<p>ಹಾತೂರು(ಎನ್.ಆರ್.ಪುರ): ತಾಲ್ಲೂಕಿನ ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾತೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಆಕಸ್ಮಿಕ ಬೆಂಕಿಯಿಂದ ಮನೆ ಸಂಪೂರ್ಣವಾಗಿ ಸುಟ್ಟು ₨ 28 ಲಕ್ಷ ನಷ್ಟವುಂಟಾಗಿರುವ ಘಟನೆ ನಡೆದಿದೆ.<br /> <br /> ಘಟನೆ ವಿವರ: ತಾಲ್ಲೂಕಿನ ಹಾತೂರು ಗ್ರಾಮದ ಕಸ್ತೂರಿಯಮ್ಮ ಅವರ ಮನೆ ಹಿಂಭಾಗದಲ್ಲಿ ರಾತ್ರಿ 10.30ರ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿ ಮಲಗಿದ್ದವರಿಗೆ ಆ ಸಮಯದಲ್ಲಿ ಎಚ್ಚರವಾಗಿದ್ದು ಕೂಡಲೇ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು, ಪ್ರಯೋಜನವಾಗಲಿಲ್ಲ.<br /> <br /> ಗ್ರಾಮಸ್ಥರೆಲ್ಲಾ ಸೇರಿಕೊಂಡು ಮನೆಯ ಸಾಮಾನುಗಳನ್ನು ಹೊರಹಾಕಿ ಬೆಂಕಿ ನಂದಿಸುವ ಪ್ರಯತ್ನ ಮುಂದುವರೆಸಿದರು. ಕೂಡಲೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ರವಾನಿಸಿದರೂ ಇಲಾಖೆ ಯವರು ಬರುವ ವೇಳೆಗೆ ಮನೆ ಸಂಪೂರ್ಣ ಸುಟ್ಟುಭಸ್ಮವಾಗಿತ್ತು.<br /> <br /> ಬೆಂಕಿಯ ಕೆನ್ನಾಲಗೆಗೆ ಮನೆಯಲ್ಲಿದ್ದ ಎರಡು ಅಡುಗೆ ಸಿಲಿಂಡರ್ಗಳು ಸ್ಫೋಟಗೊಂಡವು. ಇದರ ಪರಿಣಾಮ ಮನೆಯ ಮೇಲ್ಛಾವಣಿ , ಹೆಂಚುಗಳು ಪುಡಿಯಾಗಿವೆ. ಮನೆಯೊಳಗಿದ್ದ 25 ಕ್ವಿಂಟಾಲ್ ಅಡಿಕೆ, 20 ಕ್ವಿಂಟಾಲ್ ಚಿಪ್ಪೆಗೋಟು, 7.50 ಕ್ವಿಂಟಾಲ್ ಕಾಫಿ, ಟಿ.ವಿ, ಲ್ಯಾಪ್ ಟಾಪ್, ಗ್ರೈಂಡರ್, ಫ್ರಿಜ್, ಬೆಳ್ಳಿ, ಬಂಗಾರ, ಪಾತ್ರೆಗಳೆಲ್ಲವೂ ಸುಟ್ಟು ಕರಕಲಾಗಿದೆ.<br /> <br /> ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಸುಮಾರು ₨28ಲಕ್ಷ ನಷ್ಟದ ಅಂದಾಜು ಮಾಡಿದ್ದಾರೆ.<br /> ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಡಿ.ಎನ್. ಜೀವರಾಜ್ ಮಾತನಾಡಿ, ಬೆಂಕಿಯಿಂದ ಸಾಕಷ್ಟು ನಷ್ಟವಾಗಿರುವುದರಿಂದ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಅವರ ಪರಿಹಾರ ನಿಧಿಯಿಂದ ಹೆಚ್ಚಿನ ನೆರವು ಕೊಡಿಸಲು ಪ್ರಯತ್ನಿಸಲಾಗುವುದು ಎಂದರು.<br /> ತಹಶೀಲ್ದಾರ್ ಎಂ.ಲೋಕೇಶಪ್ಪ, ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷೆ ಎಚ್.ಟಿ.ರಾಜೇಂದ್ರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು.<br /> <br /> ಅಗ್ನಿಶಾಮಕ ಇಲಾಖೆಯ ಬಗ್ಗೆ ಗ್ರಾಮಸ್ಥರ ಆಕ್ರೋಶ : ಆಕಸ್ಮಿಕ ಬೆಂಕಿಯಿಂದ ಅನಾಹುತವಾದ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯವರು ವಾಹನದಲ್ಲಿ ನೀರನ್ನು ಪೂರ್ಣ ಭರ್ತಿ ಮಾಡಿಕೊಂಡು ಬಾರದೇ ಇದುದ್ದರಿಂದ ಬೆಂಕಿ ನಂದಿಸುವ ವೇಳೆ ನೀರು ಖಾಲಿಯಾಯಿತು. ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ ಮಾಡುವಂತೆ ಕೇಳಿದರು ಎಂದು ಗ್ರಾಮಸ್ಥರು ಆರೋಪಿಸಿದರು. ಈ ರೀತಿಯ ಅಗ್ನಿಶಾಮಕ ಸೇವೆಯಿಂದ ಯಾವುದೇ ಪ್ರಯೋಜವಾಗುವುದಿಲ್ಲ. ಸಂಬಂಧಪಟ್ಟವರು ವಾಹನದಲ್ಲಿ ಯಾವಾಗಲೂ ಪೂರ್ಣ ನೀರಿರುವಂತಹ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಹಾತೂರು(ಎನ್.ಆರ್.ಪುರ): ತಾಲ್ಲೂಕಿನ ಸೀತೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾತೂರು ಗ್ರಾಮದಲ್ಲಿ ಸೋಮವಾರ ರಾತ್ರಿ ಆಕಸ್ಮಿಕ ಬೆಂಕಿಯಿಂದ ಮನೆ ಸಂಪೂರ್ಣವಾಗಿ ಸುಟ್ಟು ₨ 28 ಲಕ್ಷ ನಷ್ಟವುಂಟಾಗಿರುವ ಘಟನೆ ನಡೆದಿದೆ.<br /> <br /> ಘಟನೆ ವಿವರ: ತಾಲ್ಲೂಕಿನ ಹಾತೂರು ಗ್ರಾಮದ ಕಸ್ತೂರಿಯಮ್ಮ ಅವರ ಮನೆ ಹಿಂಭಾಗದಲ್ಲಿ ರಾತ್ರಿ 10.30ರ ವೇಳೆ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಮನೆಯಲ್ಲಿ ಮಲಗಿದ್ದವರಿಗೆ ಆ ಸಮಯದಲ್ಲಿ ಎಚ್ಚರವಾಗಿದ್ದು ಕೂಡಲೇ ಬೆಂಕಿ ನಂದಿಸುವ ಪ್ರಯತ್ನ ಮಾಡಿದರು, ಪ್ರಯೋಜನವಾಗಲಿಲ್ಲ.<br /> <br /> ಗ್ರಾಮಸ್ಥರೆಲ್ಲಾ ಸೇರಿಕೊಂಡು ಮನೆಯ ಸಾಮಾನುಗಳನ್ನು ಹೊರಹಾಕಿ ಬೆಂಕಿ ನಂದಿಸುವ ಪ್ರಯತ್ನ ಮುಂದುವರೆಸಿದರು. ಕೂಡಲೇ ಅಗ್ನಿಶಾಮಕ ಇಲಾಖೆಗೆ ಮಾಹಿತಿ ರವಾನಿಸಿದರೂ ಇಲಾಖೆ ಯವರು ಬರುವ ವೇಳೆಗೆ ಮನೆ ಸಂಪೂರ್ಣ ಸುಟ್ಟುಭಸ್ಮವಾಗಿತ್ತು.<br /> <br /> ಬೆಂಕಿಯ ಕೆನ್ನಾಲಗೆಗೆ ಮನೆಯಲ್ಲಿದ್ದ ಎರಡು ಅಡುಗೆ ಸಿಲಿಂಡರ್ಗಳು ಸ್ಫೋಟಗೊಂಡವು. ಇದರ ಪರಿಣಾಮ ಮನೆಯ ಮೇಲ್ಛಾವಣಿ , ಹೆಂಚುಗಳು ಪುಡಿಯಾಗಿವೆ. ಮನೆಯೊಳಗಿದ್ದ 25 ಕ್ವಿಂಟಾಲ್ ಅಡಿಕೆ, 20 ಕ್ವಿಂಟಾಲ್ ಚಿಪ್ಪೆಗೋಟು, 7.50 ಕ್ವಿಂಟಾಲ್ ಕಾಫಿ, ಟಿ.ವಿ, ಲ್ಯಾಪ್ ಟಾಪ್, ಗ್ರೈಂಡರ್, ಫ್ರಿಜ್, ಬೆಳ್ಳಿ, ಬಂಗಾರ, ಪಾತ್ರೆಗಳೆಲ್ಲವೂ ಸುಟ್ಟು ಕರಕಲಾಗಿದೆ.<br /> <br /> ಸ್ಥಳಕ್ಕೆ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಭೇಟಿ ನೀಡಿ ಸುಮಾರು ₨28ಲಕ್ಷ ನಷ್ಟದ ಅಂದಾಜು ಮಾಡಿದ್ದಾರೆ.<br /> ಘಟನಾ ಸ್ಥಳಕ್ಕೆ ಭೇಟಿ ನೀಡಿದ ಶಾಸಕ ಡಿ.ಎನ್. ಜೀವರಾಜ್ ಮಾತನಾಡಿ, ಬೆಂಕಿಯಿಂದ ಸಾಕಷ್ಟು ನಷ್ಟವಾಗಿರುವುದರಿಂದ ಮುಖ್ಯಮಂತ್ರಿ ಗಳನ್ನು ಭೇಟಿ ಮಾಡಿ ಅವರ ಪರಿಹಾರ ನಿಧಿಯಿಂದ ಹೆಚ್ಚಿನ ನೆರವು ಕೊಡಿಸಲು ಪ್ರಯತ್ನಿಸಲಾಗುವುದು ಎಂದರು.<br /> ತಹಶೀಲ್ದಾರ್ ಎಂ.ಲೋಕೇಶಪ್ಪ, ಜೆಡಿಎಸ್ ರಾಜ್ಯ ಘಟಕದ ಉಪಾಧ್ಯಕ್ಷೆ ಎಚ್.ಟಿ.ರಾಜೇಂದ್ರ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದರು.<br /> <br /> ಅಗ್ನಿಶಾಮಕ ಇಲಾಖೆಯ ಬಗ್ಗೆ ಗ್ರಾಮಸ್ಥರ ಆಕ್ರೋಶ : ಆಕಸ್ಮಿಕ ಬೆಂಕಿಯಿಂದ ಅನಾಹುತವಾದ ಸ್ಥಳಕ್ಕೆ ಬಂದ ಅಗ್ನಿಶಾಮಕ ಇಲಾಖೆಯವರು ವಾಹನದಲ್ಲಿ ನೀರನ್ನು ಪೂರ್ಣ ಭರ್ತಿ ಮಾಡಿಕೊಂಡು ಬಾರದೇ ಇದುದ್ದರಿಂದ ಬೆಂಕಿ ನಂದಿಸುವ ವೇಳೆ ನೀರು ಖಾಲಿಯಾಯಿತು. ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ ಮಾಡುವಂತೆ ಕೇಳಿದರು ಎಂದು ಗ್ರಾಮಸ್ಥರು ಆರೋಪಿಸಿದರು. ಈ ರೀತಿಯ ಅಗ್ನಿಶಾಮಕ ಸೇವೆಯಿಂದ ಯಾವುದೇ ಪ್ರಯೋಜವಾಗುವುದಿಲ್ಲ. ಸಂಬಂಧಪಟ್ಟವರು ವಾಹನದಲ್ಲಿ ಯಾವಾಗಲೂ ಪೂರ್ಣ ನೀರಿರುವಂತಹ ವ್ಯವಸ್ಥೆ ಮಾಡಬೇಕು ಎಂದು ಆಗ್ರಹಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>