<p><strong>ಬೆಂಗಳೂರು: </strong>ಭಾರತಕ್ಕೆ ವಿಶ್ವಕಪ್ ದೊರಕಿರುವ ಹಿನ್ನೆಲೆಯಲ್ಲಿ ತಂಡದ ಪ್ರತಿ ಆಟಗಾರರಿಗೆ ಬೆಂಗಳೂರಿನಲ್ಲಿ ನಿವೇಶನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಭಾರತಕ್ಕೆ ವಿಶ್ವಕಪ್ ತಂದುಕೊಟ್ಟ ಮಹೇಂದ್ರ ಸಿಂಗ್ ದೋನಿ ಪಡೆಗೆ ಅಭಿನಂದನೆ ಸಲ್ಲಿಸಿರುವ ಅವರು ಪ್ರತಿ ಆಟಗಾರರಿಗೂ ನಗರದಲ್ಲಿ 50/80 ಅಳತೆಯ ನಿವೇಶನ ನೀಡುವುದಾಗಿ ಪ್ರಕಟಿಸಿದ್ದಾರೆ. ‘ಮಹಿ’ ಬಳಗ ಫೈನಲ್ನಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಚಾಂಪಿಯನ್ ಆಗುತ್ತಿದ್ದಂತೆಯೇ ಸಿಎಂ ಅವರು ತಮ್ಮ ನಿರ್ಧಾರ ಪ್ರಕಟಿಸಿದರು. <br /> <br /> <strong>ಆಟಗಾರರಿಗೆ ಒಂದು ಕೋಟಿ</strong><br /> <strong>ಮುಂಬೈ:</strong> ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ವಿಶ್ವಕಪ್ ಗೆದ್ದ ತಂಡದ 15 ಆಟಗಾರರಿಗೆ ತಲಾ ಒಂದು ಕೋಟಿ ರೂಪಾಯಿ ನಗದು ಬಹುಮಾನ ಪ್ರಕಟಿಸಿದೆ. ಅದೇ ರೀತಿ ತಂಡದ ಸಹಾಯಕ ಸಿಬ್ಬಂದಿಗೆ ತಲಾ 50 ಲಕ್ಷ ರೂ ಮತ್ತು ಆಯ್ಕೆ ಸಮಿತಿ ಸದಸ್ಯರಿಗೆ ತಲಾ 25 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಭಾರತಕ್ಕೆ ವಿಶ್ವಕಪ್ ದೊರಕಿರುವ ಹಿನ್ನೆಲೆಯಲ್ಲಿ ತಂಡದ ಪ್ರತಿ ಆಟಗಾರರಿಗೆ ಬೆಂಗಳೂರಿನಲ್ಲಿ ನಿವೇಶನ ನೀಡುವುದಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಣೆ ಮಾಡಿದ್ದಾರೆ. ಭಾರತಕ್ಕೆ ವಿಶ್ವಕಪ್ ತಂದುಕೊಟ್ಟ ಮಹೇಂದ್ರ ಸಿಂಗ್ ದೋನಿ ಪಡೆಗೆ ಅಭಿನಂದನೆ ಸಲ್ಲಿಸಿರುವ ಅವರು ಪ್ರತಿ ಆಟಗಾರರಿಗೂ ನಗರದಲ್ಲಿ 50/80 ಅಳತೆಯ ನಿವೇಶನ ನೀಡುವುದಾಗಿ ಪ್ರಕಟಿಸಿದ್ದಾರೆ. ‘ಮಹಿ’ ಬಳಗ ಫೈನಲ್ನಲ್ಲಿ ಶ್ರೀಲಂಕಾ ತಂಡವನ್ನು ಮಣಿಸಿ ಚಾಂಪಿಯನ್ ಆಗುತ್ತಿದ್ದಂತೆಯೇ ಸಿಎಂ ಅವರು ತಮ್ಮ ನಿರ್ಧಾರ ಪ್ರಕಟಿಸಿದರು. <br /> <br /> <strong>ಆಟಗಾರರಿಗೆ ಒಂದು ಕೋಟಿ</strong><br /> <strong>ಮುಂಬೈ:</strong> ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯು ವಿಶ್ವಕಪ್ ಗೆದ್ದ ತಂಡದ 15 ಆಟಗಾರರಿಗೆ ತಲಾ ಒಂದು ಕೋಟಿ ರೂಪಾಯಿ ನಗದು ಬಹುಮಾನ ಪ್ರಕಟಿಸಿದೆ. ಅದೇ ರೀತಿ ತಂಡದ ಸಹಾಯಕ ಸಿಬ್ಬಂದಿಗೆ ತಲಾ 50 ಲಕ್ಷ ರೂ ಮತ್ತು ಆಯ್ಕೆ ಸಮಿತಿ ಸದಸ್ಯರಿಗೆ ತಲಾ 25 ಲಕ್ಷ ರೂಪಾಯಿ ನೀಡುವುದಾಗಿ ಘೋಷಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>