<p><strong>ಬೆಂಗಳೂರು: </strong>ಮಂಗಳೂರಿನಲ್ಲಿ ಇದೇ 21ರಂದು ಆಯೋಜಿಸಲಾಗಿರುವ ತಿರಂಗ ಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ಷಾ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.<br /> <br /> ಮಾಧ್ಯಮದವರ ಜತೆ ಮಂಗಳವಾರ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು. ಅದೇ ದಿನ ರಾಜ್ಯದಾದ್ಯಂತ ಗಿಡ ನೆಡುವ ಕಾರ್ಯಕ್ರಮವನ್ನು ಬಿಜೆಪಿ ಆಯೋಜಿಸಿದೆ ಎಂದರು.<br /> <br /> ಇದೇ 31ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಸಂಸದರ ಸಭೆ, ಸೆಪ್ಟೆಂಬರ್ 24 ಮತ್ತು 25ರಂದು ಕಲ್ಲಿಕೋಟೆಯಲ್ಲಿ ನಡೆಯಲಿರುವ ಪಕ್ಷದ ಸಮಾವೇಶಗಳಿಗೆ ರಾಜ್ಯದಿಂದ ಪ್ರತಿನಿಧಿಗಳು ಪಾಲ್ಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದರು.<br /> <br /> ಅಕ್ಟೋಬರ್ 3 ಮತ್ತು 4ರಂದು ಬೆಳಗಾವಿಯಲ್ಲಿ ರಾಜ್ಯ ಕಾರ್ಯಕಾರಿಣಿ, ಅಕ್ಟೋಬರ್ 21ರಿಂದ 23ರವರೆಗೆ ಪ್ರಶಿಕ್ಷಣ ಸಭೆಗಳ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.<br /> <br /> ತಿರಂಗಯಾತ್ರೆಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈವರೆಗೆ 206 ಸಭೆಗಳನ್ನು ನಡೆಸಲಾಗಿದೆ. ಇದೇ 23ರವರೆಗೆ ನಡೆಯಲಿರುವ ಯಾತ್ರೆಯ ಭಾಗವಾಗಿ ಒಂದು ಸಾವಿರ ಸಭೆಗಳನ್ನು ನಡೆಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಂಗಳೂರಿನಲ್ಲಿ ಇದೇ 21ರಂದು ಆಯೋಜಿಸಲಾಗಿರುವ ತಿರಂಗ ಯಾತ್ರೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ಷಾ ಪಾಲ್ಗೊಳ್ಳಲಿದ್ದಾರೆ ಎಂದು ಪಕ್ಷದ ರಾಜ್ಯ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.<br /> <br /> ಮಾಧ್ಯಮದವರ ಜತೆ ಮಂಗಳವಾರ ಮಾತನಾಡಿದ ಅವರು, ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವ ಕುರಿತು ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚಿಸಲಾಯಿತು. ಅದೇ ದಿನ ರಾಜ್ಯದಾದ್ಯಂತ ಗಿಡ ನೆಡುವ ಕಾರ್ಯಕ್ರಮವನ್ನು ಬಿಜೆಪಿ ಆಯೋಜಿಸಿದೆ ಎಂದರು.<br /> <br /> ಇದೇ 31ರಂದು ಹೊಸದಿಲ್ಲಿಯಲ್ಲಿ ನಡೆಯಲಿರುವ ಸಂಸದರ ಸಭೆ, ಸೆಪ್ಟೆಂಬರ್ 24 ಮತ್ತು 25ರಂದು ಕಲ್ಲಿಕೋಟೆಯಲ್ಲಿ ನಡೆಯಲಿರುವ ಪಕ್ಷದ ಸಮಾವೇಶಗಳಿಗೆ ರಾಜ್ಯದಿಂದ ಪ್ರತಿನಿಧಿಗಳು ಪಾಲ್ಗೊಳ್ಳುವ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು ಎಂದರು.<br /> <br /> ಅಕ್ಟೋಬರ್ 3 ಮತ್ತು 4ರಂದು ಬೆಳಗಾವಿಯಲ್ಲಿ ರಾಜ್ಯ ಕಾರ್ಯಕಾರಿಣಿ, ಅಕ್ಟೋಬರ್ 21ರಿಂದ 23ರವರೆಗೆ ಪ್ರಶಿಕ್ಷಣ ಸಭೆಗಳ ಸಿದ್ಧತೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಗಿದೆ ಎಂದು ಹೇಳಿದರು.<br /> <br /> ತಿರಂಗಯಾತ್ರೆಗೆ ರಾಜ್ಯದಾದ್ಯಂತ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಈವರೆಗೆ 206 ಸಭೆಗಳನ್ನು ನಡೆಸಲಾಗಿದೆ. ಇದೇ 23ರವರೆಗೆ ನಡೆಯಲಿರುವ ಯಾತ್ರೆಯ ಭಾಗವಾಗಿ ಒಂದು ಸಾವಿರ ಸಭೆಗಳನ್ನು ನಡೆಸುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>