<p><strong>ಬೆಂಗಳೂರು:</strong> ನಗರ ವ್ಯಾಪ್ತಿಯಲ್ಲಿ ಸುರಕ್ಷಿತ ಪ್ರಯಾಣಕ್ಕಾಗಿ ಆಟೊ ರಿಕ್ಷಾಗಳಿಗೆ ಬದಲಾಗಿ ಟಾಟಾ ನ್ಯಾನೊ ಇಲ್ಲವೆ ಇದೇ ಮಾದರಿ ವಾಹನಗಳನ್ನು ಬಳಸುವ ಕುರಿತು ಆಲೋಚಿಸಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಎಂ.ಲಕ್ಷ್ಮಿನಾರಾಯಣ ಸಲಹೆ ನೀಡಿದ್ದಾರೆ.<br /> <br /> ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಭಾಭವನದಲ್ಲಿ ಸಾರಿಗೆ ಸಚಿವ ಆರ್. ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಥಮ ರಾಜ್ಯ ರಸ್ತೆ ಸುರಕ್ಷತಾ ಮಂಡಳಿ ಸಭೆಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ನ್ಯಾನೊದಂತಹ ವಾಹನಗಳನ್ನು ಖರೀದಿಸಿ ಸಾರಿಗೆ ಸೌಲಭ್ಯ ನೀಡಲು ಮುಂದೆ ಬರುವ ಅರ್ಜಿದಾರರಿಗೆ ಸರ್ಕಾರದಿಂದ ಸಹಾಯಧನ ನೀಡಲು ಪರಿಶೀಲಿಸಬೇಕು ಎಂದು ಅವರು ಸಲಹೆ ನೀಡಿದರು.<br /> <br /> ಮೋಟಾರು ವಾಹನ ಕಾಯ್ದೆ ೧೯೮೮ರ ನಿಯಮಗಳಲ್ಲಿ ಕಲ್ಪಿಸಲಾದ ಅವಕಾಶಗಳನ್ನು ಪರಿಶೀಲಿಸಿ ಕ್ರಮ ಜರುಗಿಸಬೇಕು ಎಂಬ ನಿರ್ಧಾರಕ್ಕೆ ಬರಲಾಯಿತು.<br /> <br /> ಹೆಚ್ಚುವರಿ ಪೋಲೀಸ್ ಮಹಾನಿರ್ದೇಶಕ (ಸಂಚಾರ) ಬಿ.ದಯಾನಂದ, ರಾಜ್ಯದಾದ್ಯಂತ ಪ್ರತಿಯೊಂದು ಜಿಲ್ಲೆಯಲ್ಲಿ ಕನಿಷ್ಠ ಒಂದು ವಾಹನ ಚಾಲನಾ ತರಬೇತಿ ಸಂಸ್ಥೆಯನ್ನು ಪ್ರಾರಂಭಿಸಿದಲ್ಲಿ ಚಾಲನಾ ತರಬೇತಿಗೆ ತುಂಬಾ ಉಪಯುಕ್ತ ಆಗುವುದು ಎಂದು ಸಲಹೆ ನೀಡಿದರು.<br /> <br /> ಈಗಾಗಲೇ ಸರ್ಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಮತ್ತು ಧಾರವಾಡದ ಗಾಮನಗಟ್ಟಿಯಲ್ಲಿ ಒಂದು ವಾಹನ ಚಾಲನಾ ತರಬೇತಿ ಸಂಸ್ಥೆ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಚಾಲನಾ ತರಬೇತಿ ಶಾಲೆಗಳನ್ನು ಪ್ರಾರಂಭಿಸಲು ಯೋಚಿಸಬಹುದು ಎಂದು ಸಭೆ ಅಭಿಪ್ರಾಯಪಟ್ಟಿತು.<br /> <br /> ರಾಜ್ಯದ ಎಲ್ಲಾ ಐ.ಟಿ.ಐ. ತರಬೇತಿ ಸಂಸ್ಥೆಗಳಲ್ಲಿ ವಾಹನ ಚಾಲನಾ ತರಬೇತಿಗೆ ಸಂಬಂಧಪಟ್ಟ ಪಠ್ಯವನ್ನು ಅಳವಡಿಸಿ ತರಬೇತಿ ನೀಡುವ ಕುರಿತೂ ಸಲಹೆಗಳು ಬಂದವು.<br /> <br /> ರಾಷ್ಟ್ರೀಯ ಹೆದ್ದಾರಿಗಳು ಮತ್ತು ರಾಜ್ಯ ಹೆದ್ದಾರಿಗಳ ಅಕ್ಕಪಕ್ಕಗಳಲ್ಲಿ ಇರುವ ಮದ್ಯ ಮಾರಾಟ ಮಳಿಗೆ ತೆರವುಗೊಳಿಸುವ ಬಗ್ಗೆ ಸಭೆಯಲ್ಲಿ ಸಲಹೆ ಸ್ವೀಕರಿಸಲಾಯಿತು. ಈಗಾಗಲೇ ಹೆದ್ದಾರಿಗಳ ಪಕ್ಕದಲ್ಲಿ ಇರುವ ಮದ್ಯದ ಅಂಗಡಿಗಳಿಗೆ ನೀಡಲಾಗಿರುವ ಲೈಸೆನ್ಸ್ಗಳನ್ನು ಜೂನ್-೨೦೧೪ರ ಜೂನ್ನಲ್ಲಿ ನವೀಕರಣಕ್ಕೆ ಪರಿಗಣಿಸಬಾರದು ಎಂಬ ಅಭಿಪ್ರಾಯ ವ್ಯಕ್ತವಾಯಿತು.<br /> <br /> ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಮುಂಬೈ ಮಹಾನಗರದಲ್ಲಿ ಇರುವಂತೆ ಪ್ರತ್ಯೇಕ ಬಸ್ ನಿಲ್ದಾಣಗಳನ್ನು ಗುರುತಿಸುವುದು ಮತ್ತು ಪ್ರಯಾಣಿಕರು ಕಡ್ಡಾಯವಾಗಿ ಬಸ್ಸಿನ ಹಿಂಬದಿ ಬಾಗಿಲಿನಿಂದ ಹತ್ತಿ ಮುಂಬದಿ ಬಾಗಿಲಿನಿಂದ ಇಳಿಯುವ ಕ್ರಮವನ್ನು ಜಾರಿಗೆ ತರಬೇಕು ಎಂದು ಸಲಹೆ ನೀಡಿದರು.<br /> <br /> ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ನಗರ ವ್ಯಾಪ್ತಿಯಲ್ಲಿ ಸುರಕ್ಷಿತ ಪ್ರಯಾಣಕ್ಕಾಗಿ ಆಟೊ ರಿಕ್ಷಾಗಳಿಗೆ ಬದಲಾಗಿ ಟಾಟಾ ನ್ಯಾನೊ ಇಲ್ಲವೆ ಇದೇ ಮಾದರಿ ವಾಹನಗಳನ್ನು ಬಳಸುವ ಕುರಿತು ಆಲೋಚಿಸಬೇಕು ಎಂದು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆಯುಕ್ತ ಎಂ.ಲಕ್ಷ್ಮಿನಾರಾಯಣ ಸಲಹೆ ನೀಡಿದ್ದಾರೆ.<br /> <br /> ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಸಭಾಭವನದಲ್ಲಿ ಸಾರಿಗೆ ಸಚಿವ ಆರ್. ರಾಮಲಿಂಗಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಪ್ರಥಮ ರಾಜ್ಯ ರಸ್ತೆ ಸುರಕ್ಷತಾ ಮಂಡಳಿ ಸಭೆಯಲ್ಲಿ ಅವರು ಈ ಅಭಿಪ್ರಾಯ ವ್ಯಕ್ತಪಡಿಸಿದರು.<br /> <br /> ನ್ಯಾನೊದಂತಹ ವಾಹನಗಳನ್ನು ಖರೀದಿಸಿ ಸಾರಿಗೆ ಸೌಲಭ್ಯ ನೀಡಲು ಮುಂದೆ ಬರುವ ಅರ್ಜಿದಾರರಿಗೆ ಸರ್ಕಾರದಿಂದ ಸಹಾಯಧನ ನೀಡಲು ಪರಿಶೀಲಿಸಬೇಕು ಎಂದು ಅವರು ಸಲಹೆ ನೀಡಿದರು.<br /> <br /> ಮೋಟಾರು ವಾಹನ ಕಾಯ್ದೆ ೧೯೮೮ರ ನಿಯಮಗಳಲ್ಲಿ ಕಲ್ಪಿಸಲಾದ ಅವಕಾಶಗಳನ್ನು ಪರಿಶೀಲಿಸಿ ಕ್ರಮ ಜರುಗಿಸಬೇಕು ಎಂಬ ನಿರ್ಧಾರಕ್ಕೆ ಬರಲಾಯಿತು.<br /> <br /> ಹೆಚ್ಚುವರಿ ಪೋಲೀಸ್ ಮಹಾನಿರ್ದೇಶಕ (ಸಂಚಾರ) ಬಿ.ದಯಾನಂದ, ರಾಜ್ಯದಾದ್ಯಂತ ಪ್ರತಿಯೊಂದು ಜಿಲ್ಲೆಯಲ್ಲಿ ಕನಿಷ್ಠ ಒಂದು ವಾಹನ ಚಾಲನಾ ತರಬೇತಿ ಸಂಸ್ಥೆಯನ್ನು ಪ್ರಾರಂಭಿಸಿದಲ್ಲಿ ಚಾಲನಾ ತರಬೇತಿಗೆ ತುಂಬಾ ಉಪಯುಕ್ತ ಆಗುವುದು ಎಂದು ಸಲಹೆ ನೀಡಿದರು.<br /> <br /> ಈಗಾಗಲೇ ಸರ್ಕಾರದಿಂದ ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಮತ್ತು ಧಾರವಾಡದ ಗಾಮನಗಟ್ಟಿಯಲ್ಲಿ ಒಂದು ವಾಹನ ಚಾಲನಾ ತರಬೇತಿ ಸಂಸ್ಥೆ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಚಾಲನಾ ತರಬೇತಿ ಶಾಲೆಗಳನ್ನು ಪ್ರಾರಂಭಿಸಲು ಯೋಚಿಸಬಹುದು ಎಂದು ಸಭೆ ಅಭಿಪ್ರಾಯಪಟ್ಟಿತು.<br /> <br /> ರಾಜ್ಯದ ಎಲ್ಲಾ ಐ.ಟಿ.ಐ. ತರಬೇತಿ ಸಂಸ್ಥೆಗಳಲ್ಲಿ ವಾಹನ ಚಾಲನಾ ತರಬೇತಿಗೆ ಸಂಬಂಧಪಟ್ಟ ಪಠ್ಯವನ್ನು ಅಳವಡಿಸಿ ತರಬೇತಿ ನೀಡುವ ಕುರಿತೂ ಸಲಹೆಗಳು ಬಂದವು.<br /> <br /> ರಾಷ್ಟ್ರೀಯ ಹೆದ್ದಾರಿಗಳು ಮತ್ತು ರಾಜ್ಯ ಹೆದ್ದಾರಿಗಳ ಅಕ್ಕಪಕ್ಕಗಳಲ್ಲಿ ಇರುವ ಮದ್ಯ ಮಾರಾಟ ಮಳಿಗೆ ತೆರವುಗೊಳಿಸುವ ಬಗ್ಗೆ ಸಭೆಯಲ್ಲಿ ಸಲಹೆ ಸ್ವೀಕರಿಸಲಾಯಿತು. ಈಗಾಗಲೇ ಹೆದ್ದಾರಿಗಳ ಪಕ್ಕದಲ್ಲಿ ಇರುವ ಮದ್ಯದ ಅಂಗಡಿಗಳಿಗೆ ನೀಡಲಾಗಿರುವ ಲೈಸೆನ್ಸ್ಗಳನ್ನು ಜೂನ್-೨೦೧೪ರ ಜೂನ್ನಲ್ಲಿ ನವೀಕರಣಕ್ಕೆ ಪರಿಗಣಿಸಬಾರದು ಎಂಬ ಅಭಿಪ್ರಾಯ ವ್ಯಕ್ತವಾಯಿತು.<br /> <br /> ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು, ಮುಂಬೈ ಮಹಾನಗರದಲ್ಲಿ ಇರುವಂತೆ ಪ್ರತ್ಯೇಕ ಬಸ್ ನಿಲ್ದಾಣಗಳನ್ನು ಗುರುತಿಸುವುದು ಮತ್ತು ಪ್ರಯಾಣಿಕರು ಕಡ್ಡಾಯವಾಗಿ ಬಸ್ಸಿನ ಹಿಂಬದಿ ಬಾಗಿಲಿನಿಂದ ಹತ್ತಿ ಮುಂಬದಿ ಬಾಗಿಲಿನಿಂದ ಇಳಿಯುವ ಕ್ರಮವನ್ನು ಜಾರಿಗೆ ತರಬೇಕು ಎಂದು ಸಲಹೆ ನೀಡಿದರು.<br /> <br /> ಈ ಕುರಿತು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಪೊಲೀಸ್ ಇಲಾಖೆ ಮತ್ತು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>