<p><strong>ಬೆಂಗಳೂರು:</strong> ಕೆಲ ಆಟೊ ಚಾಲಕರು ಪ್ರಯಾಣಿಕರೊಂದಿಗೆ ಸೂಕ್ತವಾಗಿ ವರ್ತಿಸುವುದಿಲ್ಲ ಎಂಬ ಆರೋಪಗಳು ಆಗಾಗ ಕೇಳಿ ಬರುತ್ತವೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದು ಸೇರಿದಂತೆ ಇತರ ವಿಷಯಗಳ ಬಗ್ಗೆ ತಿಳಿವಳಿಕೆ ನೀಡಲು ಸಂಚಾರ ಪೊಲೀಸ್ ವಿಭಾಗ ಮತ್ತು ಭಾರತೀಯ ಉದ್ಯೋಗ ತರಬೇತಿ ಕೇಂದ್ರ (ಐಐಜೆಟಿ)ದ ಸಹಯೋಗದಲ್ಲಿ ನಗರದಲ್ಲಿ ಭಾನುವಾರ ಕೌಶಲ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. <br /> <br /> ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ. ಸಲೀಂ ಮಾತನಾಡಿ, ಪ್ರಯಾಣಿಕರೊಂದಿಗೆ ಸೂಕ್ತ ಸಂವಾದ ಮತ್ತು ಭದ್ರತೆ ಆಟೊ ಚಾಲಕರ ಕಾರ್ಯನಿರ್ವಹಣೆಯಲ್ಲಿ ಮುಖ್ಯವಾದುದು. ಈ ಹಿನ್ನೆಲೆಯಲ್ಲಿ ಆಟೊ ಚಾಲಕರಿಗೆ ತರಬೇತಿ ಮುಖ್ಯವಾಗಿದೆ. ಇದಕ್ಕೆ ಖಾಸಗಿ ಸಂಸ್ಥೆಗಳು ಕೈಜೋಡಿಸುತ್ತಿರುವುದು ಉತ್ತಮ ಬೆಳವಣಿಗೆ. ಈ ತರಬೇತಿ ರಾಜ್ಯದ ಇತರ ಚಾಲಕರ ಸಂಘಗಳಿಗೆ ಮಾದರಿಯಾಗಲಿ ಎಂದು ಹಾರೈಸಿದರು.<br /> <br /> <strong>ಆಟೊ ಪ್ರೀಪೇಡ್ ಸೇವೆ:</strong> ತಿಂಗಳಿಗೊಂದರಂತೆ ನಗರದ ಹಲವೆಡೆ ಪ್ರೀಪೇಡ್ ಆಟೊ ನಿಲ್ದಾಣಗಳನ್ನು ಆರಂಭಿಲು ಉದ್ದೇಶಿಸಲಾಗಿದೆ. ಅಗತ್ಯ ಬಿದ್ದರೆ ಒಂದಕ್ಕಿಂತಲೂ ಹೆಚ್ಚು ನಿಲ್ದಾಣಗಳನ್ನು ಸ್ಥಾಪಿಸುವ ಯೋಜನೆಯೂ ಇದೆ ಎಂದು ಹೇಳಿದರು. <br /> <br /> ತರಬೇತಿಯಲ್ಲಿ ಭಾಗವಹಿಸಿದ್ದವರಿಗೆ ಚಾಲಕರಿಗೆ ಪ್ರಮಾಣಪತ್ರಗಳನ್ನೂ ವಿತರಿಸಿದರು. ಈ ಇಡೀ ತರಬೇತಿ ಶಿಬಿರದಲ್ಲಿ ಸಂಚಾರ ಪೊಲೀಸರು ತಮಗನ್ನಿಸಿದ್ದನ್ನು ಹೇಳಿದರೇ ಹೊರತು ಆಟೊ ಚಾಲಕರ ನೈಜ ಸಮಸ್ಯೆಗಳನ್ನು ಅರಿತುಕೊಳ್ಳುವ ಯತ್ನ ಮಾಡಲಿಲ್ಲ ಎಂಬುದು ಸಭೆಯ ನಂತರ ಆಟೊ ಚಾಲಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೆಲ ಆಟೊ ಚಾಲಕರು ಪ್ರಯಾಣಿಕರೊಂದಿಗೆ ಸೂಕ್ತವಾಗಿ ವರ್ತಿಸುವುದಿಲ್ಲ ಎಂಬ ಆರೋಪಗಳು ಆಗಾಗ ಕೇಳಿ ಬರುತ್ತವೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರೊಂದಿಗೆ ಹೇಗೆ ನಡೆದುಕೊಳ್ಳಬೇಕು ಎಂಬುದು ಸೇರಿದಂತೆ ಇತರ ವಿಷಯಗಳ ಬಗ್ಗೆ ತಿಳಿವಳಿಕೆ ನೀಡಲು ಸಂಚಾರ ಪೊಲೀಸ್ ವಿಭಾಗ ಮತ್ತು ಭಾರತೀಯ ಉದ್ಯೋಗ ತರಬೇತಿ ಕೇಂದ್ರ (ಐಐಜೆಟಿ)ದ ಸಹಯೋಗದಲ್ಲಿ ನಗರದಲ್ಲಿ ಭಾನುವಾರ ಕೌಶಲ ತರಬೇತಿ ಕಾರ್ಯಕ್ರಮ ಏರ್ಪಡಿಸಲಾಗಿತ್ತು. <br /> <br /> ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್ ಕಮಿಷನರ್ ಡಾ.ಎಂ.ಎ. ಸಲೀಂ ಮಾತನಾಡಿ, ಪ್ರಯಾಣಿಕರೊಂದಿಗೆ ಸೂಕ್ತ ಸಂವಾದ ಮತ್ತು ಭದ್ರತೆ ಆಟೊ ಚಾಲಕರ ಕಾರ್ಯನಿರ್ವಹಣೆಯಲ್ಲಿ ಮುಖ್ಯವಾದುದು. ಈ ಹಿನ್ನೆಲೆಯಲ್ಲಿ ಆಟೊ ಚಾಲಕರಿಗೆ ತರಬೇತಿ ಮುಖ್ಯವಾಗಿದೆ. ಇದಕ್ಕೆ ಖಾಸಗಿ ಸಂಸ್ಥೆಗಳು ಕೈಜೋಡಿಸುತ್ತಿರುವುದು ಉತ್ತಮ ಬೆಳವಣಿಗೆ. ಈ ತರಬೇತಿ ರಾಜ್ಯದ ಇತರ ಚಾಲಕರ ಸಂಘಗಳಿಗೆ ಮಾದರಿಯಾಗಲಿ ಎಂದು ಹಾರೈಸಿದರು.<br /> <br /> <strong>ಆಟೊ ಪ್ರೀಪೇಡ್ ಸೇವೆ:</strong> ತಿಂಗಳಿಗೊಂದರಂತೆ ನಗರದ ಹಲವೆಡೆ ಪ್ರೀಪೇಡ್ ಆಟೊ ನಿಲ್ದಾಣಗಳನ್ನು ಆರಂಭಿಲು ಉದ್ದೇಶಿಸಲಾಗಿದೆ. ಅಗತ್ಯ ಬಿದ್ದರೆ ಒಂದಕ್ಕಿಂತಲೂ ಹೆಚ್ಚು ನಿಲ್ದಾಣಗಳನ್ನು ಸ್ಥಾಪಿಸುವ ಯೋಜನೆಯೂ ಇದೆ ಎಂದು ಹೇಳಿದರು. <br /> <br /> ತರಬೇತಿಯಲ್ಲಿ ಭಾಗವಹಿಸಿದ್ದವರಿಗೆ ಚಾಲಕರಿಗೆ ಪ್ರಮಾಣಪತ್ರಗಳನ್ನೂ ವಿತರಿಸಿದರು. ಈ ಇಡೀ ತರಬೇತಿ ಶಿಬಿರದಲ್ಲಿ ಸಂಚಾರ ಪೊಲೀಸರು ತಮಗನ್ನಿಸಿದ್ದನ್ನು ಹೇಳಿದರೇ ಹೊರತು ಆಟೊ ಚಾಲಕರ ನೈಜ ಸಮಸ್ಯೆಗಳನ್ನು ಅರಿತುಕೊಳ್ಳುವ ಯತ್ನ ಮಾಡಲಿಲ್ಲ ಎಂಬುದು ಸಭೆಯ ನಂತರ ಆಟೊ ಚಾಲಕರೊಬ್ಬರು ಅಸಮಾಧಾನ ವ್ಯಕ್ತಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>