<p><strong>ಬಳ್ಳಾರಿ: </strong>ರಾಷ್ಟ್ರೀಯ ಅಗ್ನಿ ಶಮನ ಮತ್ತು ತುರ್ತು ನಿರ್ವಹಣಾ ದಿನಾಚರಣೆ ಅಂಗವಾಗಿ ಕವಾಯತು ಹಾಗೂ ಮುನ್ನೆಚ್ಚರಿಕೆ ಕುರಿತ ಪ್ರಾತ್ಯಕ್ಷಿಕೆ ಪ್ರದರ್ಶನ ಕಾರ್ಯಕ್ರಮವನ್ನು ಜಿಲ್ಲೆಯ ಅಗ್ನಿಶಾಮಕ ದಳದ ವತಿಯಿಂದ ಸ್ಥಳೀಯ ವಾರ್ಡ್ಲಾ ಜೂನಿಯರ್ ಕಾಲೇಜು ಆವರಣದಲ್ಲಿ ಶುಕ್ರವಾರ ಏರ್ಪಡಿಲಾಗಿತ್ತು.<br /> <br /> ಆಕಸ್ಮಿಕ ಆಪತ್ತು, ಅಗ್ನಿ ಅನಾಹುತ, ಅಪಘಾತ, ಪ್ರವಾಹ, ವಿಷಾನಿಲ ಸೋರಿಕೆ ಸಂದರ್ಭ ತುರ್ತಾಗಿ ನಿರ್ವಹಿಸಬೇಕಾದ ಕಾರ್ಯಗಳು, ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗೆ ಕುರಿತು ಅಣಕು ಪ್ರದರ್ಶನಗಳ ಮೂಲಕ ಪ್ರದರ್ಶಿಸಲಾಯಿತು.<br /> <br /> ಅಪಾಯದಿಂದ ತಪ್ಪಿಸಿಕೊಳ್ಳುವುದು, ರಕ್ಷಣೆ ಒದಗಿಸುವುದು, ತುರ್ತು ಸಂದರ್ಭಗಳಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬುದನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ವಿದ್ಯಾರ್ಥಿಗಳಿಗೆ ವಿವರಿಸಿದರು.<br /> <br /> ಎಲ್ಲ ಶಾಲೆಗಳ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಆರಓಗ್ಯ ಕವಚ- 108 ತಂಡವು ಹೇಗೆ ತುರ್ತು ಸಂದರ್ಭದಲ್ಲಿ ರಕ್ಷಣೆಗೆ ಮುಂದಾಗುತ್ತದೆ? ಎನ್ನವುದನ್ನೂ ಪ್ರಾತ್ಯಕ್ಷಿಕೆಯ ಮೂಲಕ ಪ್ರದರ್ಶಿಸಿದರು. ಪ್ರಾದೇಶಿಕ ಅಗ್ನಿ ಶಾಮಕ ಅಧಿಕಾರಿ ಬಿ.ಓಬಣ್ಣ ನೇತೃತ್ವ ವಹಿಸಿದ್ದರು.<br /> <br /> ಪ್ರಾಚಾರ್ಯ ವಿಕ್ಟರ್ ಇಮ್ಯಾನ್ಯುಲ್, ಉಪ ಪ್ರಾಚಾರ್ಯ ಸುಪ್ರಬಾ ರತ್ನಮನಿ, ಅಗ್ನಿಶಾಮಕ ಅಧಿಕಾರಿಗಳಾದ ಎಸ್. ರಮೇಶ್, ಜಿ. ಕೃಷ್ಣಸ್ವಾಮಿ, ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಳ್ಳಾರಿ: </strong>ರಾಷ್ಟ್ರೀಯ ಅಗ್ನಿ ಶಮನ ಮತ್ತು ತುರ್ತು ನಿರ್ವಹಣಾ ದಿನಾಚರಣೆ ಅಂಗವಾಗಿ ಕವಾಯತು ಹಾಗೂ ಮುನ್ನೆಚ್ಚರಿಕೆ ಕುರಿತ ಪ್ರಾತ್ಯಕ್ಷಿಕೆ ಪ್ರದರ್ಶನ ಕಾರ್ಯಕ್ರಮವನ್ನು ಜಿಲ್ಲೆಯ ಅಗ್ನಿಶಾಮಕ ದಳದ ವತಿಯಿಂದ ಸ್ಥಳೀಯ ವಾರ್ಡ್ಲಾ ಜೂನಿಯರ್ ಕಾಲೇಜು ಆವರಣದಲ್ಲಿ ಶುಕ್ರವಾರ ಏರ್ಪಡಿಲಾಗಿತ್ತು.<br /> <br /> ಆಕಸ್ಮಿಕ ಆಪತ್ತು, ಅಗ್ನಿ ಅನಾಹುತ, ಅಪಘಾತ, ಪ್ರವಾಹ, ವಿಷಾನಿಲ ಸೋರಿಕೆ ಸಂದರ್ಭ ತುರ್ತಾಗಿ ನಿರ್ವಹಿಸಬೇಕಾದ ಕಾರ್ಯಗಳು, ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗೆ ಕುರಿತು ಅಣಕು ಪ್ರದರ್ಶನಗಳ ಮೂಲಕ ಪ್ರದರ್ಶಿಸಲಾಯಿತು.<br /> <br /> ಅಪಾಯದಿಂದ ತಪ್ಪಿಸಿಕೊಳ್ಳುವುದು, ರಕ್ಷಣೆ ಒದಗಿಸುವುದು, ತುರ್ತು ಸಂದರ್ಭಗಳಲ್ಲಿ ಯಾರನ್ನು ಸಂಪರ್ಕಿಸಬೇಕು ಎಂಬುದನ್ನು ಅಗ್ನಿ ಶಾಮಕ ದಳದ ಸಿಬ್ಬಂದಿ ವಿದ್ಯಾರ್ಥಿಗಳಿಗೆ ವಿವರಿಸಿದರು.<br /> <br /> ಎಲ್ಲ ಶಾಲೆಗಳ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಆರಓಗ್ಯ ಕವಚ- 108 ತಂಡವು ಹೇಗೆ ತುರ್ತು ಸಂದರ್ಭದಲ್ಲಿ ರಕ್ಷಣೆಗೆ ಮುಂದಾಗುತ್ತದೆ? ಎನ್ನವುದನ್ನೂ ಪ್ರಾತ್ಯಕ್ಷಿಕೆಯ ಮೂಲಕ ಪ್ರದರ್ಶಿಸಿದರು. ಪ್ರಾದೇಶಿಕ ಅಗ್ನಿ ಶಾಮಕ ಅಧಿಕಾರಿ ಬಿ.ಓಬಣ್ಣ ನೇತೃತ್ವ ವಹಿಸಿದ್ದರು.<br /> <br /> ಪ್ರಾಚಾರ್ಯ ವಿಕ್ಟರ್ ಇಮ್ಯಾನ್ಯುಲ್, ಉಪ ಪ್ರಾಚಾರ್ಯ ಸುಪ್ರಬಾ ರತ್ನಮನಿ, ಅಗ್ನಿಶಾಮಕ ಅಧಿಕಾರಿಗಳಾದ ಎಸ್. ರಮೇಶ್, ಜಿ. ಕೃಷ್ಣಸ್ವಾಮಿ, ರವೀಂದ್ರ ಮತ್ತಿತರರು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>