತೇಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷ ಅರುಣ್ಕುಮಾರ್, ಮುಖಂಡ ಯಡಕುರಿಯ ಮಹದೇವ ಇತರರು ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>